ಕ್ರೀಡೆ

WPL: ಸೋಫಿ ಡಿವೈನ್ ಅಬ್ಬರಕ್ಕೆ ತತ್ತರಿಸಿದ ಗುಜರಾತ್‌, ಆರ್‌ಸಿಬಿ ಗೆ ಭರ್ಜರಿ ಜಯ

ಮುಂಬೈ: ಕೇವಲ ಒಂದು ರನ್‌ನಿಂದ ಶತಕ ವಂಚಿತರಾದ ಸೋಫಿ ಡಿವೈನ್ (99 ರನ್‌) ಅವರ ಅಬ್ಬರದ ಬ್ಯಾಟಿಂಗ್ ಬಲದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್‌) ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ಭರ್ಜರಿ ಜಯ ಗಳಿಸಿತು.

ಶನಿವಾರ ಬ್ರೆಬೊರ್ನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್‌ಸಿಬಿ 8 ವಿಕೆಟ್‌ಗಳಿಂದ ಗುಜರಾತ್ ಜೈಂಟ್ಸ್ ತಂಡವನ್ನು ಸೋಲಿಸಿ ಸತತ ಎರಡನೇ ಜಯ ದಾಖಲಿಸಿತು.

ಗುಜರಾತ್ ನೀಡಿದ 189 ರನ್‌ಗಳ ‌ಗುರಿ ಬೆನ್ನತ್ತಿದ ಆರ್‌ಸಿಬಿ 15.3 ಓವರ್‌ಗಳಲ್ಲಿ 2 ವಿಕೆಟ್‌ ‌ಕಳೆದುಕೊಂಡು ಗೆಲುವು ಸಾಧಿಸಿತು. ಸೋಫಿ ಹಾಗೂ ನಾಯಕಿ ಸ್ಮೃತಿ ಮಂದಾನ (37) ಮೊದಲ ವಿಕೆಟ್‌ ಜೊತೆಯಾಟದಲ್ಲಿ 125 ರನ್‌ ಗಳಿಸಿದರು. 36 ಎಸೆತಗಳನ್ನು ಎದುರಿಸಿದ ಸೋಫಿ ಅವರ ಇನಿಂಗ್ಸ್‌ನಲ್ಲಿ 9 ಬೌಂಡರಿ ಎಂಟು ಸಿಕ್ಸರ್ ಇದ್ದವು. ಇವರಿಬ್ಬರು ಔಟಾದ ಬಳಿಕ ಎಲಿಸ್‌ ಪೆರಿ (ಔಟಾಗದೆ 19) ಮತ್ತು ಹೀದರ್ ನೈಟ್‌ (ಔಟಾಗದೆ 22) ತಂಡವನ್ನು ಜಯದ ದಡ ಸೇರಿಸಿದರು.

ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಗುಜರಾತ್‌ ಆರಂಭಿಕ ಬ್ಯಾಟರ್ ಲಾರಾ ವೊಲ್ವಾರ್ಡ್ ಅಬ್ಬರದ ಅರ್ಧಶತಕದ ಬಲದಿಂದ (68; 42ಎ, 4X9, 6X2) 20 ಓವರ್‌ಗಳಲ್ಲಿ 4 ವಿಕೆಟ್‌ಗಳಿಗೆ 188 ರನ್ ಗಳಿಸಿತ್ತು. ಮೇಘನಾ (31), ಆ್ಯಷ್ಲಿ ಗಾರ್ಡನರ್(41) ತಂಡವು 150ರ ಗಡಿ ದಾಟಲು ಕಾರಣರಾದರು. ಆರ್‌ಸಿಬಿಯ ಶ್ರೇಯಾಂಕಾ ಪಾಟೀಲ 2 ವಿಕೆಟ್‌ ಗಳಿಸಿದರು.

ಸಂಕ್ಷಿಪ್ತ ಸ್ಕೋರು
ಗುಜರಾತ್ ಜೈಂಟ್ಸ್: 20 ಓವರ್‌ಗಳಲ್ಲಿ 4 ವಿಕೆಟ್‌ಗೆ 188 (ಲಾರಾ ವೊಲ್ವಾರ್ಡ್ 68, ಎಸ್‌. ಮೇಘನಾ 31, ಆ್ಯಷ್ಲಿ ಗಾರ್ಡನರ್ 41; ಸೋಫಿ ಡಿವೈನ್‌ 23ಕ್ಕೆ 1, ಪ್ರೀತಿ ಬೋಸ್‌ 23ಕ್ಕೆ 1, ಶ್ರೇಯಾಂಕಾ ಪಾಟೀಲ್ 17ಕ್ಕೆ 2).

