ಕ್ರೀಡೆ

WTC Final 2023: ಪಂದ್ಯ ರದ್ದಾದರೆ ಅಥವಾ ಡ್ರಾ ಆದರೆ ಚಾಂಪಿಯನ್ ಯಾರು.?

ಲಂಡನ್: 2022-23ರ ಸಾಲಿನ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಕೂಟದ ಫೈನಲ್ ಪಂದ್ಯವು ಜೂನ್ 7ರಿಂದ ನಡೆಯಲಿದೆ. ಲಂಡನ್ ನ ಓವಲ್ ಮೈದಾನದಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಸೆಣಸಾಡಲಿದೆ.

ಭಾರತ ತಂಡವು ಸತತ ಎರಡನೇ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯ ಆಡುತ್ತಿದೆ. 2021ರ ಚೊಚ್ಚಲ ಫೈನಲ್ ನಲ್ಲಿ ವಿರಾಟ್ ಪಡೆಯನ್ನು ಸೋಲಿಸಿ ನ್ಯೂಜಿಲ್ಯಾಂಡ್ ಮೊದಲ ಚಾಂಪಿಯನ್ ಆಗಿ ಮೂಡಿ ಬಂದಿತ್ತು. ಮತ್ತೊಂದೆಡೆ ಆಸ್ಟ್ರೇಲಿಯಾ ತಂಡವು ಮೊದಲ ಬಾರಿಗೆ ಫೈನಲ್ ಗೆ ಬಂದಿದೆ.

ಫೈನಲ್ ಪಂದ್ಯವಾದ ಕಾರಣ ಒಂದು ವೇಳೆ ಈ ಪಂದ್ಯಕ್ಕೆ ಮಳೆ ಕಾಟ ಎದುರಾದರೆ ಅಥವಾ ಡ್ರಾ ಆದರೆ ಯಾರನ್ನು ವಿಜೇತರೆಂದು ಘೋಷಿಸಲಾಗುತ್ತದೆ ಎಂಬ ಅನುಮಾನ ಕಾಡುತ್ತಿದೆ. ಅಂತಹ ಸಂದರ್ಭದಲ್ಲಿ ಎರಡೂ ತಂಡಗಳನ್ನು ಜಂಟಿ ವಿಜೇತರೆಂದು ಪರಿಗಣಿಸಲಾಗುತ್ತದೆ.

ಆದರೆ ಮಳೆ ಅಥವಾ ಇತರ ಅಂಶಗಳಿಂದಾಗಿ ಕಳೆದುಹೋದ ಯಾವುದೇ ಸಮಯವನ್ನು ಸರಿದೂಗಿಸಲು ಫೈನಲ್ ಗೆ ಮೀಸಲು ದಿನವನ್ನು ನಿಗದಿ ಪಡಿಸಲಾಗಿದೆ. ಆಟದ ಸಮಯದಲ್ಲಿ ಗಣನೀಯ ನಷ್ಟ ಉಂಟಾದರೆ ಅಥವಾ ಆರಂಭಿಕ ಐದು ದಿನಗಳಲ್ಲಿ ಬೌಲ್ ಮಾಡುವ ಓವರ್‌ಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡುಬಂದರೆ ಮಾತ್ರ ಮೀಸಲು ದಿನವು ಕಾರ್ಯರೂಪಕ್ಕೆ ಬರುತ್ತದೆ.

ಭಾರತ ಮತ್ತು ಆಸ್ಟ್ರೇಲಿಯಾ ಎರಡೂ ತಂಡಗಳಲ್ಲಿ ಸ್ಟಾರ್ ಆಟಗಾರರನ್ನು ಹೊಂದಿರುವ ಕಾರಣ ಫೈನಲ್ ಪಂದ್ಯವು ರೋಚಕ ಮುಖಾಮುಖಿಯಾಗಿರಲಿದೆ. ಭಾರತ ತಂಡಲ್ಲಿ ವಿರಾಟ್ ಕೊಹ್ಲಿ, ಚೇತೇಶ್ವರ ಪೂಜಾರ ಮತ್ತು ರವೀಂದ್ರ ಜಡೇಜಾ ಅವರಂತಹ ಮತ್ತು ಆಸ್ಟ್ರೇಲಿಯಾದ ಪ್ಯಾಟ್ ಕಮ್ಮಿನ್ಸ್, ಸ್ಟೀವ್ ಸ್ಮಿತ್ ಮತ್ತು ಮಾರ್ನಸ್ ಲಬುಶೇನ್ ಅವರಂತಹ ಪ್ರತಿಭಾವಂತರು ಇರುವದರಿಂದ ತೀವ್ರ ಪೈಪೋಟಿಯನ್ನು ನಿರೀಕ್ಷಿಸಬಹುದು.

