ಕ್ರೀಡೆ

WTC ಫೈನಲ್‌: ಆಸ್ಟ್ರೇಲಿಯ ರಣತಂತ್ರ: ಭಾರತಕ್ಕೆ ಬೃಹತ್ ಗುರಿ ನೀಡಿ ಶಾಕ್

ಲಂಡನ್: ಇಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಆಸ್ಟ್ರೇಲಿಯ ಶನಿವಾರ ನಾಲ್ಕನೇ ದಿನದ ಆಟದಲ್ಲಿ 8 ವಿಕೆಟ್ ನಷ್ಟಕ್ಕೆ 270 ರನ್ ಗಳಿಸಿ ಎರಡನೇ ಇನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿದ್ದು,ಭಾರತಕ್ಕೆ 444 ರನ್‌ಗಳ ಬೃಹತ್ ಗುರಿಯನ್ನು ನೀಡಿದೆ.

ಬೃಹತ್ ಗುರಿ ಬೆನ್ನಟ್ಟಿದ ಭಾರತ ಎರಡನೇ ಇನ್ನಿಂಗ್ಸ್ ನಲ್ಲಿ 41 ರನ್ ಆಗುವಷ್ಟರಲ್ಲಿ ಶುಭ್ ಮನ್ ಗಿಲ್ ಅವರ ಮೊದಲ ವಿಕೆಟ್ ಕಳೆದುಕೊಂಡು ಆಘಾತ ಅನುಭವಿಸಿದೆ.

ಆಸ್ಟ್ರೇಲಿಯ ಮೊದಲ ಇನಿಂಗ್ಸ್‌ನಲ್ಲಿ 173 ರನ್‌ಗಳ ಬೃಹತ್ ಮುನ್ನಡೆ ಸಾಧಿಸಿತ್ತು. ಶನಿವಾರ 4 ವಿಕೆಟ್‌ಗೆ 123 ರನ್‌ಗಳಿಂದ ಆಟ ಪುನರಾರಂಭಿಸಿ 147 ರನ್‌ಗಳನ್ನು ಸೇರಿಸಿ ನಾಯಕ ಪ್ಯಾಟ್ ಕಮಿನ್ಸ್ ನಾಲ್ಕನೇ ದಿನದ ಊಟದ ನಂತರದ ಅವಧಿಯ ಒಂದು ಗಂಟೆಯಲ್ಲಿ ಇನ್ನಿಂಗ್ಸ್ ಅನ್ನು ಡಿಕ್ಲೇರ್ ಮಾಡಿದರು. ಎರಡನೇ ಇನ್ನಿಂಗ್ಸ್‌ನಲ್ಲಿ ಅಜೇಯ 66 ರನ್ ಗಳಿಸಿದ ಅಲೆಕ್ಸ್ ಕ್ಯಾರಿ ಆಸ್ಟ್ರೇಲಿಯದ ಪರ ಗರಿಷ್ಠ ಸ್ಕೋರರ್ ಆಗಿದ್ದರು.

ಮೊಹಮ್ಮದ್ ಶಮಿ (2/39), ರವೀಂದ್ರ ಜಡೇಜಾ (3/58), ಉಮೇಶ್ ಯಾದವ್ (2/54) ಮತ್ತು ನಾಲ್ಕನೇ ದಿನದಂದು ಭಾರತದ ನಾಲ್ಕು ವಿಕೆಟ್‌ಗಳನ್ನು ಪಡೆದರು.

ಅಗ್ರ ಕ್ರಮಾಂಕ ಕುಸಿದ ನಂತರ ಅಜಿಂಕ್ಯ ರಹಾನೆ (89) ಮತ್ತು ಶಾರ್ದೂಲ್ ಠಾಕೂರ್ (51) ಮೊದಲ ಇನ್ನಿಂಗ್ಸ್‌ನಲ್ಲಿ ಭಾರತವನ್ನು 296 ರನ್‌ಗಳಿಗೆ ಮುನ್ನಡೆಸಿದ್ದರು.

ಸಂಕ್ಷಿಪ್ತ ಸ್ಕೋರ್ 

ಆಸ್ಟ್ರೇಲಿಯ: 469 ಮತ್ತು 84.3 ಓವರ್‌ಗಳಲ್ಲಿ 8 ವಿಕೆಟ್‌ಗೆ 270 ಡಿಕ್ಲೇರ್ಡ್ (ಅಲೆಕ್ಸ್ ಕ್ಯಾರಿ ಔಟಾಗದೆ 66, ಸ್ಟಾರ್ಕ್ 41, ರವೀಂದ್ರ ಜಡೇಜಾ 3/58).
ಭಾರತ ಮೊದಲ ಇನಿಂಗ್ಸ್: 296

andolanait

Recent Posts

ಉದ್ಯಮಿಯ ಪರಿಶ್ರಮದಿಂದ ಕಾಯಕಲ್ಪ ಪಡೆದ ಉದ್ಯಾನ

ತಿ.ನರಸೀಪುರ: ಪಟ್ಟಣದ ಕಪಿಲಾ ನದಿ ದಂಡೆಯ ಶ್ರೀ ಬಳ್ಳೇಶ್ವರ ಸ್ವಾಮಿ ದೇವಸ್ಥಾನದ ಬಳಿಯ ಪಾರ್ಕ್ ಹೋಟೆಲ್ ಉದ್ಯಮಿಯೊಬ್ಬರ ಪರಿಶ್ರಮದಿಂದ ಕಾಯಕಲ್ಪ…

6 mins ago

ಶತಮಾನದ ದೇವರಾಜ ಶಾಲೆಯ ಶೋಕಗೀತೆ

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ದೇವರಾಜ ಮೊಹಲ್ಲಾದಲ್ಲಿರುವ ಶತಮಾನ ತುಂಬಿರುವ ದೇವರಾಜ ಸರ್ಕಾರಿ ಹಿರಿಯ…

9 mins ago

ಅಭದ್ರತೆ ಹಾದಿಯಲಿ ವಿಕಸಿತ ಭಾರತದತ್ತ ‘ಆನಿ (ಆಮೆ) ನಡಿಗೆ’

ರಾಜಾರಾಂ ತಲ್ಲೂರು ಆರ್ಥಿಕ ಶಿಸ್ತಿನ ಚೌಕಟ್ಟಿನ ಒಂದೊಂದೇ ಅಂಶಗಳನ್ನು ಮುಂದಿಟ್ಟುಕೊಂಡು - ‘ನೋಡಿ, ನಾವು ಆರ್ಥಿಕವಾಗಿ ಸ್ಥಿರವಾಗಿದ್ದು, ವಿಕಸಿತ ಭಾರತದತ್ತ…

33 mins ago

2030ರ ವೇಳೆಗೆ 2 ಮಿಲಿಯನ್‌ ಉದ್ಯೋಗ ಸೃಷ್ಟಿ, ಅಭಿವೃದ್ಧಿ ಪರ ಆಯವ್ಯಯ : ಸಂಸದ ಯದುವೀರ್‌

ಮೈಸೂರು : ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ…

9 hours ago

ಜನರನ್ನು ದಿಕ್ಕು ತಪ್ಪಿಸುತ್ತಿರುವ ಎನ್‌ಸಿಬಿ : ಎಂ.ಲಕ್ಷ್ಮಣ್‌ ಆರೋಪ

ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್‌ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ.…

9 hours ago