ಕ್ರೀಡೆ

WPL: ಸೋಫಿ ಡಿವೈನ್ ಅಬ್ಬರಕ್ಕೆ ತತ್ತರಿಸಿದ ಗುಜರಾತ್‌, ಆರ್‌ಸಿಬಿ ಗೆ ಭರ್ಜರಿ ಜಯ

ಮುಂಬೈ: ಕೇವಲ ಒಂದು ರನ್‌ನಿಂದ ಶತಕ ವಂಚಿತರಾದ ಸೋಫಿ ಡಿವೈನ್ (99 ರನ್‌) ಅವರ ಅಬ್ಬರದ ಬ್ಯಾಟಿಂಗ್ ಬಲದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್‌) ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ಭರ್ಜರಿ ಜಯ ಗಳಿಸಿತು.

ಶನಿವಾರ ಬ್ರೆಬೊರ್ನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್‌ಸಿಬಿ 8 ವಿಕೆಟ್‌ಗಳಿಂದ ಗುಜರಾತ್ ಜೈಂಟ್ಸ್ ತಂಡವನ್ನು ಸೋಲಿಸಿ ಸತತ ಎರಡನೇ ಜಯ ದಾಖಲಿಸಿತು.

ಗುಜರಾತ್ ನೀಡಿದ 189 ರನ್‌ಗಳ ‌ಗುರಿ ಬೆನ್ನತ್ತಿದ ಆರ್‌ಸಿಬಿ 15.3 ಓವರ್‌ಗಳಲ್ಲಿ 2 ವಿಕೆಟ್‌ ‌ಕಳೆದುಕೊಂಡು ಗೆಲುವು ಸಾಧಿಸಿತು. ಸೋಫಿ ಹಾಗೂ ನಾಯಕಿ ಸ್ಮೃತಿ ಮಂದಾನ (37) ಮೊದಲ ವಿಕೆಟ್‌ ಜೊತೆಯಾಟದಲ್ಲಿ 125 ರನ್‌ ಗಳಿಸಿದರು. 36 ಎಸೆತಗಳನ್ನು ಎದುರಿಸಿದ ಸೋಫಿ ಅವರ ಇನಿಂಗ್ಸ್‌ನಲ್ಲಿ 9 ಬೌಂಡರಿ ಎಂಟು ಸಿಕ್ಸರ್ ಇದ್ದವು. ಇವರಿಬ್ಬರು ಔಟಾದ ಬಳಿಕ ಎಲಿಸ್‌ ಪೆರಿ (ಔಟಾಗದೆ 19) ಮತ್ತು ಹೀದರ್ ನೈಟ್‌ (ಔಟಾಗದೆ 22) ತಂಡವನ್ನು ಜಯದ ದಡ ಸೇರಿಸಿದರು.

ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಗುಜರಾತ್‌ ಆರಂಭಿಕ ಬ್ಯಾಟರ್ ಲಾರಾ ವೊಲ್ವಾರ್ಡ್ ಅಬ್ಬರದ ಅರ್ಧಶತಕದ ಬಲದಿಂದ (68; 42ಎ, 4X9, 6X2) 20 ಓವರ್‌ಗಳಲ್ಲಿ 4 ವಿಕೆಟ್‌ಗಳಿಗೆ 188 ರನ್ ಗಳಿಸಿತ್ತು. ಮೇಘನಾ (31), ಆ್ಯಷ್ಲಿ ಗಾರ್ಡನರ್(41) ತಂಡವು 150ರ ಗಡಿ ದಾಟಲು ಕಾರಣರಾದರು. ಆರ್‌ಸಿಬಿಯ ಶ್ರೇಯಾಂಕಾ ಪಾಟೀಲ 2 ವಿಕೆಟ್‌ ಗಳಿಸಿದರು.

ಸಂಕ್ಷಿಪ್ತ ಸ್ಕೋರು
ಗುಜರಾತ್ ಜೈಂಟ್ಸ್: 20 ಓವರ್‌ಗಳಲ್ಲಿ 4 ವಿಕೆಟ್‌ಗೆ 188 (ಲಾರಾ ವೊಲ್ವಾರ್ಡ್ 68, ಎಸ್‌. ಮೇಘನಾ 31, ಆ್ಯಷ್ಲಿ ಗಾರ್ಡನರ್ 41; ಸೋಫಿ ಡಿವೈನ್‌ 23ಕ್ಕೆ 1, ಪ್ರೀತಿ ಬೋಸ್‌ 23ಕ್ಕೆ 1, ಶ್ರೇಯಾಂಕಾ ಪಾಟೀಲ್ 17ಕ್ಕೆ 2).

ರಾಯಲ್ ಚಾಲೆಂಜರ್ಸ್ ಬೆಂಗಳೂರು: 15.3 ಓವರ್‌ಗಳಲ್ಲಿ 2 ವಿಕೆಟ್‌ಗೆ 189 (ಸ್ಮೃತಿ ಮಂದಾನ 37, ಸೋಫಿ ಡಿವೈನ್‌ 99, ಎಲಿಸ್ ಪೆರಿ ಔಟಾಗದೆ 19, ಹೀದರ್ ನೈಟ್‌ ಔಟಾಗದೆ 22; ಕಿಮ್‌ ಗರ್ತ್‌ 32ಕ್ಕೆ 1; ಸ್ನೇಹ್ ರಾಣಾ 25ಕ್ಕೆ 1).

ಫಲಿತಾಂಶ: ಆರ್‌ಸಿಬಿಗೆ 8 ವಿಕೆಟ್‌ ಜಯ

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

5 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

6 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

6 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

7 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

8 hours ago