andolanait

Recent Posts

ಆಷಾಢ ಶುಕ್ರವಾರ : ಪೂರ್ವಸಿದ್ದತೆ ಪರಿಶೀಲಿಸಿದ ಸಚಿವ ಯತೀಂದ್ರ

ಮೈಸೂರು : ಆಷಾಢ ಶುಕ್ರವಾರದ ಶ್ರೀ ಚಾಮುಂಡೇಶ್ವರಿ ಅಮ್ಮನವರ ವಿಶೇಷ ಪೂಜೆ ಪ್ರಯುಕ್ತ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮೂಲಸೌಕರ್ಯ…

2 hours ago

ಮಂಡ್ಯ ವಿವಿ ಅಭಿವೃದ್ಧಿಗೆ ಅನುಮಾನವೇ ಅಡ್ಡಿ

ಬಿ.ಟಿ.ಮೋಹನ್ ಕುಮಾರ್ ಮಂಡ್ಯ: ಮಂಡ್ಯ ವಿವಿ ಆರಂಭವಾದಾಗಿನಿಂದ ಒಂದಲ್ಲಾ ಒಂದು ಸಮಸ್ಯೆ ಎದುರಾಗುತ್ತಿದ್ದು, ವಿವಿಗೆ ೧೨ಬಿ ಮಾನ್ಯತೆ ಸಿಕ್ಕಿಲ್ಲದಿರುವುದು ಹಲವು…

9 hours ago

ಕೊಡಗು ವಿಶ್ವವಿದ್ಯಾಲಯ ಬಗೆಹರಿಯದ ಕೊರಗು!

ನವೀನ್ ಡಿಸೋಜ ಮಂಗಳೂರು ವಿವಿ ಅಧೀನದಲ್ಲಿದ್ದ ಕೊಡಗು ಈಗ ಪ್ರತ್ಯೇಕ ವಿವಿಯಾಗಿ ರೂಪುಗೊಂಡಿದೆ. ಆದರೆ, ಆಡಳಿತಾತ್ಮಕ ಹುದ್ದೆ ಭರ್ತಿಯಾಗದಿರುವುದು ಮತ್ತು…

9 hours ago

ಚಾ.ನಗರ ವಿವಿಗೆ ಅತಿಥಿ ಅಧ್ಯಾಪಕರೇ ಆಧಾರ!

ಚಾಮರಾಜನಗರ ವಿವಿ ಪ್ರಾರಂಭವಾಗಿ ೩ ವರ್ಷಗಳನ್ನು ಪೂರೈಸಿದೆ. ಈ ಬಾರಿ ಪ್ರಪ್ರಥಮ ಘಟಿಕೋತ್ಸವದ ಸಂಭ್ರಮದಲ್ಲಿದೆ. ಆದರೆ ಇನ್ನೂ ಅತಿಥಿ ಅಧ್ಯಾಪಕರು,…

10 hours ago

ಮೈಸೂರು ವಿವಿಗೆ ಹಣಕಾಸು ಮುಗ್ಗಟ್ಟು

ಗಿರೀಶ್ ಹುಣಸೂರು ರಾಜ್ಯದ ಮೊತ್ತ ಮೊದಲ ವಿವಿ ಎಂಬ ಹೆಗ್ಗಳಿಕೆಯ ಮೈಸೂರು ವಿವಿಗೆ ೧೧೦ ವರ್ಷಗಳಷ್ಟು ಹಿರಿತನವಿದೆ. ಆದರೆ, ಕೆಲವು…

10 hours ago

ಓದುಗರ ಪತ್ರ: ಒಣಗಿದ ಮರ ತೆರವುಗೊಳಿಸಿ

ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…

13 hours ago