ಕ್ರೀಡೆ

WPL: ಸೋಫಿ ಡಿವೈನ್ ಅಬ್ಬರಕ್ಕೆ ತತ್ತರಿಸಿದ ಗುಜರಾತ್‌, ಆರ್‌ಸಿಬಿ ಗೆ ಭರ್ಜರಿ ಜಯ

ಮುಂಬೈ: ಕೇವಲ ಒಂದು ರನ್‌ನಿಂದ ಶತಕ ವಂಚಿತರಾದ ಸೋಫಿ ಡಿವೈನ್ (99 ರನ್‌) ಅವರ ಅಬ್ಬರದ ಬ್ಯಾಟಿಂಗ್ ಬಲದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್‌) ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ಭರ್ಜರಿ ಜಯ ಗಳಿಸಿತು.

ಶನಿವಾರ ಬ್ರೆಬೊರ್ನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್‌ಸಿಬಿ 8 ವಿಕೆಟ್‌ಗಳಿಂದ ಗುಜರಾತ್ ಜೈಂಟ್ಸ್ ತಂಡವನ್ನು ಸೋಲಿಸಿ ಸತತ ಎರಡನೇ ಜಯ ದಾಖಲಿಸಿತು.

ಗುಜರಾತ್ ನೀಡಿದ 189 ರನ್‌ಗಳ ‌ಗುರಿ ಬೆನ್ನತ್ತಿದ ಆರ್‌ಸಿಬಿ 15.3 ಓವರ್‌ಗಳಲ್ಲಿ 2 ವಿಕೆಟ್‌ ‌ಕಳೆದುಕೊಂಡು ಗೆಲುವು ಸಾಧಿಸಿತು. ಸೋಫಿ ಹಾಗೂ ನಾಯಕಿ ಸ್ಮೃತಿ ಮಂದಾನ (37) ಮೊದಲ ವಿಕೆಟ್‌ ಜೊತೆಯಾಟದಲ್ಲಿ 125 ರನ್‌ ಗಳಿಸಿದರು. 36 ಎಸೆತಗಳನ್ನು ಎದುರಿಸಿದ ಸೋಫಿ ಅವರ ಇನಿಂಗ್ಸ್‌ನಲ್ಲಿ 9 ಬೌಂಡರಿ ಎಂಟು ಸಿಕ್ಸರ್ ಇದ್ದವು. ಇವರಿಬ್ಬರು ಔಟಾದ ಬಳಿಕ ಎಲಿಸ್‌ ಪೆರಿ (ಔಟಾಗದೆ 19) ಮತ್ತು ಹೀದರ್ ನೈಟ್‌ (ಔಟಾಗದೆ 22) ತಂಡವನ್ನು ಜಯದ ದಡ ಸೇರಿಸಿದರು.

ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಗುಜರಾತ್‌ ಆರಂಭಿಕ ಬ್ಯಾಟರ್ ಲಾರಾ ವೊಲ್ವಾರ್ಡ್ ಅಬ್ಬರದ ಅರ್ಧಶತಕದ ಬಲದಿಂದ (68; 42ಎ, 4X9, 6X2) 20 ಓವರ್‌ಗಳಲ್ಲಿ 4 ವಿಕೆಟ್‌ಗಳಿಗೆ 188 ರನ್ ಗಳಿಸಿತ್ತು. ಮೇಘನಾ (31), ಆ್ಯಷ್ಲಿ ಗಾರ್ಡನರ್(41) ತಂಡವು 150ರ ಗಡಿ ದಾಟಲು ಕಾರಣರಾದರು. ಆರ್‌ಸಿಬಿಯ ಶ್ರೇಯಾಂಕಾ ಪಾಟೀಲ 2 ವಿಕೆಟ್‌ ಗಳಿಸಿದರು.

ಸಂಕ್ಷಿಪ್ತ ಸ್ಕೋರು
ಗುಜರಾತ್ ಜೈಂಟ್ಸ್: 20 ಓವರ್‌ಗಳಲ್ಲಿ 4 ವಿಕೆಟ್‌ಗೆ 188 (ಲಾರಾ ವೊಲ್ವಾರ್ಡ್ 68, ಎಸ್‌. ಮೇಘನಾ 31, ಆ್ಯಷ್ಲಿ ಗಾರ್ಡನರ್ 41; ಸೋಫಿ ಡಿವೈನ್‌ 23ಕ್ಕೆ 1, ಪ್ರೀತಿ ಬೋಸ್‌ 23ಕ್ಕೆ 1, ಶ್ರೇಯಾಂಕಾ ಪಾಟೀಲ್ 17ಕ್ಕೆ 2).

