ಕ್ರೀಡೆ

WPL: ಸೋಫಿ ಡಿವೈನ್ ಅಬ್ಬರಕ್ಕೆ ತತ್ತರಿಸಿದ ಗುಜರಾತ್‌, ಆರ್‌ಸಿಬಿ ಗೆ ಭರ್ಜರಿ ಜಯ

ಮುಂಬೈ: ಕೇವಲ ಒಂದು ರನ್‌ನಿಂದ ಶತಕ ವಂಚಿತರಾದ ಸೋಫಿ ಡಿವೈನ್ (99 ರನ್‌) ಅವರ ಅಬ್ಬರದ ಬ್ಯಾಟಿಂಗ್ ಬಲದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್‌) ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ಭರ್ಜರಿ ಜಯ ಗಳಿಸಿತು.

ಶನಿವಾರ ಬ್ರೆಬೊರ್ನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್‌ಸಿಬಿ 8 ವಿಕೆಟ್‌ಗಳಿಂದ ಗುಜರಾತ್ ಜೈಂಟ್ಸ್ ತಂಡವನ್ನು ಸೋಲಿಸಿ ಸತತ ಎರಡನೇ ಜಯ ದಾಖಲಿಸಿತು.

ಗುಜರಾತ್ ನೀಡಿದ 189 ರನ್‌ಗಳ ‌ಗುರಿ ಬೆನ್ನತ್ತಿದ ಆರ್‌ಸಿಬಿ 15.3 ಓವರ್‌ಗಳಲ್ಲಿ 2 ವಿಕೆಟ್‌ ‌ಕಳೆದುಕೊಂಡು ಗೆಲುವು ಸಾಧಿಸಿತು. ಸೋಫಿ ಹಾಗೂ ನಾಯಕಿ ಸ್ಮೃತಿ ಮಂದಾನ (37) ಮೊದಲ ವಿಕೆಟ್‌ ಜೊತೆಯಾಟದಲ್ಲಿ 125 ರನ್‌ ಗಳಿಸಿದರು. 36 ಎಸೆತಗಳನ್ನು ಎದುರಿಸಿದ ಸೋಫಿ ಅವರ ಇನಿಂಗ್ಸ್‌ನಲ್ಲಿ 9 ಬೌಂಡರಿ ಎಂಟು ಸಿಕ್ಸರ್ ಇದ್ದವು. ಇವರಿಬ್ಬರು ಔಟಾದ ಬಳಿಕ ಎಲಿಸ್‌ ಪೆರಿ (ಔಟಾಗದೆ 19) ಮತ್ತು ಹೀದರ್ ನೈಟ್‌ (ಔಟಾಗದೆ 22) ತಂಡವನ್ನು ಜಯದ ದಡ ಸೇರಿಸಿದರು.

ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಗುಜರಾತ್‌ ಆರಂಭಿಕ ಬ್ಯಾಟರ್ ಲಾರಾ ವೊಲ್ವಾರ್ಡ್ ಅಬ್ಬರದ ಅರ್ಧಶತಕದ ಬಲದಿಂದ (68; 42ಎ, 4X9, 6X2) 20 ಓವರ್‌ಗಳಲ್ಲಿ 4 ವಿಕೆಟ್‌ಗಳಿಗೆ 188 ರನ್ ಗಳಿಸಿತ್ತು. ಮೇಘನಾ (31), ಆ್ಯಷ್ಲಿ ಗಾರ್ಡನರ್(41) ತಂಡವು 150ರ ಗಡಿ ದಾಟಲು ಕಾರಣರಾದರು. ಆರ್‌ಸಿಬಿಯ ಶ್ರೇಯಾಂಕಾ ಪಾಟೀಲ 2 ವಿಕೆಟ್‌ ಗಳಿಸಿದರು.

ಸಂಕ್ಷಿಪ್ತ ಸ್ಕೋರು
ಗುಜರಾತ್ ಜೈಂಟ್ಸ್: 20 ಓವರ್‌ಗಳಲ್ಲಿ 4 ವಿಕೆಟ್‌ಗೆ 188 (ಲಾರಾ ವೊಲ್ವಾರ್ಡ್ 68, ಎಸ್‌. ಮೇಘನಾ 31, ಆ್ಯಷ್ಲಿ ಗಾರ್ಡನರ್ 41; ಸೋಫಿ ಡಿವೈನ್‌ 23ಕ್ಕೆ 1, ಪ್ರೀತಿ ಬೋಸ್‌ 23ಕ್ಕೆ 1, ಶ್ರೇಯಾಂಕಾ ಪಾಟೀಲ್ 17ಕ್ಕೆ 2).

