ದೆಹಲಿ: ತರಬೇತುದಾರರು ಮಹಿಳಾ ಕುಸ್ತಿಪಟುಗಳ ಬಳಿ ಅನುಚಿತವಾಗಿ ವರ್ತಿಸುತ್ತಾರೆ. ಫೆಡರೇಶನ್ನ ಫೇವರಿಟ್ ಆಗಿರುವ ಕೆಲವು ಕೋಚ್ಗಳು ಮಹಿಳಾ ಕೋಚ್ಗಳೊಂದಿಗೆ ಅನುಚಿತವಾಗಿ ವರ್ತಿಸುತ್ತಾರೆ.
ಕುಸ್ತಿಪಟುಗಳ ಪ್ರತಿಭಟನೆ ಭಾರತದ ಕುಸ್ತಿ ಒಕ್ಕೂಟದ (Wrestling Federation Of India) ವಿರುದ್ಧ ಭಾರತದ ಎಲ್ಲಾ ಅಗ್ರ ಕುಸ್ತಿಪಟುಗಳು ಮುಕ್ತ ಸಮರ ಸಾರಿದ್ದಾರೆ. ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ (Vinesh Phogat) ಅವರು ಡಬ್ಲ್ಯುಎಫ್ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ವಿರುದ್ಧ ಲೈಂಗಿಕ ಕಿರುಕುಳ ಆರೋಪ ಸೇರಿದಂತೆ ಹಲವು ಆರೋಪಗಳನ್ನು ಮಾಡಿದ್ದು, ಬ್ರಿಜ್ ಭೂಷಣ್ ಅಧ್ಯಕ್ಷ ಕುರ್ಚಿಯಿಂದ ಕೆಳಗಿಳಿಯುವ ಸಾಧ್ಯತೆಗಳು ಹೆಚ್ಚಿವೆ. ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಅವರಂತಹ ದೊಡ್ಡ ಕುಸ್ತಿಪಟುಗಳು ಜಂತರ್ ಮಂತರ್ನಲ್ಲಿ ಧರಣಿ ಕುಳಿತಿದ್ದು, ಈ ವೇಳೆ ಮಾತನಾಡಿದ ವಿನೇಶ್ ಫೋಗಟ್, ಡಬ್ಲ್ಯುಎಫ್ಐನಿಂದ ನಾನು ಸಾಕಷ್ಟು ತುಳಿತಕ್ಕೊಳಗಾಗಿದ್ದು, ಅವರ ಕಿರುಕುಳದಿಂದ ಆತ್ಮಹತ್ಯಗೆ ಯತ್ನಿಸಿದ್ದೆ ಎಂಬ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ವಿನೇಶ್ ಫೋಗಟ್ ಆರೋಪಿಸಿದ್ದು, ಅವರು ಹಲವು ಹುಡುಗಿಯರನ್ನು ದೈಹಿಕವಾಗಿ ನಿಂದಿಸಿದ್ದಾರೆ. ಟೋಕಿಯೊ ಒಲಿಂಪಿಕ್ಸ್ ಸೋಲಿನ ನಂತರ ಡಬ್ಲ್ಯುಎಫ್ಐ ಅಧ್ಯಕ್ಷರು ನನ್ನನ್ನು ನಕಲಿ ನಾಣ್ಯ ಎಂದು ಕರೆದಿದ್ದರು. ಅಲ್ಲದೆ ನನಗೆ ಮಾನಸಿಕ ಕಿರುಕುಳ ನೀಡಿದ್ದಾರೆ. ಇವರ ಕಿರುಕುಳ ತಾಳಲಾರದೆ ನಾನು ಆತ್ಮಹತ್ಯೆಗೆ ಚಿಂತಿಸಿದ್ದೆ ಎಂದಿದ್ದಾರೆ. ಯಾವುದೇ ಕುಸ್ತಿಪಟುವಿಗೆ ಏನಾದರೂ ಆದರೆ, ಅದಕ್ಕೆ ಡಬ್ಲ್ಯುಎಫ್ಐ ಅಧ್ಯಕ್ಷರೇ ನೇರ ಹೊಣೆಯಾಗಿರುತ್ತಾರೆ ಎಂದು ವಿನೇಶ್ ಫೋಗಟ್ ತಮ್ಮ ಅಳಲು ತೋಡಿಕೊಂಡಿದ್ದಾರೆ.
ಮಡಿಕೇರಿ: ಪಾಂಡಂಡ ಕುಟ್ಟಪ್ಪ ಅವರ ಕನಸಿನ ಕೂಸಾದ ಕೊಡವ ಕೌಟುಂಬಿಕ ಹಾಕಿ ಉತ್ಸವದ ಬೆಳ್ಳಿ ಮಹೋತ್ಸವವನ್ನು ಆಚರಿಸಿಕೊಂಡ ಹಿನ್ನೆಲೆಯಲ್ಲಿ ಕೊಡವ…
ಗಿರೀಶ್ ಹುಣಸೂರು ೨೦೨೫ನೇ ಸಾಲಿನಲ್ಲಿ ದೇಶ, ರಾಜ್ಯದಲ್ಲಿ ಹಲವು ದಾಖಲೆಗಳಿಗೆ ಸಾಕ್ಷಿಯಾಗಿದೆ. ಭಾರತ ಮೂಲದ ಶುಭಾಂಶು ಶುಕ್ಲಾ ಬಾಹ್ಯಾಕಾಶದಲ್ಲಿ ೧೮…
ಕೆ.ಬಿ.ರಮೇಶನಾಯಕ ಮೈಸೂರು: ಮಾನವ-ವನ್ಯಜೀವಿಗಳ ಸಂಘರ್ಷವನ್ನು ತಡೆಯಲು ಬಂಡೀಪುರ, ನಾಗರ ಹೊಳೆ ಅಭಯಾರಣ್ಯ ಪ್ರದೇಶದಲ್ಲಿ ಸಫಾರಿಗೆ ನಿರ್ಬಂಧ ವಿಧಿಸಿರುವುದರ ನಡುವೆಯೂ ಕ್ರಿಸ್ಮಸ್,…
ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…