ಕ್ರೀಡೆ

WTC ಫೈನಲ್‌: ಆಸ್ಟ್ರೇಲಿಯ ರಣತಂತ್ರ: ಭಾರತಕ್ಕೆ ಬೃಹತ್ ಗುರಿ ನೀಡಿ ಶಾಕ್

ಲಂಡನ್: ಇಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಆಸ್ಟ್ರೇಲಿಯ ಶನಿವಾರ ನಾಲ್ಕನೇ ದಿನದ ಆಟದಲ್ಲಿ 8 ವಿಕೆಟ್ ನಷ್ಟಕ್ಕೆ 270 ರನ್ ಗಳಿಸಿ ಎರಡನೇ ಇನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿದ್ದು,ಭಾರತಕ್ಕೆ 444 ರನ್‌ಗಳ ಬೃಹತ್ ಗುರಿಯನ್ನು ನೀಡಿದೆ.

ಬೃಹತ್ ಗುರಿ ಬೆನ್ನಟ್ಟಿದ ಭಾರತ ಎರಡನೇ ಇನ್ನಿಂಗ್ಸ್ ನಲ್ಲಿ 41 ರನ್ ಆಗುವಷ್ಟರಲ್ಲಿ ಶುಭ್ ಮನ್ ಗಿಲ್ ಅವರ ಮೊದಲ ವಿಕೆಟ್ ಕಳೆದುಕೊಂಡು ಆಘಾತ ಅನುಭವಿಸಿದೆ.

ಆಸ್ಟ್ರೇಲಿಯ ಮೊದಲ ಇನಿಂಗ್ಸ್‌ನಲ್ಲಿ 173 ರನ್‌ಗಳ ಬೃಹತ್ ಮುನ್ನಡೆ ಸಾಧಿಸಿತ್ತು. ಶನಿವಾರ 4 ವಿಕೆಟ್‌ಗೆ 123 ರನ್‌ಗಳಿಂದ ಆಟ ಪುನರಾರಂಭಿಸಿ 147 ರನ್‌ಗಳನ್ನು ಸೇರಿಸಿ ನಾಯಕ ಪ್ಯಾಟ್ ಕಮಿನ್ಸ್ ನಾಲ್ಕನೇ ದಿನದ ಊಟದ ನಂತರದ ಅವಧಿಯ ಒಂದು ಗಂಟೆಯಲ್ಲಿ ಇನ್ನಿಂಗ್ಸ್ ಅನ್ನು ಡಿಕ್ಲೇರ್ ಮಾಡಿದರು. ಎರಡನೇ ಇನ್ನಿಂಗ್ಸ್‌ನಲ್ಲಿ ಅಜೇಯ 66 ರನ್ ಗಳಿಸಿದ ಅಲೆಕ್ಸ್ ಕ್ಯಾರಿ ಆಸ್ಟ್ರೇಲಿಯದ ಪರ ಗರಿಷ್ಠ ಸ್ಕೋರರ್ ಆಗಿದ್ದರು.

ಮೊಹಮ್ಮದ್ ಶಮಿ (2/39), ರವೀಂದ್ರ ಜಡೇಜಾ (3/58), ಉಮೇಶ್ ಯಾದವ್ (2/54) ಮತ್ತು ನಾಲ್ಕನೇ ದಿನದಂದು ಭಾರತದ ನಾಲ್ಕು ವಿಕೆಟ್‌ಗಳನ್ನು ಪಡೆದರು.

ಅಗ್ರ ಕ್ರಮಾಂಕ ಕುಸಿದ ನಂತರ ಅಜಿಂಕ್ಯ ರಹಾನೆ (89) ಮತ್ತು ಶಾರ್ದೂಲ್ ಠಾಕೂರ್ (51) ಮೊದಲ ಇನ್ನಿಂಗ್ಸ್‌ನಲ್ಲಿ ಭಾರತವನ್ನು 296 ರನ್‌ಗಳಿಗೆ ಮುನ್ನಡೆಸಿದ್ದರು.

ಸಂಕ್ಷಿಪ್ತ ಸ್ಕೋರ್ 

ಆಸ್ಟ್ರೇಲಿಯ: 469 ಮತ್ತು 84.3 ಓವರ್‌ಗಳಲ್ಲಿ 8 ವಿಕೆಟ್‌ಗೆ 270 ಡಿಕ್ಲೇರ್ಡ್ (ಅಲೆಕ್ಸ್ ಕ್ಯಾರಿ ಔಟಾಗದೆ 66, ಸ್ಟಾರ್ಕ್ 41, ರವೀಂದ್ರ ಜಡೇಜಾ 3/58).
ಭಾರತ ಮೊದಲ ಇನಿಂಗ್ಸ್: 296

andolanait

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

37 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 21 ಶುಕ್ರವಾರ

3 hours ago

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

15 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

16 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

18 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

18 hours ago