ಕ್ರೀಡೆ

ವಿಶ್ವಕಪ್ ಜರ್ಸಿಯಲ್ಲಿ ಇಂಡಿಯಾ ಬದಲು ಭಾರತ್ ಎಂದು ಬರೆಯಿರಿ: ಬಿಸಿಸಿಐಗೆ ಸೆಹ್ವಾಗ್ ಆಗ್ರಹ

ನವದೆಹಲಿ : ಮುಂಬರುವ ಏಕದಿನ ವಿಶ್ವಕಪ್‌ನಲ್ಲಿ ರಾಷ್ಟ್ರೀಯ ತಂಡದ ಆಟಗಾರರ ಜರ್ಸಿಗಳಲ್ಲಿ ಇಂಡಿಯಾ ಬದಲಿಗೆ ಭಾರತ್ ಎಂದು ಬರೆಯಬೇಕೆಂದು ಭಾರತದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಮಂಗಳವಾರ ಬಿಸಿಸಿಸಿಐಗೆ ಆಗ್ರಹಿಸಿದ್ದಾರೆ.

ಬಿಸಿಸಿಐ ಕಾರ್ಯದರ್ಶಿ ಜಯ್ ಶಾಗೆ ತಮ್ಮ ಸಲಹೆಯನ್ನು ನೀಡಿರುವ ಸೆಹ್ವಾಗ್, ಆಟಗಾರರು ಭಾರತ್ ಎಂದು ಬರೆದಿರುವ ಜರ್ಸಿಗಳನ್ನು ಧರಿಸಬೇಕು. ಹೆಸರು ನಮ್ಮಲ್ಲಿ ಹೆಮ್ಮೆ ಹುಟ್ಟುಹಾಕಬೇಕು ಎಂದು ನಾನು ಯಾವಾಗಲೂ ನಂಬುತ್ತೇನೆ. ನಾವು ಭಾರತೀಯರು. ಇಂಡಿಯಾ ಎನ್ನುವುದು ಬ್ರಿಟಿಷರು ನೀಡಿದ ಹೆಸರು. ಭಾರತ್ ಎಂಬ ಹೆಸರು ಯಾವಾಗಲೋ ಇಡಬೇಕಾಗಿತ್ತು ಎಂದು ಹೇಳಿದ್ದಾರೆ.

ಈ ವಿಶ್ವಕಪ್‌ನಲ್ಲಿ ನಮ್ಮ ಆಟಗಾರರು ಭಾರತ್ ಹೆಸರಿನ ಜರ್ಸಿಗಳನ್ನು ಧರಿಸುವುದನ್ನು ಖಚಿತಪಡಿಸಬೇಕೆಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾಗೆ ವಿನಂತಿಸುವೆ. ಟೀಮ್ ಇಂಡಿಯಾ ಅಲ್ಲ ಟೀಮ್ ಭಾರತ್ ಆಗಬೇಕು ಎಂದು ಸೆಹ್ವಾಗ್ ಎಕ್ಸ್‌ನಲ್ಲಿ ಬರೆದಿದ್ದಾರೆ.

ಸೆ.9ರಂದು ರಾಷ್ಟ್ರಪತಿ ಭವನದಲ್ಲಿ ನಡೆಯುವ ಜಿ-20 ಔತಣಕೂಟಕ್ಕೆ ಎಂದಿನಂತೆ ಪ್ರೆಸಿಡೆಂಟ್ ಆಫ್ ಇಂಡಿಯಾ ಬದಲಿಗೆ ಪ್ರೆಸಿಡೆಂಡ್ ಆಫ್ ಭಾರತ್ ಹೆಸರಿನಲ್ಲಿ ಆಹ್ವಾನ ಪತ್ರಗಳನ್ನು ಕಳುಹಿಸಿರುವುದು ವಿವಾದ ಉಂಟಾಗಿರುವಾಗಲೇ ಸೆಹ್ವಾಗ್ ಈ ಹೇಳಿಕೆ ನೀಡಿದ್ದಾರೆ

andolanait

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

5 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

7 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

8 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

11 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

1 day ago