ಕ್ರೀಡೆ

WPL: ಸೋಫಿ ಡಿವೈನ್ ಅಬ್ಬರಕ್ಕೆ ತತ್ತರಿಸಿದ ಗುಜರಾತ್‌, ಆರ್‌ಸಿಬಿ ಗೆ ಭರ್ಜರಿ ಜಯ

ಮುಂಬೈ: ಕೇವಲ ಒಂದು ರನ್‌ನಿಂದ ಶತಕ ವಂಚಿತರಾದ ಸೋಫಿ ಡಿವೈನ್ (99 ರನ್‌) ಅವರ ಅಬ್ಬರದ ಬ್ಯಾಟಿಂಗ್ ಬಲದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್‌) ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ಭರ್ಜರಿ ಜಯ ಗಳಿಸಿತು.

ಶನಿವಾರ ಬ್ರೆಬೊರ್ನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್‌ಸಿಬಿ 8 ವಿಕೆಟ್‌ಗಳಿಂದ ಗುಜರಾತ್ ಜೈಂಟ್ಸ್ ತಂಡವನ್ನು ಸೋಲಿಸಿ ಸತತ ಎರಡನೇ ಜಯ ದಾಖಲಿಸಿತು.

ಗುಜರಾತ್ ನೀಡಿದ 189 ರನ್‌ಗಳ ‌ಗುರಿ ಬೆನ್ನತ್ತಿದ ಆರ್‌ಸಿಬಿ 15.3 ಓವರ್‌ಗಳಲ್ಲಿ 2 ವಿಕೆಟ್‌ ‌ಕಳೆದುಕೊಂಡು ಗೆಲುವು ಸಾಧಿಸಿತು. ಸೋಫಿ ಹಾಗೂ ನಾಯಕಿ ಸ್ಮೃತಿ ಮಂದಾನ (37) ಮೊದಲ ವಿಕೆಟ್‌ ಜೊತೆಯಾಟದಲ್ಲಿ 125 ರನ್‌ ಗಳಿಸಿದರು. 36 ಎಸೆತಗಳನ್ನು ಎದುರಿಸಿದ ಸೋಫಿ ಅವರ ಇನಿಂಗ್ಸ್‌ನಲ್ಲಿ 9 ಬೌಂಡರಿ ಎಂಟು ಸಿಕ್ಸರ್ ಇದ್ದವು. ಇವರಿಬ್ಬರು ಔಟಾದ ಬಳಿಕ ಎಲಿಸ್‌ ಪೆರಿ (ಔಟಾಗದೆ 19) ಮತ್ತು ಹೀದರ್ ನೈಟ್‌ (ಔಟಾಗದೆ 22) ತಂಡವನ್ನು ಜಯದ ದಡ ಸೇರಿಸಿದರು.

ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಗುಜರಾತ್‌ ಆರಂಭಿಕ ಬ್ಯಾಟರ್ ಲಾರಾ ವೊಲ್ವಾರ್ಡ್ ಅಬ್ಬರದ ಅರ್ಧಶತಕದ ಬಲದಿಂದ (68; 42ಎ, 4X9, 6X2) 20 ಓವರ್‌ಗಳಲ್ಲಿ 4 ವಿಕೆಟ್‌ಗಳಿಗೆ 188 ರನ್ ಗಳಿಸಿತ್ತು. ಮೇಘನಾ (31), ಆ್ಯಷ್ಲಿ ಗಾರ್ಡನರ್(41) ತಂಡವು 150ರ ಗಡಿ ದಾಟಲು ಕಾರಣರಾದರು. ಆರ್‌ಸಿಬಿಯ ಶ್ರೇಯಾಂಕಾ ಪಾಟೀಲ 2 ವಿಕೆಟ್‌ ಗಳಿಸಿದರು.

ಸಂಕ್ಷಿಪ್ತ ಸ್ಕೋರು
ಗುಜರಾತ್ ಜೈಂಟ್ಸ್: 20 ಓವರ್‌ಗಳಲ್ಲಿ 4 ವಿಕೆಟ್‌ಗೆ 188 (ಲಾರಾ ವೊಲ್ವಾರ್ಡ್ 68, ಎಸ್‌. ಮೇಘನಾ 31, ಆ್ಯಷ್ಲಿ ಗಾರ್ಡನರ್ 41; ಸೋಫಿ ಡಿವೈನ್‌ 23ಕ್ಕೆ 1, ಪ್ರೀತಿ ಬೋಸ್‌ 23ಕ್ಕೆ 1, ಶ್ರೇಯಾಂಕಾ ಪಾಟೀಲ್ 17ಕ್ಕೆ 2).

ರಾಯಲ್ ಚಾಲೆಂಜರ್ಸ್ ಬೆಂಗಳೂರು: 15.3 ಓವರ್‌ಗಳಲ್ಲಿ 2 ವಿಕೆಟ್‌ಗೆ 189 (ಸ್ಮೃತಿ ಮಂದಾನ 37, ಸೋಫಿ ಡಿವೈನ್‌ 99, ಎಲಿಸ್ ಪೆರಿ ಔಟಾಗದೆ 19, ಹೀದರ್ ನೈಟ್‌ ಔಟಾಗದೆ 22; ಕಿಮ್‌ ಗರ್ತ್‌ 32ಕ್ಕೆ 1; ಸ್ನೇಹ್ ರಾಣಾ 25ಕ್ಕೆ 1).

ಫಲಿತಾಂಶ: ಆರ್‌ಸಿಬಿಗೆ 8 ವಿಕೆಟ್‌ ಜಯ

andolanait

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

4 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

4 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

4 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

7 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

7 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

7 hours ago