ಕ್ರೀಡೆ

WPL: ಸೋಫಿ ಡಿವೈನ್ ಅಬ್ಬರಕ್ಕೆ ತತ್ತರಿಸಿದ ಗುಜರಾತ್‌, ಆರ್‌ಸಿಬಿ ಗೆ ಭರ್ಜರಿ ಜಯ

ಮುಂಬೈ: ಕೇವಲ ಒಂದು ರನ್‌ನಿಂದ ಶತಕ ವಂಚಿತರಾದ ಸೋಫಿ ಡಿವೈನ್ (99 ರನ್‌) ಅವರ ಅಬ್ಬರದ ಬ್ಯಾಟಿಂಗ್ ಬಲದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್‌) ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ಭರ್ಜರಿ ಜಯ ಗಳಿಸಿತು.

ಶನಿವಾರ ಬ್ರೆಬೊರ್ನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್‌ಸಿಬಿ 8 ವಿಕೆಟ್‌ಗಳಿಂದ ಗುಜರಾತ್ ಜೈಂಟ್ಸ್ ತಂಡವನ್ನು ಸೋಲಿಸಿ ಸತತ ಎರಡನೇ ಜಯ ದಾಖಲಿಸಿತು.

ಗುಜರಾತ್ ನೀಡಿದ 189 ರನ್‌ಗಳ ‌ಗುರಿ ಬೆನ್ನತ್ತಿದ ಆರ್‌ಸಿಬಿ 15.3 ಓವರ್‌ಗಳಲ್ಲಿ 2 ವಿಕೆಟ್‌ ‌ಕಳೆದುಕೊಂಡು ಗೆಲುವು ಸಾಧಿಸಿತು. ಸೋಫಿ ಹಾಗೂ ನಾಯಕಿ ಸ್ಮೃತಿ ಮಂದಾನ (37) ಮೊದಲ ವಿಕೆಟ್‌ ಜೊತೆಯಾಟದಲ್ಲಿ 125 ರನ್‌ ಗಳಿಸಿದರು. 36 ಎಸೆತಗಳನ್ನು ಎದುರಿಸಿದ ಸೋಫಿ ಅವರ ಇನಿಂಗ್ಸ್‌ನಲ್ಲಿ 9 ಬೌಂಡರಿ ಎಂಟು ಸಿಕ್ಸರ್ ಇದ್ದವು. ಇವರಿಬ್ಬರು ಔಟಾದ ಬಳಿಕ ಎಲಿಸ್‌ ಪೆರಿ (ಔಟಾಗದೆ 19) ಮತ್ತು ಹೀದರ್ ನೈಟ್‌ (ಔಟಾಗದೆ 22) ತಂಡವನ್ನು ಜಯದ ದಡ ಸೇರಿಸಿದರು.

ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಗುಜರಾತ್‌ ಆರಂಭಿಕ ಬ್ಯಾಟರ್ ಲಾರಾ ವೊಲ್ವಾರ್ಡ್ ಅಬ್ಬರದ ಅರ್ಧಶತಕದ ಬಲದಿಂದ (68; 42ಎ, 4X9, 6X2) 20 ಓವರ್‌ಗಳಲ್ಲಿ 4 ವಿಕೆಟ್‌ಗಳಿಗೆ 188 ರನ್ ಗಳಿಸಿತ್ತು. ಮೇಘನಾ (31), ಆ್ಯಷ್ಲಿ ಗಾರ್ಡನರ್(41) ತಂಡವು 150ರ ಗಡಿ ದಾಟಲು ಕಾರಣರಾದರು. ಆರ್‌ಸಿಬಿಯ ಶ್ರೇಯಾಂಕಾ ಪಾಟೀಲ 2 ವಿಕೆಟ್‌ ಗಳಿಸಿದರು.

ಸಂಕ್ಷಿಪ್ತ ಸ್ಕೋರು
ಗುಜರಾತ್ ಜೈಂಟ್ಸ್: 20 ಓವರ್‌ಗಳಲ್ಲಿ 4 ವಿಕೆಟ್‌ಗೆ 188 (ಲಾರಾ ವೊಲ್ವಾರ್ಡ್ 68, ಎಸ್‌. ಮೇಘನಾ 31, ಆ್ಯಷ್ಲಿ ಗಾರ್ಡನರ್ 41; ಸೋಫಿ ಡಿವೈನ್‌ 23ಕ್ಕೆ 1, ಪ್ರೀತಿ ಬೋಸ್‌ 23ಕ್ಕೆ 1, ಶ್ರೇಯಾಂಕಾ ಪಾಟೀಲ್ 17ಕ್ಕೆ 2).

ರಾಯಲ್ ಚಾಲೆಂಜರ್ಸ್ ಬೆಂಗಳೂರು: 15.3 ಓವರ್‌ಗಳಲ್ಲಿ 2 ವಿಕೆಟ್‌ಗೆ 189 (ಸ್ಮೃತಿ ಮಂದಾನ 37, ಸೋಫಿ ಡಿವೈನ್‌ 99, ಎಲಿಸ್ ಪೆರಿ ಔಟಾಗದೆ 19, ಹೀದರ್ ನೈಟ್‌ ಔಟಾಗದೆ 22; ಕಿಮ್‌ ಗರ್ತ್‌ 32ಕ್ಕೆ 1; ಸ್ನೇಹ್ ರಾಣಾ 25ಕ್ಕೆ 1).

ಫಲಿತಾಂಶ: ಆರ್‌ಸಿಬಿಗೆ 8 ವಿಕೆಟ್‌ ಜಯ

andolanait

Recent Posts

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

9 seconds ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

5 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

6 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

6 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

6 hours ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

6 hours ago