ನವದೆಹಲಿ : ಮುಂಬರುವ ಏಕದಿನ ವಿಶ್ವಕಪ್ನಲ್ಲಿ ರಾಷ್ಟ್ರೀಯ ತಂಡದ ಆಟಗಾರರ ಜರ್ಸಿಗಳಲ್ಲಿ ಇಂಡಿಯಾ ಬದಲಿಗೆ ಭಾರತ್ ಎಂದು ಬರೆಯಬೇಕೆಂದು ಭಾರತದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಮಂಗಳವಾರ ಬಿಸಿಸಿಸಿಐಗೆ ಆಗ್ರಹಿಸಿದ್ದಾರೆ.
ಬಿಸಿಸಿಐ ಕಾರ್ಯದರ್ಶಿ ಜಯ್ ಶಾಗೆ ತಮ್ಮ ಸಲಹೆಯನ್ನು ನೀಡಿರುವ ಸೆಹ್ವಾಗ್, ಆಟಗಾರರು ಭಾರತ್ ಎಂದು ಬರೆದಿರುವ ಜರ್ಸಿಗಳನ್ನು ಧರಿಸಬೇಕು. ಹೆಸರು ನಮ್ಮಲ್ಲಿ ಹೆಮ್ಮೆ ಹುಟ್ಟುಹಾಕಬೇಕು ಎಂದು ನಾನು ಯಾವಾಗಲೂ ನಂಬುತ್ತೇನೆ. ನಾವು ಭಾರತೀಯರು. ಇಂಡಿಯಾ ಎನ್ನುವುದು ಬ್ರಿಟಿಷರು ನೀಡಿದ ಹೆಸರು. ಭಾರತ್ ಎಂಬ ಹೆಸರು ಯಾವಾಗಲೋ ಇಡಬೇಕಾಗಿತ್ತು ಎಂದು ಹೇಳಿದ್ದಾರೆ.
ಈ ವಿಶ್ವಕಪ್ನಲ್ಲಿ ನಮ್ಮ ಆಟಗಾರರು ಭಾರತ್ ಹೆಸರಿನ ಜರ್ಸಿಗಳನ್ನು ಧರಿಸುವುದನ್ನು ಖಚಿತಪಡಿಸಬೇಕೆಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾಗೆ ವಿನಂತಿಸುವೆ. ಟೀಮ್ ಇಂಡಿಯಾ ಅಲ್ಲ ಟೀಮ್ ಭಾರತ್ ಆಗಬೇಕು ಎಂದು ಸೆಹ್ವಾಗ್ ಎಕ್ಸ್ನಲ್ಲಿ ಬರೆದಿದ್ದಾರೆ.
ಸೆ.9ರಂದು ರಾಷ್ಟ್ರಪತಿ ಭವನದಲ್ಲಿ ನಡೆಯುವ ಜಿ-20 ಔತಣಕೂಟಕ್ಕೆ ಎಂದಿನಂತೆ ಪ್ರೆಸಿಡೆಂಟ್ ಆಫ್ ಇಂಡಿಯಾ ಬದಲಿಗೆ ಪ್ರೆಸಿಡೆಂಡ್ ಆಫ್ ಭಾರತ್ ಹೆಸರಿನಲ್ಲಿ ಆಹ್ವಾನ ಪತ್ರಗಳನ್ನು ಕಳುಹಿಸಿರುವುದು ವಿವಾದ ಉಂಟಾಗಿರುವಾಗಲೇ ಸೆಹ್ವಾಗ್ ಈ ಹೇಳಿಕೆ ನೀಡಿದ್ದಾರೆ
ಮಂಡ್ಯ: ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಸಿನಿಮಾ ಟ್ರೈಲರ್ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್ ಕಾರ್ತಿಕೇಯ-ಸುದೀಪ್ ಕಾಂಬಿನೇಷನ್ನಲ್ಲಿ ಮೂಡಿಬಂದಿರುವ…