ರಾಯಲ್ ಚಾಲೆಂಜರ್ಸ್ ಬೆಂಗಳೂರು: 15.3 ಓವರ್‌ಗಳಲ್ಲಿ 2 ವಿಕೆಟ್‌ಗೆ 189 (ಸ್ಮೃತಿ ಮಂದಾನ 37, ಸೋಫಿ ಡಿವೈನ್‌ 99, ಎಲಿಸ್ ಪೆರಿ ಔಟಾಗದೆ 19, ಹೀದರ್ ನೈಟ್‌ ಔಟಾಗದೆ 22; ಕಿಮ್‌ ಗರ್ತ್‌ 32ಕ್ಕೆ 1; ಸ್ನೇಹ್ ರಾಣಾ 25ಕ್ಕೆ 1).

ಫಲಿತಾಂಶ: ಆರ್‌ಸಿಬಿಗೆ 8 ವಿಕೆಟ್‌ ಜಯ

andolanait

Recent Posts

ಹೊರ್ಮುಜ್‌ ಜಲಸಂಧಿ ಮುಕ್ತಗೊಳಿಸಿ ; ಇರಾನ್‌ಗೆ ಅಂತಿಮ ಎಚ್ಚರಿಕೆ ನೀಡಿದ ಟ್ರಂಪ್‌

ವಾಷಿಂಗ್ಟನ್‌ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್‌ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…

26 mins ago

ದೇಶದಲ್ಲೇ ಮೊದಲ ಮಕ್ಕಳ ಬೃಹತ್ ಆಸ್ಪತ್ರೆ ಬೆಂಗಳೂರಿನಲ್ಲಿ

ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…

1 hour ago

ಬೈಲಕುಪ್ಪೆ ಹಿಟ್‌ ಅಂಡ್‌ ರನ್‌ ಕೇಸ್‌ ; ರಸ್ತೆ ತಡೆದು ಪ್ರತಿಭಟನೆ ನಡೆಸಿದ ಸ್ಥಳೀಯರು

ಬೈಲಕುಪ್ಪೆ : ನಿನ್ನೆ ರಾತ್ರಿ ನಡೆದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ…

2 hours ago

ಬಹುಭಾಷಾ ನಟ ಪ್ರಕಾಶ್‌ ರಾಜ್‌ ತಾಯಿ ಸುವರ್ಣಲತಾ ನಿಧನ

ಹೈದರಬಾದ್‌ : ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ ಅವರು ನಿಧನರಾಗಿದ್ದಾರೆ. 85 ವರ್ಷದ ಸುವರ್ಣಲತಾ ಅವರು…

2 hours ago

ಧುರಂಧರ್-‌2 ನಟಿ ಸಾರಾ ಅರ್ಜುನ್‌ಗೆ ಫ್ಯಾನ್ಸ್‌ ಮುತ್ತಿಗೆ ; ಮಗಳಿಗೆ ಬಾಡಿ ಗಾರ್ಡ್‌ ಆದ ತಂದೆ

ಮುಂಬೈ : ‘ಧುರಂಧರ್-2’ ಚಿತ್ರದ ಯಶಸ್ವಿ ನಟಿ ಸಾರಾ ಅರ್ಜುನ್ ಅವರಿಗೆ ಸದ್ಯ ಖ್ಯಾತಿ ಹೆಚ್ಚಾಗಿದೆ. ಭಾನುವಾರ ಮುಂಬೈನ ವಾಂಖೆಡೆ…

2 hours ago

ತಮಿಳುನಾಡು ಚುನಾವಣೆ | ಸಿಎಂ ಸ್ಟಾಲಿನ್‌, ನಟ ವಿಜಯ್‌ ನಾಮತ್ರ ಸಲ್ಲಿಕೆ

ಚೆನ್ನೈ : ಏಪ್ರಿಲ್‌ 23 ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌ ಮತ್ತು ಪ್ರತಿಸ್ಪರ್ಧಿ ಟಿವಿಕೆ…

3 hours ago