Categories: ಕ್ರೀಡೆ

ಕುಸ್ತಿಪಟು ಭಜರಂಗ್‌ ಪೂನಿಯಾ 4 ವರ್ಷ ನಿಷೇಧ

ಹೊಸದಿಲ್ಲಿ: ಒಲಂಪಿಕ್ಸ್‌ ಪದಕ ವಿಜೇತ ಕುಸ್ತಿಪಟು ಭಜರಂಗ್‌ ಪೂನಿಯಾ ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA) ನಾಲ್ಕು ವರ್ಷಗಳ ಕಾಲ ಕುಸ್ತಿಯಿಂದ ನಿಷೇಧ ಮಾಡಿದೆ.

ರಾಷ್ಟ್ರೀಯ ತಂಡದ ಆಯ್ಕೆಗಾಗಿ ಮಾರ್ಚ್‌ 10ರಂದು ಸೋನೆಪತ್‌ನಲ್ಲಿ ನಡೆದ ಟ್ರಯಲ್ಸ್‌ನಲ್ಲಿ ಆಯ್ಕೆಯಾಗಿದ್ದರು. ಆನಂತರ ಮೂತ್ರ ಪರೀಕ್ಷೆಗಾಗಿ ನಿರಾಕರಿಸಿದರು. ಈ ನಿರಾಕರಣೆ ನಿಯಮ ಬಾಹಿರ ಎಂದು ನಾಡಾ ನಾಲ್ಕು ವರ್ಷಗಳ ಕಾಲ ಅವರನ್ನು ನಿಷೇಧಿಸಿದೆ.

ನಾಡಾ ಕಳೆದ ಏಪ್ರಿಲ್ 23 ರಂದು ಮೊದಲಬಾರಿಗೆ ಇವರನ್ನು ಅಮಾನತುಗೊಳಿಸಿತ್ತು. ನಂತರ ವಿಶ್ವ ಕುಸ್ತಿ ಆಡಳಿತ ಮಂಡಲಿ (UWW) ಕೂಡ ಅಮಾನತುಗೊಳಿಸಿತು. ಇವುಗಳ ವಿರುದ್ಧ ಪೂನಿಯಾ ಮೇಲ್ಮನವಿ ಅರ್ಜಿ ಸಲ್ಲಿಸಿದರು, ಆಂಟಿ-ಡಿಸಿಪ್ಲಿನರಿ ಡೋಪಿಂಗ್ ಪ್ಯಾನೆಲ್‌(ADDP) ಮುಂದಿನ ಸೂಚನೆ ನೀಡುವವರೆಗೆ ಮೇಲ್ಮನವಿಯನ್ನು ರದ್ದುಗೊಳಿಸಿತು.

ನಾಡಾಗೆ ಮೂತ್ರ ನೀಡದೆ ಇರುವ ಕುರಿತು ಜೂನ್‌ 23ರಂದು ಕುಸ್ತಿಪಟುವಿಗೆ ನೋಟಿಸ್‌ ನೀಡಿದರು. ನಂತರ ಸೆಪ್ಟೆಂಬರ್‌ 20 ಮತ್ತು ಆಕ್ಟೋಬರ್ 4‌ ರಂದು ವಿಚಾರಣೆ ನಡೆಸಿದ್ದರು.

ಈಗ ಆದೇಶ ಪ್ರಕಟಿಸಿರುವ ಆಂಟಿ-ಡಿಸಿಪ್ಲಿನರಿ ಡೋಪಿಂಗ್ ಪ್ಯಾನೆಲ್ (‌ADDP) ಕಲಂ 10.3.1 ರ ಅಡಿಯಲ್ಲಿ ಈ ಎಲ್ಲ ನಿರ್ಭಂದಗಳಿಗೂ ಒಳಪಡುತ್ತದೆ ಎಂದು ಹೇಳಿದೆ. ಇನ್ನು 4 ವರ್ಷಗಳ ಕಾಲ ಭಜರಂಗ್‌ ಪೂನಿಯ ಯಾವುದೇ ಕುಸ್ತಿಗಳಲ್ಲಿ ಪಾಳ್ಗೊಳ್ಳುವ ಹಾಗಿಲ್ಲ ಮತ್ತು ದೇಶ ಹಾಗೂ ವಿದೇಶಗಳಲ್ಲಿ ಕೋಚಿಂಗ್‌ ಕೆಲಸಕ್ಕೂ ಅರ್ಜಿ ಸಲ್ಲಿಸುವ ಆಗಿಲ್ಲ ಎಂದು ಷರತ್ತು ವಿಧಿಸಿದೆ.

ಮಹಿಳಾ ಕುಸಿಪಟುಗಳ ಮೇಲಾಗುತ್ತಿದ್ದ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ನಂತರ ವಿನೇಶ್‌ ಪೋಗಟ್‌, ಬಜರಂಗ್‌ ಪೂನಿಯಾ ಕಾಂಗ್ರೆಸ್‌ ಸೇರ್ಪಡೆಯಾದರು. ಪೂನಿಯಾ ಅವರನ್ನು ಭಾರತ ಕಿಸಾನ್‌ ಕಾಂಗ್ರೆಸ್‌ನ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಕಾಂಗ್ರೆಸ್‌ ಸೇರ್ಪಡೆಗೂ ಮುನ್ನ ರೈಲ್ವೆ ಉದ್ಯೋಗಕ್ಕೆ ಪೂನಿಯಾ ರಾಜೀನಾಮೆ ನೀಡಿದ್ದರು.‌

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಚ್.ಡಿ.ಕೋಟೆಯಲ್ಲಿ ಮತ್ತೆ ಶುರುವಾಯ್ತು ಹುಲಿ ಉಪಟಳ

ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…

5 hours ago

ಇನ್ಸ್ಟಾಗ್ರಾಮ್ ಪರಿಚಯ : ಪೊಲೀಸಪ್ಪನ ಜತೆ ಮೈಸೂರು ಮೂಲದ ಗೃಹಿಣಿ ಎಸ್ಕೇಪ್

ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…

5 hours ago

ಮೈಸೂರಲ್ಲಿ ಸಂಭ್ರಮದ ಹನುಮೋತ್ಸವ ; ಮೆರವಣಿಗೆಯಲ್ಲಿ ಸಾಗಿದ ಅತ್ಯಾಕರ್ಷಕ ಹನುಮಮೂರ್ತಿಗಳು

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…

6 hours ago

ಫೇಸ್‌ಬುಕ್‌ ಕಹಾನಿ | ಪ್ರೀತಿ ಹರಸಿ ಬಂದವನಿಗೆ ಹನಿಟ್ರ್ಯಾಪ್‌ ಗಾಳದ ಶಂಕೆ ; ಹಣಕ್ಕೆ ಡಿಮ್ಯಾಂಡ್‌….

ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…

7 hours ago

ಯುನಿಟಿ ಮಾಲ್‌ ನಿರ್ಮಾಣಕ್ಕೆ ವಿರೋಧ ಇಲ್ಲ : ಸಂಸದ ಯದುವೀರ್‌

ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…

7 hours ago

ಮೈಸೂರಲ್ಲಿ ಎರಡು ದಿನ ಮಾಗಿ ಸಂಭ್ರಮ : ಅವರೆಕಾಯಿ ಸೊಗಡು ಜೋರು…

ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…

7 hours ago