ಕ್ರೀಡೆ

ಲೈಂಗಿಕ ಕಿರುಕುಳ ಆರೋಪ : ಖ್ಯಾತ ಕುಸ್ತಿಪಟುಗಳಿಂದ ಪ್ರತಿಭಟನೆ

ದೆಹಲಿ:  ತರಬೇತುದಾರರು ಮಹಿಳಾ ಕುಸ್ತಿಪಟುಗಳ ಬಳಿ ಅನುಚಿತವಾಗಿ ವರ್ತಿಸುತ್ತಾರೆ. ಫೆಡರೇಶನ್‌ನ ಫೇವರಿಟ್‌ ಆಗಿರುವ ಕೆಲವು ಕೋಚ್‌ಗಳು ಮಹಿಳಾ ಕೋಚ್‌ಗಳೊಂದಿಗೆ ಅನುಚಿತವಾಗಿ ವರ್ತಿಸುತ್ತಾರೆ.

ಕುಸ್ತಿಪಟುಗಳ ಪ್ರತಿಭಟನೆ ಭಾರತದ ಕುಸ್ತಿ ಒಕ್ಕೂಟದ (Wrestling Federation Of India) ವಿರುದ್ಧ ಭಾರತದ ಎಲ್ಲಾ ಅಗ್ರ ಕುಸ್ತಿಪಟುಗಳು ಮುಕ್ತ ಸಮರ ಸಾರಿದ್ದಾರೆ. ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ (Vinesh Phogat) ಅವರು ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ವಿರುದ್ಧ ಲೈಂಗಿಕ ಕಿರುಕುಳ ಆರೋಪ ಸೇರಿದಂತೆ ಹಲವು ಆರೋಪಗಳನ್ನು ಮಾಡಿದ್ದು, ಬ್ರಿಜ್ ಭೂಷಣ್ ಅಧ್ಯಕ್ಷ ಕುರ್ಚಿಯಿಂದ ಕೆಳಗಿಳಿಯುವ ಸಾಧ್ಯತೆಗಳು ಹೆಚ್ಚಿವೆ. ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಅವರಂತಹ ದೊಡ್ಡ ಕುಸ್ತಿಪಟುಗಳು ಜಂತರ್ ಮಂತರ್‌ನಲ್ಲಿ ಧರಣಿ ಕುಳಿತಿದ್ದು, ಈ ವೇಳೆ ಮಾತನಾಡಿದ ವಿನೇಶ್ ಫೋಗಟ್, ಡಬ್ಲ್ಯುಎಫ್‌ಐನಿಂದ ನಾನು ಸಾಕಷ್ಟು ತುಳಿತಕ್ಕೊಳಗಾಗಿದ್ದು, ಅವರ ಕಿರುಕುಳದಿಂದ ಆತ್ಮಹತ್ಯಗೆ ಯತ್ನಿಸಿದ್ದೆ ಎಂಬ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ವಿನೇಶ್ ಫೋಗಟ್ ಆರೋಪಿಸಿದ್ದು, ಅವರು ಹಲವು ಹುಡುಗಿಯರನ್ನು ದೈಹಿಕವಾಗಿ ನಿಂದಿಸಿದ್ದಾರೆ. ಟೋಕಿಯೊ ಒಲಿಂಪಿಕ್ಸ್ ಸೋಲಿನ ನಂತರ ಡಬ್ಲ್ಯುಎಫ್‌ಐ ಅಧ್ಯಕ್ಷರು ನನ್ನನ್ನು ನಕಲಿ ನಾಣ್ಯ ಎಂದು ಕರೆದಿದ್ದರು. ಅಲ್ಲದೆ ನನಗೆ ಮಾನಸಿಕ ಕಿರುಕುಳ ನೀಡಿದ್ದಾರೆ. ಇವರ ಕಿರುಕುಳ ತಾಳಲಾರದೆ ನಾನು ಆತ್ಮಹತ್ಯೆಗೆ ಚಿಂತಿಸಿದ್ದೆ ಎಂದಿದ್ದಾರೆ. ಯಾವುದೇ ಕುಸ್ತಿಪಟುವಿಗೆ ಏನಾದರೂ ಆದರೆ, ಅದಕ್ಕೆ ಡಬ್ಲ್ಯುಎಫ್‌ಐ ಅಧ್ಯಕ್ಷರೇ ನೇರ ಹೊಣೆಯಾಗಿರುತ್ತಾರೆ ಎಂದು ವಿನೇಶ್ ಫೋಗಟ್ ತಮ್ಮ ಅಳಲು ತೋಡಿಕೊಂಡಿದ್ದಾರೆ.

andolanait

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

1 day ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

1 day ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

1 day ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

1 day ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

1 day ago