ರಾಯಲ್ ಚಾಲೆಂಜರ್ಸ್ ಬೆಂಗಳೂರು: 15.3 ಓವರ್‌ಗಳಲ್ಲಿ 2 ವಿಕೆಟ್‌ಗೆ 189 (ಸ್ಮೃತಿ ಮಂದಾನ 37, ಸೋಫಿ ಡಿವೈನ್‌ 99, ಎಲಿಸ್ ಪೆರಿ ಔಟಾಗದೆ 19, ಹೀದರ್ ನೈಟ್‌ ಔಟಾಗದೆ 22; ಕಿಮ್‌ ಗರ್ತ್‌ 32ಕ್ಕೆ 1; ಸ್ನೇಹ್ ರಾಣಾ 25ಕ್ಕೆ 1).

ಫಲಿತಾಂಶ: ಆರ್‌ಸಿಬಿಗೆ 8 ವಿಕೆಟ್‌ ಜಯ

andolanait

Recent Posts

ಬೆಳಗಾವಿ ಚಳಿಗಾಲದ ಅಧಿವೇಶನ: ಮೊದಲಿಗೆ ಅಗಲಿದ ಗಣ್ಯರಿಗೆ ಸಂತಾಪ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇತ್ತೀಚೆಗೆ ನಿಧನರಾದ ಗಣ್ಯರಿಗೆ ಸಂತಾಪ ಸೂಚಿಸಿದರು. ವಿಧಾನಸಭೆಯಲ್ಲಿ ವಂದೇಮಾತರಂ ಗೀತೆ…

6 mins ago

ಮುಂದುವರಿದ ಇಂಡಿಗೋ ಸಮಸ್ಯೆ: ದೇಶಾದ್ಯಂತ 450ಕ್ಕೂ ಹೆಚ್ಚು ವಿಮಾನಗಳು ರದ್ದು

ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದ ಸಂಚಾರ ವ್ಯತ್ಯಯ, ವಿಮಾನ ವಿಳಂಬ ಸಮಸ್ಯೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಇಂದು 127…

15 mins ago

ನಟಿ ಮೇಲೆ ಅತ್ಯಾಚಾರ ಕೇಸ್‌: ಮಲಯಾಳಂ ಸ್ಟಾರ್‌ ನಟ ದಿಲೀಪ್‌ ಖುಲಾಸೆ

ಕೇರಳ: ಸುಮಾರು ಎಂಟು ವರ್ಷಗಳ ಕಾಲ ನಡೆದ ಕಾನೂನು ಹೋರಾಟದ ನಂತರ, 2017ರಲ್ಲಿ ನಟಿಯ ಮೇಲಿನ ಹಲ್ಲೆ ಪ್ರಕರಣದಲ್ಲಿ ಮಲಯಾಳಂ…

42 mins ago

ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋದ ನಟ ದರ್ಶನ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋಗಿದ್ದಾರೆ ಎನ್ನಲಾಗಿದೆ.…

47 mins ago

ಬೆಳಗಾವಿ ಅಧಿವೇಶನ ವಿರೋಧಿಸಿ ಎಂಇಎಸ್‌ ಪುಂಡರಿಂದ ಮಹಾಮೇಳಾವ್:‌ ಹಲವರು ಪೊಲೀಸ್‌ ವಶಕ್ಕೆ

ಬೆಳಗಾವಿ: ಬೆಳಗಾವಿ ಅಧಿವೇಶನ ವಿರೋಧಿಸಿ ಎಂಇಎಸ್‌ ಪುಂಡರು ಮಹಾಮೇಳಾವ್‌ ನಡೆಸಲು ಸಿದ್ಧತೆ ನಡೆಸಿದ್ದು, ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇಂದಿನಿಂದ…

58 mins ago

ಅಧಿವೇಶನದ ಮೊದಲ ದಿನವೇ ಡಿಸಿಎಂ ಡಿ.ಕೆ.ಶಿವಕುಮಾರ್‌ ಗೈರು

ಬೆಂಗಳೂರು: ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಅಧಿವೇಶನದ ಮೊದಲ ದಿನವೇ ಡಿಸಿಎಂ ಡಿ.ಕೆ.ಶಿವಕುಮಾರ್‌ ಗೈರಾಗಿದ್ದಾರೆ. ಇಂದಿನಿಂದ ಡಿಸೆಂಬರ್.‌19ರವರೆಗೆ ಅಧಿವೇಶನ…

2 hours ago