ಹೊಸದಿಲ್ಲಿ: ಒಲಂಪಿಕ್ಸ್ ಪದಕ ವಿಜೇತ ಕುಸ್ತಿಪಟು ಭಜರಂಗ್ ಪೂನಿಯಾ ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA) ನಾಲ್ಕು ವರ್ಷಗಳ ಕಾಲ ಕುಸ್ತಿಯಿಂದ ನಿಷೇಧ ಮಾಡಿದೆ.
ರಾಷ್ಟ್ರೀಯ ತಂಡದ ಆಯ್ಕೆಗಾಗಿ ಮಾರ್ಚ್ 10ರಂದು ಸೋನೆಪತ್ನಲ್ಲಿ ನಡೆದ ಟ್ರಯಲ್ಸ್ನಲ್ಲಿ ಆಯ್ಕೆಯಾಗಿದ್ದರು. ಆನಂತರ ಮೂತ್ರ ಪರೀಕ್ಷೆಗಾಗಿ ನಿರಾಕರಿಸಿದರು. ಈ ನಿರಾಕರಣೆ ನಿಯಮ ಬಾಹಿರ ಎಂದು ನಾಡಾ ನಾಲ್ಕು ವರ್ಷಗಳ ಕಾಲ ಅವರನ್ನು ನಿಷೇಧಿಸಿದೆ.
ನಾಡಾ ಕಳೆದ ಏಪ್ರಿಲ್ 23 ರಂದು ಮೊದಲಬಾರಿಗೆ ಇವರನ್ನು ಅಮಾನತುಗೊಳಿಸಿತ್ತು. ನಂತರ ವಿಶ್ವ ಕುಸ್ತಿ ಆಡಳಿತ ಮಂಡಲಿ (UWW) ಕೂಡ ಅಮಾನತುಗೊಳಿಸಿತು. ಇವುಗಳ ವಿರುದ್ಧ ಪೂನಿಯಾ ಮೇಲ್ಮನವಿ ಅರ್ಜಿ ಸಲ್ಲಿಸಿದರು, ಆಂಟಿ-ಡಿಸಿಪ್ಲಿನರಿ ಡೋಪಿಂಗ್ ಪ್ಯಾನೆಲ್(ADDP) ಮುಂದಿನ ಸೂಚನೆ ನೀಡುವವರೆಗೆ ಮೇಲ್ಮನವಿಯನ್ನು ರದ್ದುಗೊಳಿಸಿತು.
ನಾಡಾಗೆ ಮೂತ್ರ ನೀಡದೆ ಇರುವ ಕುರಿತು ಜೂನ್ 23ರಂದು ಕುಸ್ತಿಪಟುವಿಗೆ ನೋಟಿಸ್ ನೀಡಿದರು. ನಂತರ ಸೆಪ್ಟೆಂಬರ್ 20 ಮತ್ತು ಆಕ್ಟೋಬರ್ 4 ರಂದು ವಿಚಾರಣೆ ನಡೆಸಿದ್ದರು.
ಈಗ ಆದೇಶ ಪ್ರಕಟಿಸಿರುವ ಆಂಟಿ-ಡಿಸಿಪ್ಲಿನರಿ ಡೋಪಿಂಗ್ ಪ್ಯಾನೆಲ್ (ADDP) ಕಲಂ 10.3.1 ರ ಅಡಿಯಲ್ಲಿ ಈ ಎಲ್ಲ ನಿರ್ಭಂದಗಳಿಗೂ ಒಳಪಡುತ್ತದೆ ಎಂದು ಹೇಳಿದೆ. ಇನ್ನು 4 ವರ್ಷಗಳ ಕಾಲ ಭಜರಂಗ್ ಪೂನಿಯ ಯಾವುದೇ ಕುಸ್ತಿಗಳಲ್ಲಿ ಪಾಳ್ಗೊಳ್ಳುವ ಹಾಗಿಲ್ಲ ಮತ್ತು ದೇಶ ಹಾಗೂ ವಿದೇಶಗಳಲ್ಲಿ ಕೋಚಿಂಗ್ ಕೆಲಸಕ್ಕೂ ಅರ್ಜಿ ಸಲ್ಲಿಸುವ ಆಗಿಲ್ಲ ಎಂದು ಷರತ್ತು ವಿಧಿಸಿದೆ.
ಮಹಿಳಾ ಕುಸಿಪಟುಗಳ ಮೇಲಾಗುತ್ತಿದ್ದ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ನಂತರ ವಿನೇಶ್ ಪೋಗಟ್, ಬಜರಂಗ್ ಪೂನಿಯಾ ಕಾಂಗ್ರೆಸ್ ಸೇರ್ಪಡೆಯಾದರು. ಪೂನಿಯಾ ಅವರನ್ನು ಭಾರತ ಕಿಸಾನ್ ಕಾಂಗ್ರೆಸ್ನ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಕಾಂಗ್ರೆಸ್ ಸೇರ್ಪಡೆಗೂ ಮುನ್ನ ರೈಲ್ವೆ ಉದ್ಯೋಗಕ್ಕೆ ಪೂನಿಯಾ ರಾಜೀನಾಮೆ ನೀಡಿದ್ದರು.
ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…
ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…
ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.…
ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…