ಲಂಡನ್: 2022-23ರ ಸಾಲಿನ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಕೂಟದ ಫೈನಲ್ ಪಂದ್ಯವು ಜೂನ್ 7ರಿಂದ ನಡೆಯಲಿದೆ. ಲಂಡನ್ ನ ಓವಲ್ ಮೈದಾನದಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಸೆಣಸಾಡಲಿದೆ.
ಭಾರತ ತಂಡವು ಸತತ ಎರಡನೇ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯ ಆಡುತ್ತಿದೆ. 2021ರ ಚೊಚ್ಚಲ ಫೈನಲ್ ನಲ್ಲಿ ವಿರಾಟ್ ಪಡೆಯನ್ನು ಸೋಲಿಸಿ ನ್ಯೂಜಿಲ್ಯಾಂಡ್ ಮೊದಲ ಚಾಂಪಿಯನ್ ಆಗಿ ಮೂಡಿ ಬಂದಿತ್ತು. ಮತ್ತೊಂದೆಡೆ ಆಸ್ಟ್ರೇಲಿಯಾ ತಂಡವು ಮೊದಲ ಬಾರಿಗೆ ಫೈನಲ್ ಗೆ ಬಂದಿದೆ.
ಫೈನಲ್ ಪಂದ್ಯವಾದ ಕಾರಣ ಒಂದು ವೇಳೆ ಈ ಪಂದ್ಯಕ್ಕೆ ಮಳೆ ಕಾಟ ಎದುರಾದರೆ ಅಥವಾ ಡ್ರಾ ಆದರೆ ಯಾರನ್ನು ವಿಜೇತರೆಂದು ಘೋಷಿಸಲಾಗುತ್ತದೆ ಎಂಬ ಅನುಮಾನ ಕಾಡುತ್ತಿದೆ. ಅಂತಹ ಸಂದರ್ಭದಲ್ಲಿ ಎರಡೂ ತಂಡಗಳನ್ನು ಜಂಟಿ ವಿಜೇತರೆಂದು ಪರಿಗಣಿಸಲಾಗುತ್ತದೆ.
ಆದರೆ ಮಳೆ ಅಥವಾ ಇತರ ಅಂಶಗಳಿಂದಾಗಿ ಕಳೆದುಹೋದ ಯಾವುದೇ ಸಮಯವನ್ನು ಸರಿದೂಗಿಸಲು ಫೈನಲ್ ಗೆ ಮೀಸಲು ದಿನವನ್ನು ನಿಗದಿ ಪಡಿಸಲಾಗಿದೆ. ಆಟದ ಸಮಯದಲ್ಲಿ ಗಣನೀಯ ನಷ್ಟ ಉಂಟಾದರೆ ಅಥವಾ ಆರಂಭಿಕ ಐದು ದಿನಗಳಲ್ಲಿ ಬೌಲ್ ಮಾಡುವ ಓವರ್ಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡುಬಂದರೆ ಮಾತ್ರ ಮೀಸಲು ದಿನವು ಕಾರ್ಯರೂಪಕ್ಕೆ ಬರುತ್ತದೆ.
ಭಾರತ ಮತ್ತು ಆಸ್ಟ್ರೇಲಿಯಾ ಎರಡೂ ತಂಡಗಳಲ್ಲಿ ಸ್ಟಾರ್ ಆಟಗಾರರನ್ನು ಹೊಂದಿರುವ ಕಾರಣ ಫೈನಲ್ ಪಂದ್ಯವು ರೋಚಕ ಮುಖಾಮುಖಿಯಾಗಿರಲಿದೆ. ಭಾರತ ತಂಡಲ್ಲಿ ವಿರಾಟ್ ಕೊಹ್ಲಿ, ಚೇತೇಶ್ವರ ಪೂಜಾರ ಮತ್ತು ರವೀಂದ್ರ ಜಡೇಜಾ ಅವರಂತಹ ಮತ್ತು ಆಸ್ಟ್ರೇಲಿಯಾದ ಪ್ಯಾಟ್ ಕಮ್ಮಿನ್ಸ್, ಸ್ಟೀವ್ ಸ್ಮಿತ್ ಮತ್ತು ಮಾರ್ನಸ್ ಲಬುಶೇನ್ ಅವರಂತಹ ಪ್ರತಿಭಾವಂತರು ಇರುವದರಿಂದ ತೀವ್ರ ಪೈಪೋಟಿಯನ್ನು ನಿರೀಕ್ಷಿಸಬಹುದು.
ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…
ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…
ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…
ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…
ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…
ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…