ಬೆಂಗಳೂರು: ಮಹಿಳಾ ಪ್ರೀಮಿಯರ್ ಕ್ರಿಕೆಟ್ ಲೀಗ್ನ(ಡಬ್ಲ್ಯುಪಿಎಲ್) ಚೊಚ್ಚಲ ಆವೃತ್ತಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳೆಯರ ತಂಡದ ನಾಯಕಿಯಾಗಿ ಸ್ಮೃತಿ ಮಂದಾನಾ ಅವರನ್ನು ನೇಮಕ ಮಾಡಲಾಗಿದೆ.
ಭಾರತ ಮಹಿಳೆಯರ ಕ್ರಿಕೆಟ್ ತಂಡದ ಉಪ ನಾಯಕಿ ಸ್ಮೃತಿ ಮಂದಾನಾ, ಇತ್ತೀಚೆಗೆ ನಡೆದ ಡಬ್ಲ್ಯುಪಿಎಲ್ ಹರಾಜಿನಲ್ಲಿ ₹3.40 ಕೋಟಿಗೆ ಆರ್ಸಿಬಿ ತಂಡ ಸೇರಿದ್ದರು.
ಫ್ರಾಂಚೈಸಿಯ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ವಿಡಿಯೊ ಸಂದೇಶದ ಮೂಲಕ ಈ ಘೋಷಣೆ ಮಾಡಲಾಗಿದೆ. ಆರ್ಸಿಬಿಯ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಮತ್ತು ಪುರುಷರ ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಸಂದೇಶ ನೀಡಿದ್ದಾರೆ.
‘ಡಬ್ಲ್ಯುಪಿಎಲ್ನಲ್ಲಿ ಅತ್ಯಂತ ವಿಶೇಷ ಆರ್ಸಿಬಿ ತಂಡವನ್ನು ಮತ್ತೊಂದು ನಂ 18 ಮುನ್ನಡೆಸುವ ಸಮಯವಿದು. ಹೌದು, ನಾವು ಮಾತನಾಡುತ್ತಿರುವುದು ಸ್ಮೃತಿ ಮಂದಾನಾ ಅವರ ಬಗ್ಗೆ. ಗೋ ಆನ್ ಸ್ಮೃತಿ ಮಂದಾನಾ. ನಿಮಗೆ ಜಗತ್ತಿನ ಅತ್ಯುತ್ತಮ ತಂಡ ಮತ್ತು ಅತ್ಯುತ್ತಮ ಅಭಿಮಾನಿಗಳ ಬೆಂಬಲವಿದೆ’ ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.
ಆರ್ಸಿಬಿ ಚೇರ್ಮನ್ ಪ್ರತ್ಮೇಶ್ ಮಿಶ್ರಾ ಅವರು, ‘ಸ್ಮೃತಿ ಅವರಿಗೆ ನಾವು ನಾಯಕತ್ವದ ಹೊಣೆ ನೀಡಿದ್ದೇವೆ. ಆರ್ಸಿಬಿಯನ್ನು ಅತ್ಯಂತ ಎತ್ತರಕ್ಕೆ ಕೊಂಡೊಯ್ಯುತ್ತಾರೆ ಎಂಬ ವಿಶ್ವಾಸವಿದೆ’ ಎಂದಿದ್ದಾರೆ.
ಕೋಟೆ ತಾಲ್ಲೂಕಿನ ಮುಸ್ಲಿಂ ಸಮುದಾಯದ ಪ್ರಥಮ ವೈದ್ಯೆ ಎಂಬ ಹೆಗ್ಗಳಿಕೆ ಹೊಂದಿದ ಜಹಾನ ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ…
ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…
ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…
ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…
ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…
ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…