ಲಂಡನ್: 2022-23ರ ಸಾಲಿನ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಕೂಟದ ಫೈನಲ್ ಪಂದ್ಯವು ಜೂನ್ 7ರಿಂದ ನಡೆಯಲಿದೆ. ಲಂಡನ್ ನ ಓವಲ್ ಮೈದಾನದಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಸೆಣಸಾಡಲಿದೆ.
ಭಾರತ ತಂಡವು ಸತತ ಎರಡನೇ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯ ಆಡುತ್ತಿದೆ. 2021ರ ಚೊಚ್ಚಲ ಫೈನಲ್ ನಲ್ಲಿ ವಿರಾಟ್ ಪಡೆಯನ್ನು ಸೋಲಿಸಿ ನ್ಯೂಜಿಲ್ಯಾಂಡ್ ಮೊದಲ ಚಾಂಪಿಯನ್ ಆಗಿ ಮೂಡಿ ಬಂದಿತ್ತು. ಮತ್ತೊಂದೆಡೆ ಆಸ್ಟ್ರೇಲಿಯಾ ತಂಡವು ಮೊದಲ ಬಾರಿಗೆ ಫೈನಲ್ ಗೆ ಬಂದಿದೆ.
ಫೈನಲ್ ಪಂದ್ಯವಾದ ಕಾರಣ ಒಂದು ವೇಳೆ ಈ ಪಂದ್ಯಕ್ಕೆ ಮಳೆ ಕಾಟ ಎದುರಾದರೆ ಅಥವಾ ಡ್ರಾ ಆದರೆ ಯಾರನ್ನು ವಿಜೇತರೆಂದು ಘೋಷಿಸಲಾಗುತ್ತದೆ ಎಂಬ ಅನುಮಾನ ಕಾಡುತ್ತಿದೆ. ಅಂತಹ ಸಂದರ್ಭದಲ್ಲಿ ಎರಡೂ ತಂಡಗಳನ್ನು ಜಂಟಿ ವಿಜೇತರೆಂದು ಪರಿಗಣಿಸಲಾಗುತ್ತದೆ.
ಆದರೆ ಮಳೆ ಅಥವಾ ಇತರ ಅಂಶಗಳಿಂದಾಗಿ ಕಳೆದುಹೋದ ಯಾವುದೇ ಸಮಯವನ್ನು ಸರಿದೂಗಿಸಲು ಫೈನಲ್ ಗೆ ಮೀಸಲು ದಿನವನ್ನು ನಿಗದಿ ಪಡಿಸಲಾಗಿದೆ. ಆಟದ ಸಮಯದಲ್ಲಿ ಗಣನೀಯ ನಷ್ಟ ಉಂಟಾದರೆ ಅಥವಾ ಆರಂಭಿಕ ಐದು ದಿನಗಳಲ್ಲಿ ಬೌಲ್ ಮಾಡುವ ಓವರ್ಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡುಬಂದರೆ ಮಾತ್ರ ಮೀಸಲು ದಿನವು ಕಾರ್ಯರೂಪಕ್ಕೆ ಬರುತ್ತದೆ.
ಭಾರತ ಮತ್ತು ಆಸ್ಟ್ರೇಲಿಯಾ ಎರಡೂ ತಂಡಗಳಲ್ಲಿ ಸ್ಟಾರ್ ಆಟಗಾರರನ್ನು ಹೊಂದಿರುವ ಕಾರಣ ಫೈನಲ್ ಪಂದ್ಯವು ರೋಚಕ ಮುಖಾಮುಖಿಯಾಗಿರಲಿದೆ. ಭಾರತ ತಂಡಲ್ಲಿ ವಿರಾಟ್ ಕೊಹ್ಲಿ, ಚೇತೇಶ್ವರ ಪೂಜಾರ ಮತ್ತು ರವೀಂದ್ರ ಜಡೇಜಾ ಅವರಂತಹ ಮತ್ತು ಆಸ್ಟ್ರೇಲಿಯಾದ ಪ್ಯಾಟ್ ಕಮ್ಮಿನ್ಸ್, ಸ್ಟೀವ್ ಸ್ಮಿತ್ ಮತ್ತು ಮಾರ್ನಸ್ ಲಬುಶೇನ್ ಅವರಂತಹ ಪ್ರತಿಭಾವಂತರು ಇರುವದರಿಂದ ತೀವ್ರ ಪೈಪೋಟಿಯನ್ನು ನಿರೀಕ್ಷಿಸಬಹುದು.
ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…
ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…
ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…
ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…