ಕ್ರೀಡೆ

ಲೈಂಗಿಕ ಕಿರುಕುಳ ಆರೋಪ : ಖ್ಯಾತ ಕುಸ್ತಿಪಟುಗಳಿಂದ ಪ್ರತಿಭಟನೆ

ದೆಹಲಿ:  ತರಬೇತುದಾರರು ಮಹಿಳಾ ಕುಸ್ತಿಪಟುಗಳ ಬಳಿ ಅನುಚಿತವಾಗಿ ವರ್ತಿಸುತ್ತಾರೆ. ಫೆಡರೇಶನ್‌ನ ಫೇವರಿಟ್‌ ಆಗಿರುವ ಕೆಲವು ಕೋಚ್‌ಗಳು ಮಹಿಳಾ ಕೋಚ್‌ಗಳೊಂದಿಗೆ ಅನುಚಿತವಾಗಿ ವರ್ತಿಸುತ್ತಾರೆ.

ಕುಸ್ತಿಪಟುಗಳ ಪ್ರತಿಭಟನೆ ಭಾರತದ ಕುಸ್ತಿ ಒಕ್ಕೂಟದ (Wrestling Federation Of India) ವಿರುದ್ಧ ಭಾರತದ ಎಲ್ಲಾ ಅಗ್ರ ಕುಸ್ತಿಪಟುಗಳು ಮುಕ್ತ ಸಮರ ಸಾರಿದ್ದಾರೆ. ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ (Vinesh Phogat) ಅವರು ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ವಿರುದ್ಧ ಲೈಂಗಿಕ ಕಿರುಕುಳ ಆರೋಪ ಸೇರಿದಂತೆ ಹಲವು ಆರೋಪಗಳನ್ನು ಮಾಡಿದ್ದು, ಬ್ರಿಜ್ ಭೂಷಣ್ ಅಧ್ಯಕ್ಷ ಕುರ್ಚಿಯಿಂದ ಕೆಳಗಿಳಿಯುವ ಸಾಧ್ಯತೆಗಳು ಹೆಚ್ಚಿವೆ. ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಅವರಂತಹ ದೊಡ್ಡ ಕುಸ್ತಿಪಟುಗಳು ಜಂತರ್ ಮಂತರ್‌ನಲ್ಲಿ ಧರಣಿ ಕುಳಿತಿದ್ದು, ಈ ವೇಳೆ ಮಾತನಾಡಿದ ವಿನೇಶ್ ಫೋಗಟ್, ಡಬ್ಲ್ಯುಎಫ್‌ಐನಿಂದ ನಾನು ಸಾಕಷ್ಟು ತುಳಿತಕ್ಕೊಳಗಾಗಿದ್ದು, ಅವರ ಕಿರುಕುಳದಿಂದ ಆತ್ಮಹತ್ಯಗೆ ಯತ್ನಿಸಿದ್ದೆ ಎಂಬ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ವಿನೇಶ್ ಫೋಗಟ್ ಆರೋಪಿಸಿದ್ದು, ಅವರು ಹಲವು ಹುಡುಗಿಯರನ್ನು ದೈಹಿಕವಾಗಿ ನಿಂದಿಸಿದ್ದಾರೆ. ಟೋಕಿಯೊ ಒಲಿಂಪಿಕ್ಸ್ ಸೋಲಿನ ನಂತರ ಡಬ್ಲ್ಯುಎಫ್‌ಐ ಅಧ್ಯಕ್ಷರು ನನ್ನನ್ನು ನಕಲಿ ನಾಣ್ಯ ಎಂದು ಕರೆದಿದ್ದರು. ಅಲ್ಲದೆ ನನಗೆ ಮಾನಸಿಕ ಕಿರುಕುಳ ನೀಡಿದ್ದಾರೆ. ಇವರ ಕಿರುಕುಳ ತಾಳಲಾರದೆ ನಾನು ಆತ್ಮಹತ್ಯೆಗೆ ಚಿಂತಿಸಿದ್ದೆ ಎಂದಿದ್ದಾರೆ. ಯಾವುದೇ ಕುಸ್ತಿಪಟುವಿಗೆ ಏನಾದರೂ ಆದರೆ, ಅದಕ್ಕೆ ಡಬ್ಲ್ಯುಎಫ್‌ಐ ಅಧ್ಯಕ್ಷರೇ ನೇರ ಹೊಣೆಯಾಗಿರುತ್ತಾರೆ ಎಂದು ವಿನೇಶ್ ಫೋಗಟ್ ತಮ್ಮ ಅಳಲು ತೋಡಿಕೊಂಡಿದ್ದಾರೆ.

andolanait

Recent Posts

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

2 hours ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

4 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

4 hours ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

4 hours ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

6 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

7 hours ago