ಹೊಸದಿಲ್ಲಿ: ಒಲಂಪಿಕ್ಸ್ ಪದಕ ವಿಜೇತ ಕುಸ್ತಿಪಟು ಭಜರಂಗ್ ಪೂನಿಯಾ ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA) ನಾಲ್ಕು ವರ್ಷಗಳ ಕಾಲ ಕುಸ್ತಿಯಿಂದ ನಿಷೇಧ ಮಾಡಿದೆ.
ರಾಷ್ಟ್ರೀಯ ತಂಡದ ಆಯ್ಕೆಗಾಗಿ ಮಾರ್ಚ್ 10ರಂದು ಸೋನೆಪತ್ನಲ್ಲಿ ನಡೆದ ಟ್ರಯಲ್ಸ್ನಲ್ಲಿ ಆಯ್ಕೆಯಾಗಿದ್ದರು. ಆನಂತರ ಮೂತ್ರ ಪರೀಕ್ಷೆಗಾಗಿ ನಿರಾಕರಿಸಿದರು. ಈ ನಿರಾಕರಣೆ ನಿಯಮ ಬಾಹಿರ ಎಂದು ನಾಡಾ ನಾಲ್ಕು ವರ್ಷಗಳ ಕಾಲ ಅವರನ್ನು ನಿಷೇಧಿಸಿದೆ.
ನಾಡಾ ಕಳೆದ ಏಪ್ರಿಲ್ 23 ರಂದು ಮೊದಲಬಾರಿಗೆ ಇವರನ್ನು ಅಮಾನತುಗೊಳಿಸಿತ್ತು. ನಂತರ ವಿಶ್ವ ಕುಸ್ತಿ ಆಡಳಿತ ಮಂಡಲಿ (UWW) ಕೂಡ ಅಮಾನತುಗೊಳಿಸಿತು. ಇವುಗಳ ವಿರುದ್ಧ ಪೂನಿಯಾ ಮೇಲ್ಮನವಿ ಅರ್ಜಿ ಸಲ್ಲಿಸಿದರು, ಆಂಟಿ-ಡಿಸಿಪ್ಲಿನರಿ ಡೋಪಿಂಗ್ ಪ್ಯಾನೆಲ್(ADDP) ಮುಂದಿನ ಸೂಚನೆ ನೀಡುವವರೆಗೆ ಮೇಲ್ಮನವಿಯನ್ನು ರದ್ದುಗೊಳಿಸಿತು.
ನಾಡಾಗೆ ಮೂತ್ರ ನೀಡದೆ ಇರುವ ಕುರಿತು ಜೂನ್ 23ರಂದು ಕುಸ್ತಿಪಟುವಿಗೆ ನೋಟಿಸ್ ನೀಡಿದರು. ನಂತರ ಸೆಪ್ಟೆಂಬರ್ 20 ಮತ್ತು ಆಕ್ಟೋಬರ್ 4 ರಂದು ವಿಚಾರಣೆ ನಡೆಸಿದ್ದರು.
ಈಗ ಆದೇಶ ಪ್ರಕಟಿಸಿರುವ ಆಂಟಿ-ಡಿಸಿಪ್ಲಿನರಿ ಡೋಪಿಂಗ್ ಪ್ಯಾನೆಲ್ (ADDP) ಕಲಂ 10.3.1 ರ ಅಡಿಯಲ್ಲಿ ಈ ಎಲ್ಲ ನಿರ್ಭಂದಗಳಿಗೂ ಒಳಪಡುತ್ತದೆ ಎಂದು ಹೇಳಿದೆ. ಇನ್ನು 4 ವರ್ಷಗಳ ಕಾಲ ಭಜರಂಗ್ ಪೂನಿಯ ಯಾವುದೇ ಕುಸ್ತಿಗಳಲ್ಲಿ ಪಾಳ್ಗೊಳ್ಳುವ ಹಾಗಿಲ್ಲ ಮತ್ತು ದೇಶ ಹಾಗೂ ವಿದೇಶಗಳಲ್ಲಿ ಕೋಚಿಂಗ್ ಕೆಲಸಕ್ಕೂ ಅರ್ಜಿ ಸಲ್ಲಿಸುವ ಆಗಿಲ್ಲ ಎಂದು ಷರತ್ತು ವಿಧಿಸಿದೆ.
ಮಹಿಳಾ ಕುಸಿಪಟುಗಳ ಮೇಲಾಗುತ್ತಿದ್ದ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ನಂತರ ವಿನೇಶ್ ಪೋಗಟ್, ಬಜರಂಗ್ ಪೂನಿಯಾ ಕಾಂಗ್ರೆಸ್ ಸೇರ್ಪಡೆಯಾದರು. ಪೂನಿಯಾ ಅವರನ್ನು ಭಾರತ ಕಿಸಾನ್ ಕಾಂಗ್ರೆಸ್ನ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಕಾಂಗ್ರೆಸ್ ಸೇರ್ಪಡೆಗೂ ಮುನ್ನ ರೈಲ್ವೆ ಉದ್ಯೋಗಕ್ಕೆ ಪೂನಿಯಾ ರಾಜೀನಾಮೆ ನೀಡಿದ್ದರು.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…