ಲಂಡನ್: 2022-23ರ ಸಾಲಿನ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಕೂಟದ ಫೈನಲ್ ಪಂದ್ಯವು ಜೂನ್ 7ರಿಂದ ನಡೆಯಲಿದೆ. ಲಂಡನ್ ನ ಓವಲ್ ಮೈದಾನದಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಸೆಣಸಾಡಲಿದೆ.
ಭಾರತ ತಂಡವು ಸತತ ಎರಡನೇ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯ ಆಡುತ್ತಿದೆ. 2021ರ ಚೊಚ್ಚಲ ಫೈನಲ್ ನಲ್ಲಿ ವಿರಾಟ್ ಪಡೆಯನ್ನು ಸೋಲಿಸಿ ನ್ಯೂಜಿಲ್ಯಾಂಡ್ ಮೊದಲ ಚಾಂಪಿಯನ್ ಆಗಿ ಮೂಡಿ ಬಂದಿತ್ತು. ಮತ್ತೊಂದೆಡೆ ಆಸ್ಟ್ರೇಲಿಯಾ ತಂಡವು ಮೊದಲ ಬಾರಿಗೆ ಫೈನಲ್ ಗೆ ಬಂದಿದೆ.
ಫೈನಲ್ ಪಂದ್ಯವಾದ ಕಾರಣ ಒಂದು ವೇಳೆ ಈ ಪಂದ್ಯಕ್ಕೆ ಮಳೆ ಕಾಟ ಎದುರಾದರೆ ಅಥವಾ ಡ್ರಾ ಆದರೆ ಯಾರನ್ನು ವಿಜೇತರೆಂದು ಘೋಷಿಸಲಾಗುತ್ತದೆ ಎಂಬ ಅನುಮಾನ ಕಾಡುತ್ತಿದೆ. ಅಂತಹ ಸಂದರ್ಭದಲ್ಲಿ ಎರಡೂ ತಂಡಗಳನ್ನು ಜಂಟಿ ವಿಜೇತರೆಂದು ಪರಿಗಣಿಸಲಾಗುತ್ತದೆ.
ಆದರೆ ಮಳೆ ಅಥವಾ ಇತರ ಅಂಶಗಳಿಂದಾಗಿ ಕಳೆದುಹೋದ ಯಾವುದೇ ಸಮಯವನ್ನು ಸರಿದೂಗಿಸಲು ಫೈನಲ್ ಗೆ ಮೀಸಲು ದಿನವನ್ನು ನಿಗದಿ ಪಡಿಸಲಾಗಿದೆ. ಆಟದ ಸಮಯದಲ್ಲಿ ಗಣನೀಯ ನಷ್ಟ ಉಂಟಾದರೆ ಅಥವಾ ಆರಂಭಿಕ ಐದು ದಿನಗಳಲ್ಲಿ ಬೌಲ್ ಮಾಡುವ ಓವರ್ಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡುಬಂದರೆ ಮಾತ್ರ ಮೀಸಲು ದಿನವು ಕಾರ್ಯರೂಪಕ್ಕೆ ಬರುತ್ತದೆ.
ಭಾರತ ಮತ್ತು ಆಸ್ಟ್ರೇಲಿಯಾ ಎರಡೂ ತಂಡಗಳಲ್ಲಿ ಸ್ಟಾರ್ ಆಟಗಾರರನ್ನು ಹೊಂದಿರುವ ಕಾರಣ ಫೈನಲ್ ಪಂದ್ಯವು ರೋಚಕ ಮುಖಾಮುಖಿಯಾಗಿರಲಿದೆ. ಭಾರತ ತಂಡಲ್ಲಿ ವಿರಾಟ್ ಕೊಹ್ಲಿ, ಚೇತೇಶ್ವರ ಪೂಜಾರ ಮತ್ತು ರವೀಂದ್ರ ಜಡೇಜಾ ಅವರಂತಹ ಮತ್ತು ಆಸ್ಟ್ರೇಲಿಯಾದ ಪ್ಯಾಟ್ ಕಮ್ಮಿನ್ಸ್, ಸ್ಟೀವ್ ಸ್ಮಿತ್ ಮತ್ತು ಮಾರ್ನಸ್ ಲಬುಶೇನ್ ಅವರಂತಹ ಪ್ರತಿಭಾವಂತರು ಇರುವದರಿಂದ ತೀವ್ರ ಪೈಪೋಟಿಯನ್ನು ನಿರೀಕ್ಷಿಸಬಹುದು.
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…
ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…
ರಾಮನಗರ: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು…