ಕ್ರೀಡೆ

WPL: ಮುಂಬೈ ಅಜೇಯ ಓಟಕ್ಕೆ ಯು‍‍ಪಿ ವಾರಿಯರ್ಸ್ ಬ್ರೇಕ್‌

ಮುಂಬೈ: ಮಹಿಳಾ ಪ್ರೀಮಿಯರ್‌ ಲೀಗ್‌ (ಡಬ್ಲ್ಯುಪಿಎಲ್‌) ಟಿ20 ಕ್ರಿಕೆಟ್‌ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡದ ಸತತ ಐದು ಪಂದ್ಯಗಳ ಗೆಲುವಿನ ಓಟಕ್ಕೆ ಯುಪಿ ವಾರಿಯರ್ಸ್‌ ತಂಡದವರು ತಡೆ ಹಾಕಿದ್ದಾರೆ. ಡಿ.ವೈ.ಪಾಟೀಲ್ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಂದ್ಯವನ್ನು ವಾರಿಯರ್ಸ್‌ ತಂಡದವರು ಐದು ವಿಕೆಟ್‌ಗಳಿಂದ ಗೆದ್ದರು.

ಮೊದಲು ಬ್ಯಾಟ್‌ ಮಾಡಿದ ಹರ್ಮನ್‌ಪ್ರೀತ್‌ ಕೌರ್‌ ಬಳಗ ನಿಗದಿತ ಓವರ್‌ಗಳಲ್ಲಿ 127 ರನ್‌ ಗಳಿಸಿತು. ಹೆಯಲಿ ಮ್ಯಾಥ್ಯೂಸ್‌ (35, 30 ಎ., 4X1, 6X3), ಇಸಿ ವಾಂಗ್‌ (32 ರನ್‌, 19 ರನ್‌, 4X1, 6X1) ಮತ್ತು ಹರ್ಮನ್‌ಪ್ರೀತ್‌ (25) ಹೊರತುಪಡಿಸಿ ಉಳಿದ ಯಾರೂ ಎರಡಂಕಿಯ ಮೊತ್ತ ಗಳಿಸಲಿಲ್ಲ. ಗುರಿ ಬೆನ್ನಟ್ಟಿದ ವಾರಿಯರ್ಸ್‌ ಪರ ತಹ್ಲಿ ಮೆಕ್‌ಗ್ರಾ (38) ಮತ್ತು ಗ್ರೇಸ್‌ ಹ್ಯಾರಿಸ್‌ (39) ನಾಲ್ಕನೇ ವಿಕೆಟ್‌ಗೆ 44 ರನ್‌ ಸೇರಿಸಿದರು.

ಸಂಕ್ಷಿಪ್ತ ಸ್ಕೋರ್
ಮುಂಬೈ ಇಂಡಿಯನ್ಸ್‌: 20 ಓವರ್‌ಗಳಲ್ಲಿ 127 (ಹೆಯಲಿ ಮ್ಯಾಥ್ಯೂಸ್ 35, ಹರ್ಮನ್‌ಪ್ರೀತ್‌ ಕೌರ್‌ 25, ಇಸಿ ವಾಂಗ್‌ 32, ಸೋಫಿ ಎಕ್ಸೆಲ್‌ಸ್ಟನ್‌ 15ಕ್ಕೆ 3, ರಾಜೇಶ್ವರಿ ಗಾಯಕ ವಾಡ್ 16ಕ್ಕೆ 2, ದೀಪ್ತಿ ಶರ್ಮಾ 35ಕ್ಕೆ 2).

ಯುಪಿ ವಾರಿಯರ್ಸ್‌: 19.3 ಓವರ್‌ಗಳಲ್ಲಿ 5 ವಿಕೆಟ್‌ಗಳಿಗೆ 129 (ತಹ್ಲಿ ಮೆಕ್‌ಗ್ರಾ 38, ಗ್ರೇಸ್‌ ಹ್ಯಾರಿಸ್‌ 39;ಅಮೇಲಿ ಕೆರ್‌ 22ಕ್ಕೆ 2)

ಫಲಿತಾಂಶ: ಯುಪಿಗೆ 5 ವಿಕೆಟ್‌ ಗೆಲುವು

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

4 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

6 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

6 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

7 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

8 hours ago