ಕ್ರೀಡೆ

ಲೈಂಗಿಕ ಕಿರುಕುಳ ಆರೋಪ : ಖ್ಯಾತ ಕುಸ್ತಿಪಟುಗಳಿಂದ ಪ್ರತಿಭಟನೆ

ದೆಹಲಿ:  ತರಬೇತುದಾರರು ಮಹಿಳಾ ಕುಸ್ತಿಪಟುಗಳ ಬಳಿ ಅನುಚಿತವಾಗಿ ವರ್ತಿಸುತ್ತಾರೆ. ಫೆಡರೇಶನ್‌ನ ಫೇವರಿಟ್‌ ಆಗಿರುವ ಕೆಲವು ಕೋಚ್‌ಗಳು ಮಹಿಳಾ ಕೋಚ್‌ಗಳೊಂದಿಗೆ ಅನುಚಿತವಾಗಿ ವರ್ತಿಸುತ್ತಾರೆ.

ಕುಸ್ತಿಪಟುಗಳ ಪ್ರತಿಭಟನೆ ಭಾರತದ ಕುಸ್ತಿ ಒಕ್ಕೂಟದ (Wrestling Federation Of India) ವಿರುದ್ಧ ಭಾರತದ ಎಲ್ಲಾ ಅಗ್ರ ಕುಸ್ತಿಪಟುಗಳು ಮುಕ್ತ ಸಮರ ಸಾರಿದ್ದಾರೆ. ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ (Vinesh Phogat) ಅವರು ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ವಿರುದ್ಧ ಲೈಂಗಿಕ ಕಿರುಕುಳ ಆರೋಪ ಸೇರಿದಂತೆ ಹಲವು ಆರೋಪಗಳನ್ನು ಮಾಡಿದ್ದು, ಬ್ರಿಜ್ ಭೂಷಣ್ ಅಧ್ಯಕ್ಷ ಕುರ್ಚಿಯಿಂದ ಕೆಳಗಿಳಿಯುವ ಸಾಧ್ಯತೆಗಳು ಹೆಚ್ಚಿವೆ. ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಅವರಂತಹ ದೊಡ್ಡ ಕುಸ್ತಿಪಟುಗಳು ಜಂತರ್ ಮಂತರ್‌ನಲ್ಲಿ ಧರಣಿ ಕುಳಿತಿದ್ದು, ಈ ವೇಳೆ ಮಾತನಾಡಿದ ವಿನೇಶ್ ಫೋಗಟ್, ಡಬ್ಲ್ಯುಎಫ್‌ಐನಿಂದ ನಾನು ಸಾಕಷ್ಟು ತುಳಿತಕ್ಕೊಳಗಾಗಿದ್ದು, ಅವರ ಕಿರುಕುಳದಿಂದ ಆತ್ಮಹತ್ಯಗೆ ಯತ್ನಿಸಿದ್ದೆ ಎಂಬ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ವಿನೇಶ್ ಫೋಗಟ್ ಆರೋಪಿಸಿದ್ದು, ಅವರು ಹಲವು ಹುಡುಗಿಯರನ್ನು ದೈಹಿಕವಾಗಿ ನಿಂದಿಸಿದ್ದಾರೆ. ಟೋಕಿಯೊ ಒಲಿಂಪಿಕ್ಸ್ ಸೋಲಿನ ನಂತರ ಡಬ್ಲ್ಯುಎಫ್‌ಐ ಅಧ್ಯಕ್ಷರು ನನ್ನನ್ನು ನಕಲಿ ನಾಣ್ಯ ಎಂದು ಕರೆದಿದ್ದರು. ಅಲ್ಲದೆ ನನಗೆ ಮಾನಸಿಕ ಕಿರುಕುಳ ನೀಡಿದ್ದಾರೆ. ಇವರ ಕಿರುಕುಳ ತಾಳಲಾರದೆ ನಾನು ಆತ್ಮಹತ್ಯೆಗೆ ಚಿಂತಿಸಿದ್ದೆ ಎಂದಿದ್ದಾರೆ. ಯಾವುದೇ ಕುಸ್ತಿಪಟುವಿಗೆ ಏನಾದರೂ ಆದರೆ, ಅದಕ್ಕೆ ಡಬ್ಲ್ಯುಎಫ್‌ಐ ಅಧ್ಯಕ್ಷರೇ ನೇರ ಹೊಣೆಯಾಗಿರುತ್ತಾರೆ ಎಂದು ವಿನೇಶ್ ಫೋಗಟ್ ತಮ್ಮ ಅಳಲು ತೋಡಿಕೊಂಡಿದ್ದಾರೆ.

andolanait

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

3 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago