ಕ್ರೀಡೆ

WPL: ಮುಂಬೈ ಅಜೇಯ ಓಟಕ್ಕೆ ಯು‍‍ಪಿ ವಾರಿಯರ್ಸ್ ಬ್ರೇಕ್‌

ಮುಂಬೈ: ಮಹಿಳಾ ಪ್ರೀಮಿಯರ್‌ ಲೀಗ್‌ (ಡಬ್ಲ್ಯುಪಿಎಲ್‌) ಟಿ20 ಕ್ರಿಕೆಟ್‌ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡದ ಸತತ ಐದು ಪಂದ್ಯಗಳ ಗೆಲುವಿನ ಓಟಕ್ಕೆ ಯುಪಿ ವಾರಿಯರ್ಸ್‌ ತಂಡದವರು ತಡೆ ಹಾಕಿದ್ದಾರೆ. ಡಿ.ವೈ.ಪಾಟೀಲ್ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಂದ್ಯವನ್ನು ವಾರಿಯರ್ಸ್‌ ತಂಡದವರು ಐದು ವಿಕೆಟ್‌ಗಳಿಂದ ಗೆದ್ದರು.

ಮೊದಲು ಬ್ಯಾಟ್‌ ಮಾಡಿದ ಹರ್ಮನ್‌ಪ್ರೀತ್‌ ಕೌರ್‌ ಬಳಗ ನಿಗದಿತ ಓವರ್‌ಗಳಲ್ಲಿ 127 ರನ್‌ ಗಳಿಸಿತು. ಹೆಯಲಿ ಮ್ಯಾಥ್ಯೂಸ್‌ (35, 30 ಎ., 4X1, 6X3), ಇಸಿ ವಾಂಗ್‌ (32 ರನ್‌, 19 ರನ್‌, 4X1, 6X1) ಮತ್ತು ಹರ್ಮನ್‌ಪ್ರೀತ್‌ (25) ಹೊರತುಪಡಿಸಿ ಉಳಿದ ಯಾರೂ ಎರಡಂಕಿಯ ಮೊತ್ತ ಗಳಿಸಲಿಲ್ಲ. ಗುರಿ ಬೆನ್ನಟ್ಟಿದ ವಾರಿಯರ್ಸ್‌ ಪರ ತಹ್ಲಿ ಮೆಕ್‌ಗ್ರಾ (38) ಮತ್ತು ಗ್ರೇಸ್‌ ಹ್ಯಾರಿಸ್‌ (39) ನಾಲ್ಕನೇ ವಿಕೆಟ್‌ಗೆ 44 ರನ್‌ ಸೇರಿಸಿದರು.

ಸಂಕ್ಷಿಪ್ತ ಸ್ಕೋರ್
ಮುಂಬೈ ಇಂಡಿಯನ್ಸ್‌: 20 ಓವರ್‌ಗಳಲ್ಲಿ 127 (ಹೆಯಲಿ ಮ್ಯಾಥ್ಯೂಸ್ 35, ಹರ್ಮನ್‌ಪ್ರೀತ್‌ ಕೌರ್‌ 25, ಇಸಿ ವಾಂಗ್‌ 32, ಸೋಫಿ ಎಕ್ಸೆಲ್‌ಸ್ಟನ್‌ 15ಕ್ಕೆ 3, ರಾಜೇಶ್ವರಿ ಗಾಯಕ ವಾಡ್ 16ಕ್ಕೆ 2, ದೀಪ್ತಿ ಶರ್ಮಾ 35ಕ್ಕೆ 2).

ಯುಪಿ ವಾರಿಯರ್ಸ್‌: 19.3 ಓವರ್‌ಗಳಲ್ಲಿ 5 ವಿಕೆಟ್‌ಗಳಿಗೆ 129 (ತಹ್ಲಿ ಮೆಕ್‌ಗ್ರಾ 38, ಗ್ರೇಸ್‌ ಹ್ಯಾರಿಸ್‌ 39;ಅಮೇಲಿ ಕೆರ್‌ 22ಕ್ಕೆ 2)

ಫಲಿತಾಂಶ: ಯುಪಿಗೆ 5 ವಿಕೆಟ್‌ ಗೆಲುವು

andolanait

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

2 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

2 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

2 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

2 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

2 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

2 hours ago