ಕ್ರೀಡೆ

ವಿಶ್ವಕಪ್ ಜರ್ಸಿಯಲ್ಲಿ ಇಂಡಿಯಾ ಬದಲು ಭಾರತ್ ಎಂದು ಬರೆಯಿರಿ: ಬಿಸಿಸಿಐಗೆ ಸೆಹ್ವಾಗ್ ಆಗ್ರಹ

ನವದೆಹಲಿ : ಮುಂಬರುವ ಏಕದಿನ ವಿಶ್ವಕಪ್‌ನಲ್ಲಿ ರಾಷ್ಟ್ರೀಯ ತಂಡದ ಆಟಗಾರರ ಜರ್ಸಿಗಳಲ್ಲಿ ಇಂಡಿಯಾ ಬದಲಿಗೆ ಭಾರತ್ ಎಂದು ಬರೆಯಬೇಕೆಂದು ಭಾರತದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಮಂಗಳವಾರ ಬಿಸಿಸಿಸಿಐಗೆ ಆಗ್ರಹಿಸಿದ್ದಾರೆ.

ಬಿಸಿಸಿಐ ಕಾರ್ಯದರ್ಶಿ ಜಯ್ ಶಾಗೆ ತಮ್ಮ ಸಲಹೆಯನ್ನು ನೀಡಿರುವ ಸೆಹ್ವಾಗ್, ಆಟಗಾರರು ಭಾರತ್ ಎಂದು ಬರೆದಿರುವ ಜರ್ಸಿಗಳನ್ನು ಧರಿಸಬೇಕು. ಹೆಸರು ನಮ್ಮಲ್ಲಿ ಹೆಮ್ಮೆ ಹುಟ್ಟುಹಾಕಬೇಕು ಎಂದು ನಾನು ಯಾವಾಗಲೂ ನಂಬುತ್ತೇನೆ. ನಾವು ಭಾರತೀಯರು. ಇಂಡಿಯಾ ಎನ್ನುವುದು ಬ್ರಿಟಿಷರು ನೀಡಿದ ಹೆಸರು. ಭಾರತ್ ಎಂಬ ಹೆಸರು ಯಾವಾಗಲೋ ಇಡಬೇಕಾಗಿತ್ತು ಎಂದು ಹೇಳಿದ್ದಾರೆ.

ಈ ವಿಶ್ವಕಪ್‌ನಲ್ಲಿ ನಮ್ಮ ಆಟಗಾರರು ಭಾರತ್ ಹೆಸರಿನ ಜರ್ಸಿಗಳನ್ನು ಧರಿಸುವುದನ್ನು ಖಚಿತಪಡಿಸಬೇಕೆಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾಗೆ ವಿನಂತಿಸುವೆ. ಟೀಮ್ ಇಂಡಿಯಾ ಅಲ್ಲ ಟೀಮ್ ಭಾರತ್ ಆಗಬೇಕು ಎಂದು ಸೆಹ್ವಾಗ್ ಎಕ್ಸ್‌ನಲ್ಲಿ ಬರೆದಿದ್ದಾರೆ.

ಸೆ.9ರಂದು ರಾಷ್ಟ್ರಪತಿ ಭವನದಲ್ಲಿ ನಡೆಯುವ ಜಿ-20 ಔತಣಕೂಟಕ್ಕೆ ಎಂದಿನಂತೆ ಪ್ರೆಸಿಡೆಂಟ್ ಆಫ್ ಇಂಡಿಯಾ ಬದಲಿಗೆ ಪ್ರೆಸಿಡೆಂಡ್ ಆಫ್ ಭಾರತ್ ಹೆಸರಿನಲ್ಲಿ ಆಹ್ವಾನ ಪತ್ರಗಳನ್ನು ಕಳುಹಿಸಿರುವುದು ವಿವಾದ ಉಂಟಾಗಿರುವಾಗಲೇ ಸೆಹ್ವಾಗ್ ಈ ಹೇಳಿಕೆ ನೀಡಿದ್ದಾರೆ

andolanait

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

6 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

6 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

6 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

6 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

6 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

6 hours ago