ರಾಯಲ್ ಚಾಲೆಂಜರ್ಸ್ ಬೆಂಗಳೂರು: 15.3 ಓವರ್‌ಗಳಲ್ಲಿ 2 ವಿಕೆಟ್‌ಗೆ 189 (ಸ್ಮೃತಿ ಮಂದಾನ 37, ಸೋಫಿ ಡಿವೈನ್‌ 99, ಎಲಿಸ್ ಪೆರಿ ಔಟಾಗದೆ 19, ಹೀದರ್ ನೈಟ್‌ ಔಟಾಗದೆ 22; ಕಿಮ್‌ ಗರ್ತ್‌ 32ಕ್ಕೆ 1; ಸ್ನೇಹ್ ರಾಣಾ 25ಕ್ಕೆ 1).

ಫಲಿತಾಂಶ: ಆರ್‌ಸಿಬಿಗೆ 8 ವಿಕೆಟ್‌ ಜಯ

andolanait

Recent Posts

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ಶ್ರೀರಂಗಪಟ್ಟಣ ತಾಲ್ಲೂಕಿನ ನಗುವನಹಳ್ಳಿಯ ರಾಜೀವ್ ಗಾಂಧಿ ನಗರದಲ್ಲಿ ಬಸ್ ತಂಗುದಾಣವಿಲ್ಲದೆ ಸಾರ್ವಜನಿಕರು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲೇ ನಿಲ್ಲುವುದು…

3 hours ago

ಓದುಗರ ಪತ್ರ: ಜನರ ನಿರೀಕ್ಷೆಗಳಿಂದ ದೂರವಾಗುತ್ತಿರುವ ಶಾಸನಸಭೆಗಳು

ಲೋಕಸಭೆ ಮತ್ತು ವಿಧಾನಸಭೆ ಅಧಿವೇಶನಗಳು ಜನರ ಸಮಸ್ಯೆಗಳನ್ನು ಚರ್ಚಿಸಲು, ನೀತಿಗಳನ್ನು ರೂಪಿಸಲು ಹಾಗೂ ದೇಶ, ರಾಜ್ಯದ ಅಭಿವೃದ್ಧಿ ಕುರಿತು ಚರ್ಚಿಸಲು…

3 hours ago

ಓದುಗರ ಪತ್ರ: ಬೇಸರ ತರಿಸಿದ ಜನಪ್ರತಿನಿಧಿಗಳ ವರ್ತನೆ

ಇತ್ತೀಚೆಗೆ ನಡೆದ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಕೆಲವು ಸದಸ್ಯರು ನಡೆದುಕೊಂಡ ರೀತಿ ತಲೆ ತಗ್ಗಿಸುವಂತಿದೆ. ಅವರು ಬಳಸಿದ ಪದ…

3 hours ago

ಸೈನ್ಯ ಯುದ್ಧ ಮಾಡುತ್ತದೆ, ತೀರ್ಮಾನ ಸರ್ಕಾರ ಮಾಡಬೇಕು…!

ಅತ್ಯಂತ ಅಪಾಯಕಾರಿ ಪರಿಸ್ಥಿತಿಯೊಂದನ್ನು ನನಗೆ ಹಸ್ತಾಂತರಿಸಲಾಗಿತ್ತು: ನರವಣೆ ‘ಜವಾಬ್ದಾರಿಯಿಂದ ಸಂಪೂರ್ಣವಾಗಿ ದೂರವೇ ಉಳಿದಿದ್ದ ಪ್ರಧಾನಿ’ ‘ಇಂದಿರಾ ಗಾಂದಿ, ವಾಜಪೇಯಿ ಪ್ರಧಾನಿಗಳಾಗಿದ್ದಾಗ…

3 hours ago

ಇಂದು ಶನಿವಾರಸಂತೆ ಬಸ್ ನಿಲ್ದಾಣ ಉದ್ಘಾಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಜನತೆಯ ೩೦ ವರ್ಷಗಳ ಕನಸು ಕೊನೆಗೂ ನನಸು; ೧.೦೫ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನಿಲ್ದಾಣ ಸೋಮವಾರಪೇಟೆ:…

3 hours ago

ಮಡಹಳ್ಳಿ ಬಳಿಯ ಅಕ್ರಮ ಕ್ರಷರ್‌ನಿಂದ ಜನತೆ ಹೈರಾಣ

ಮಹೇಂದ್ರ ಹಸಗೂಲಿ ನಿಯಮಾವಳಿ ಪಾಲಿಸದ ಕ್ರಷರ್; ದೂಳು-ಶಬ್ದ ಮಾಲಿನ್ಯ ಆರೋಪ ಗುಂಡ್ಲುಪೇಟೆ: ತಾಲ್ಲೂಕಿನ ಮಡಹಳ್ಳಿ ಗ್ರಾಮದ ಬಳಿ ಇರುವ ಪಾರ್ವತಿ…

3 hours ago