ಕ್ರೀಡೆ

WTC Final 2023: ಪಂದ್ಯ ರದ್ದಾದರೆ ಅಥವಾ ಡ್ರಾ ಆದರೆ ಚಾಂಪಿಯನ್ ಯಾರು.?

ಲಂಡನ್: 2022-23ರ ಸಾಲಿನ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಕೂಟದ ಫೈನಲ್ ಪಂದ್ಯವು ಜೂನ್ 7ರಿಂದ ನಡೆಯಲಿದೆ. ಲಂಡನ್ ನ ಓವಲ್ ಮೈದಾನದಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಸೆಣಸಾಡಲಿದೆ.

ಭಾರತ ತಂಡವು ಸತತ ಎರಡನೇ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯ ಆಡುತ್ತಿದೆ. 2021ರ ಚೊಚ್ಚಲ ಫೈನಲ್ ನಲ್ಲಿ ವಿರಾಟ್ ಪಡೆಯನ್ನು ಸೋಲಿಸಿ ನ್ಯೂಜಿಲ್ಯಾಂಡ್ ಮೊದಲ ಚಾಂಪಿಯನ್ ಆಗಿ ಮೂಡಿ ಬಂದಿತ್ತು. ಮತ್ತೊಂದೆಡೆ ಆಸ್ಟ್ರೇಲಿಯಾ ತಂಡವು ಮೊದಲ ಬಾರಿಗೆ ಫೈನಲ್ ಗೆ ಬಂದಿದೆ.

ಫೈನಲ್ ಪಂದ್ಯವಾದ ಕಾರಣ ಒಂದು ವೇಳೆ ಈ ಪಂದ್ಯಕ್ಕೆ ಮಳೆ ಕಾಟ ಎದುರಾದರೆ ಅಥವಾ ಡ್ರಾ ಆದರೆ ಯಾರನ್ನು ವಿಜೇತರೆಂದು ಘೋಷಿಸಲಾಗುತ್ತದೆ ಎಂಬ ಅನುಮಾನ ಕಾಡುತ್ತಿದೆ. ಅಂತಹ ಸಂದರ್ಭದಲ್ಲಿ ಎರಡೂ ತಂಡಗಳನ್ನು ಜಂಟಿ ವಿಜೇತರೆಂದು ಪರಿಗಣಿಸಲಾಗುತ್ತದೆ.

ಆದರೆ ಮಳೆ ಅಥವಾ ಇತರ ಅಂಶಗಳಿಂದಾಗಿ ಕಳೆದುಹೋದ ಯಾವುದೇ ಸಮಯವನ್ನು ಸರಿದೂಗಿಸಲು ಫೈನಲ್ ಗೆ ಮೀಸಲು ದಿನವನ್ನು ನಿಗದಿ ಪಡಿಸಲಾಗಿದೆ. ಆಟದ ಸಮಯದಲ್ಲಿ ಗಣನೀಯ ನಷ್ಟ ಉಂಟಾದರೆ ಅಥವಾ ಆರಂಭಿಕ ಐದು ದಿನಗಳಲ್ಲಿ ಬೌಲ್ ಮಾಡುವ ಓವರ್‌ಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡುಬಂದರೆ ಮಾತ್ರ ಮೀಸಲು ದಿನವು ಕಾರ್ಯರೂಪಕ್ಕೆ ಬರುತ್ತದೆ.

ಭಾರತ ಮತ್ತು ಆಸ್ಟ್ರೇಲಿಯಾ ಎರಡೂ ತಂಡಗಳಲ್ಲಿ ಸ್ಟಾರ್ ಆಟಗಾರರನ್ನು ಹೊಂದಿರುವ ಕಾರಣ ಫೈನಲ್ ಪಂದ್ಯವು ರೋಚಕ ಮುಖಾಮುಖಿಯಾಗಿರಲಿದೆ. ಭಾರತ ತಂಡಲ್ಲಿ ವಿರಾಟ್ ಕೊಹ್ಲಿ, ಚೇತೇಶ್ವರ ಪೂಜಾರ ಮತ್ತು ರವೀಂದ್ರ ಜಡೇಜಾ ಅವರಂತಹ ಮತ್ತು ಆಸ್ಟ್ರೇಲಿಯಾದ ಪ್ಯಾಟ್ ಕಮ್ಮಿನ್ಸ್, ಸ್ಟೀವ್ ಸ್ಮಿತ್ ಮತ್ತು ಮಾರ್ನಸ್ ಲಬುಶೇನ್ ಅವರಂತಹ ಪ್ರತಿಭಾವಂತರು ಇರುವದರಿಂದ ತೀವ್ರ ಪೈಪೋಟಿಯನ್ನು ನಿರೀಕ್ಷಿಸಬಹುದು.

andolanait

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

1 hour ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

2 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

3 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

3 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

4 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

5 hours ago