ಹೊಸದಿಲ್ಲಿ: ಒಲಂಪಿಕ್ಸ್ ಪದಕ ವಿಜೇತ ಕುಸ್ತಿಪಟು ಭಜರಂಗ್ ಪೂನಿಯಾ ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA) ನಾಲ್ಕು ವರ್ಷಗಳ ಕಾಲ ಕುಸ್ತಿಯಿಂದ ನಿಷೇಧ ಮಾಡಿದೆ.
ರಾಷ್ಟ್ರೀಯ ತಂಡದ ಆಯ್ಕೆಗಾಗಿ ಮಾರ್ಚ್ 10ರಂದು ಸೋನೆಪತ್ನಲ್ಲಿ ನಡೆದ ಟ್ರಯಲ್ಸ್ನಲ್ಲಿ ಆಯ್ಕೆಯಾಗಿದ್ದರು. ಆನಂತರ ಮೂತ್ರ ಪರೀಕ್ಷೆಗಾಗಿ ನಿರಾಕರಿಸಿದರು. ಈ ನಿರಾಕರಣೆ ನಿಯಮ ಬಾಹಿರ ಎಂದು ನಾಡಾ ನಾಲ್ಕು ವರ್ಷಗಳ ಕಾಲ ಅವರನ್ನು ನಿಷೇಧಿಸಿದೆ.
ನಾಡಾ ಕಳೆದ ಏಪ್ರಿಲ್ 23 ರಂದು ಮೊದಲಬಾರಿಗೆ ಇವರನ್ನು ಅಮಾನತುಗೊಳಿಸಿತ್ತು. ನಂತರ ವಿಶ್ವ ಕುಸ್ತಿ ಆಡಳಿತ ಮಂಡಲಿ (UWW) ಕೂಡ ಅಮಾನತುಗೊಳಿಸಿತು. ಇವುಗಳ ವಿರುದ್ಧ ಪೂನಿಯಾ ಮೇಲ್ಮನವಿ ಅರ್ಜಿ ಸಲ್ಲಿಸಿದರು, ಆಂಟಿ-ಡಿಸಿಪ್ಲಿನರಿ ಡೋಪಿಂಗ್ ಪ್ಯಾನೆಲ್(ADDP) ಮುಂದಿನ ಸೂಚನೆ ನೀಡುವವರೆಗೆ ಮೇಲ್ಮನವಿಯನ್ನು ರದ್ದುಗೊಳಿಸಿತು.
ನಾಡಾಗೆ ಮೂತ್ರ ನೀಡದೆ ಇರುವ ಕುರಿತು ಜೂನ್ 23ರಂದು ಕುಸ್ತಿಪಟುವಿಗೆ ನೋಟಿಸ್ ನೀಡಿದರು. ನಂತರ ಸೆಪ್ಟೆಂಬರ್ 20 ಮತ್ತು ಆಕ್ಟೋಬರ್ 4 ರಂದು ವಿಚಾರಣೆ ನಡೆಸಿದ್ದರು.
ಈಗ ಆದೇಶ ಪ್ರಕಟಿಸಿರುವ ಆಂಟಿ-ಡಿಸಿಪ್ಲಿನರಿ ಡೋಪಿಂಗ್ ಪ್ಯಾನೆಲ್ (ADDP) ಕಲಂ 10.3.1 ರ ಅಡಿಯಲ್ಲಿ ಈ ಎಲ್ಲ ನಿರ್ಭಂದಗಳಿಗೂ ಒಳಪಡುತ್ತದೆ ಎಂದು ಹೇಳಿದೆ. ಇನ್ನು 4 ವರ್ಷಗಳ ಕಾಲ ಭಜರಂಗ್ ಪೂನಿಯ ಯಾವುದೇ ಕುಸ್ತಿಗಳಲ್ಲಿ ಪಾಳ್ಗೊಳ್ಳುವ ಹಾಗಿಲ್ಲ ಮತ್ತು ದೇಶ ಹಾಗೂ ವಿದೇಶಗಳಲ್ಲಿ ಕೋಚಿಂಗ್ ಕೆಲಸಕ್ಕೂ ಅರ್ಜಿ ಸಲ್ಲಿಸುವ ಆಗಿಲ್ಲ ಎಂದು ಷರತ್ತು ವಿಧಿಸಿದೆ.
ಮಹಿಳಾ ಕುಸಿಪಟುಗಳ ಮೇಲಾಗುತ್ತಿದ್ದ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ನಂತರ ವಿನೇಶ್ ಪೋಗಟ್, ಬಜರಂಗ್ ಪೂನಿಯಾ ಕಾಂಗ್ರೆಸ್ ಸೇರ್ಪಡೆಯಾದರು. ಪೂನಿಯಾ ಅವರನ್ನು ಭಾರತ ಕಿಸಾನ್ ಕಾಂಗ್ರೆಸ್ನ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಕಾಂಗ್ರೆಸ್ ಸೇರ್ಪಡೆಗೂ ಮುನ್ನ ರೈಲ್ವೆ ಉದ್ಯೋಗಕ್ಕೆ ಪೂನಿಯಾ ರಾಜೀನಾಮೆ ನೀಡಿದ್ದರು.
ನವದೆಹಲಿ: ಎನ್ಸಿಪಿ ಮುಖ್ಯಸ್ಥ ಹಾಗೂ ಮಹಾರಾಷ್ಟ್ರ ಮಾಜಿ ಸಿಎಂ ಶರದ್ ಪವಾರ್ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಸೋಮವಾರ ಪುಣೆಯ ಖಾಸಗಿ…
ನಂಜನಗೂಡು: ಬೇಸಿಗೆಗೂ ಮುನ್ನವೇ ಕುಡಿಯುವ ನೀರಿಗಾಗಿ ಹಾಹಾಕಾರ ಎದುರಾಗಿದ್ದು, ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ್ದಾರೆ.…
ಮೈಸೂರು: ಪ್ರಕರಣವೊಂದರ ಆರೋಪಿ ಸೆರೆ ಹಿಡಿಯುವಲ್ಲಿ ಮೈಸೂರು ನಗರ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರು ನಗರ ದೇವರಾಜ ಪೊಲಿಸ್ ಠಾಣಾ…
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿ ಪ್ರವಾಸದ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು,…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಶ್ರೀ ಕ್ಷೇತ್ರ ಮಲೆ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಮತ್ತೊಬ್ಬ ಪಾದಯಾತ್ರಿಕ…