ಕ್ರೀಡೆ

WPL: ಮುಂಬೈ ಅಜೇಯ ಓಟಕ್ಕೆ ಯು‍‍ಪಿ ವಾರಿಯರ್ಸ್ ಬ್ರೇಕ್‌

ಮುಂಬೈ: ಮಹಿಳಾ ಪ್ರೀಮಿಯರ್‌ ಲೀಗ್‌ (ಡಬ್ಲ್ಯುಪಿಎಲ್‌) ಟಿ20 ಕ್ರಿಕೆಟ್‌ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡದ ಸತತ ಐದು ಪಂದ್ಯಗಳ ಗೆಲುವಿನ ಓಟಕ್ಕೆ ಯುಪಿ ವಾರಿಯರ್ಸ್‌ ತಂಡದವರು ತಡೆ ಹಾಕಿದ್ದಾರೆ. ಡಿ.ವೈ.ಪಾಟೀಲ್ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಂದ್ಯವನ್ನು ವಾರಿಯರ್ಸ್‌ ತಂಡದವರು ಐದು ವಿಕೆಟ್‌ಗಳಿಂದ ಗೆದ್ದರು.

ಮೊದಲು ಬ್ಯಾಟ್‌ ಮಾಡಿದ ಹರ್ಮನ್‌ಪ್ರೀತ್‌ ಕೌರ್‌ ಬಳಗ ನಿಗದಿತ ಓವರ್‌ಗಳಲ್ಲಿ 127 ರನ್‌ ಗಳಿಸಿತು. ಹೆಯಲಿ ಮ್ಯಾಥ್ಯೂಸ್‌ (35, 30 ಎ., 4X1, 6X3), ಇಸಿ ವಾಂಗ್‌ (32 ರನ್‌, 19 ರನ್‌, 4X1, 6X1) ಮತ್ತು ಹರ್ಮನ್‌ಪ್ರೀತ್‌ (25) ಹೊರತುಪಡಿಸಿ ಉಳಿದ ಯಾರೂ ಎರಡಂಕಿಯ ಮೊತ್ತ ಗಳಿಸಲಿಲ್ಲ. ಗುರಿ ಬೆನ್ನಟ್ಟಿದ ವಾರಿಯರ್ಸ್‌ ಪರ ತಹ್ಲಿ ಮೆಕ್‌ಗ್ರಾ (38) ಮತ್ತು ಗ್ರೇಸ್‌ ಹ್ಯಾರಿಸ್‌ (39) ನಾಲ್ಕನೇ ವಿಕೆಟ್‌ಗೆ 44 ರನ್‌ ಸೇರಿಸಿದರು.

ಸಂಕ್ಷಿಪ್ತ ಸ್ಕೋರ್
ಮುಂಬೈ ಇಂಡಿಯನ್ಸ್‌: 20 ಓವರ್‌ಗಳಲ್ಲಿ 127 (ಹೆಯಲಿ ಮ್ಯಾಥ್ಯೂಸ್ 35, ಹರ್ಮನ್‌ಪ್ರೀತ್‌ ಕೌರ್‌ 25, ಇಸಿ ವಾಂಗ್‌ 32, ಸೋಫಿ ಎಕ್ಸೆಲ್‌ಸ್ಟನ್‌ 15ಕ್ಕೆ 3, ರಾಜೇಶ್ವರಿ ಗಾಯಕ ವಾಡ್ 16ಕ್ಕೆ 2, ದೀಪ್ತಿ ಶರ್ಮಾ 35ಕ್ಕೆ 2).

ಯುಪಿ ವಾರಿಯರ್ಸ್‌: 19.3 ಓವರ್‌ಗಳಲ್ಲಿ 5 ವಿಕೆಟ್‌ಗಳಿಗೆ 129 (ತಹ್ಲಿ ಮೆಕ್‌ಗ್ರಾ 38, ಗ್ರೇಸ್‌ ಹ್ಯಾರಿಸ್‌ 39;ಅಮೇಲಿ ಕೆರ್‌ 22ಕ್ಕೆ 2)

ಫಲಿತಾಂಶ: ಯುಪಿಗೆ 5 ವಿಕೆಟ್‌ ಗೆಲುವು

andolanait

Recent Posts

ಹನೂರು| ಮೇಕೆ ಮೇಲೆ ಚಿರತೆ ದಾಳಿ: ಸ್ಥಳೀಯರಲ್ಲಿ ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…

1 hour ago

ಮಲೆ ಮಹದೇಶ್ವರನ ಹುಂಡಿಯಲ್ಲಿ 2.16 ಕೋಟಿ ರೂ. ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…

2 hours ago

ನೀಟ್‌ ಪರೀಕ್ಷೆ ನಡೆಸುವ ಅಧಿಕಾರ ಆಯಾಯ ರಾಜ್ಯಗಳಿಗೆ ನೀಡಲಿ: ಸಿಎಂ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿಇಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.…

2 hours ago

ಎಬೋಲಾಗೆ 136 ಮಂದಿ ಬಲಿ: WHO ಕಳವಳ

ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ…

3 hours ago

ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ…

3 hours ago

ಶೃಂಗೇರಿ ಅಂಚೆ ಮತ ಮರು ಎಣಿಕೆ ಪ್ರಕರಣ: ಯಥಾಸ್ಥಿತಿ ಮುಂದುವರಿಸಲು ಸುಪ್ರೀಂ ಸೂಚನೆ

ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…

3 hours ago