ಕ್ರೀಡೆ

WTC Final: ಕೆಟ್ಟದಾಗಿ ವಿಕೆಟ್‌ ಒಪ್ಪಿಸಿದ ರೋಹಿತ್‌ ಶರ್ಮಾ ವಿರುದ್ದ ಗವಾಸ್ಕರ್‌ ಆಕ್ರೋಶ!

ಲಂಡನ್‌: ಆಸ್ಟ್ರೇಲಿಯಾ ವಿರುದ್ಧ ಎರಡನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ ಫೈನಲ್‌ ಪಂದ್ಯದ ಪ್ರಥಮ ಇನಿಂಗ್ಸ್‌ನಲ್ಲಿ ಬೇಜವಾಬ್ದಾರಿಯುತವಾಗಿ ವಿಕೆಟ್‌ ಒಪ್ಪಿಸಿದ ಟೀಮ್‌ ಇಂಡಿಯಾ ನಾಯಕ ರೋಹಿತ್‌ ಶರ್ಮಾ ವಿರುದ್ಧ ಬ್ಯಾಟಿಂಗ್‌ ದಿಗ್ಗಜ ಸುನೀಲ್‌ ಗವಾಸ್ಕರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಲ್ಲಿನ ದಿ ಓವಲ್‌ ಮೈದಾನದಲ್ಲಿ ನಡೆಯುತ್ತಿರುವ ಡಬ್ಲ್ಯುಟಿಸಿಯ ಫೈನಲ್‌ ಪಂದ್ಯದಲ್ಲಿ ಭಾರತ ತಂಡ ಸಂಕಷ್ಟಕ್ಕೆ ಸಿಲುಕಿದೆ. ಪ್ರಥಮ ಇನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ 469 ರನ್‌ಗಳಿಗೆ ಆಲೌಟ್ ಆಗಿದ್ದರೆ, ಟೀಮ್‌ ಇಂಡಿಯಾ ಎರಡನೇ ದಿನದಾಟದ ಅಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 151 ರನ್ ಗಳಿಸಿದೆ. ಸದ್ಯ ಭಾರತ 318 ರನ್‌ಗಳ ಹಿನ್ನಡೆಯಲ್ಲಿದ್ದು, ಕೈಯಲ್ಲಿ ಕೇವಲ ಐದು ವಿಕೆಟ್‌ಗಳಿವೆ.

ಈ ಟೆಸ್ಟ್ ಪಂದ್ಯದಲ್ಲಿ ಸೋಲಿನಿಂದ ತಪ್ಪಿಸಿಕೊಳ್ಳಬೇಕೆಂದರೆ ಭಾರತ ತಂಡದ ಆಟಗಾರರು ಅಸಾಧಾರಣ ಪ್ರದರ್ಶನ ತೋರಬೇಕಾದ ಅಗತ್ಯವಿದೆ. ಏಕೆಂದರೆ ಶುಭಮನ್ ಗಿಲ್‌, ರೋಹಿತ್‌ ಶರ್ಮಾ, ಚೇತೇಶ್ವರ್ ಪೂಜಾರ, ವಿರಾಟ್‌ ಕೊಹ್ಲಿ ಅವರು ಪ್ರಥಮ ಇನಿಂಗ್ಸ್‌ನಲ್ಲಿ ವೈಫಲ್ಯ ಅನುಭವಿಸಿದ್ದಾರೆ. ಮೂರನೇ ದಿನವಾದ ಶುಕ್ರವಾರ ಅಜಿಂಕ್ಯ ರಹಾನೆ (29*) ಅವರಿಂದ ದೊಡ್ಡ ಇನಿಂಗ್ಸ್ ನಿರೀಕ್ಷೆ ಇದೆ.

ಎರಡನೇ ದಿನದಾಟದ ಅಂತ್ಯಕ್ಕೆ ಸ್ಟಾರ್‌ ಸ್ಪೋರ್ಟ್ಸ್‌ ಜೊತೆ ಮಾತನಾಡಿದ ಸುನೀಲ್‌ ಗವಾಸ್ಕರ್‌, “ಶುಭಮನ್‌ ಗಿಲ್‌ ಸೇರಿದಂತೆ ಭಾರತ ತಂಡದಿಂದ ಎರಡು ತಪ್ಪು ನಿರ್ಣಯಗಳು ಸಂಭವಿಸಿವೆ. ಐಪಿಎಲ್‌ ಟೂರ್ನಿಯಲ್ಲಿ ಅದ್ಭುತ ಫಾರ್ಮ್‌ನಲ್ಲಿದ್ದ ಗಿಲ್ ವಿಕೆಟ್‌ ಭಾರತಕ್ಕೆ ದೊಡ್ಡ ನಷ್ಟವನ್ನುಂಟು ಮಾಡಿದೆ. ಮತ್ತೊಂದೆಡೆ ಐಪಿಎಲ್‌ನಿಂದಲೂ ರೋಹಿತ್‌ ಶರ್ಮಾ ಉತ್ತಮ ಫಾರ್ಮ್‌ನಲ್ಲಿಲ್ಲ. ಹಾಗಾಗಿ ಅಕ್ರಾಸ್‌ ದಿ ಲೈನ್‌ ಅವರು ಆಡಬಾರದಿತ್ತು. ಮತ್ತೊಮ್ಮೆ ಚೇತೇಶ್ವರ್ ಪೂಜಾರ ಆಫ್‌ ಸ್ಟಂಪ್‌ ಕವರ್‌ ಮಾಡಿಕೊಳ್ಳದೆ ತಪ್ಪು ಮಾಡಿದರು. ಈ ಮೂರು ಔಟ್‌ಗಳನ್ನು ತಪ್ಪಿಸಬಹುದಿತ್ತು,” ಎಂದು ಹೇಳಿದ್ದಾರೆ.

“ಆದರೆ, ಇದರ ಶ್ರೇಯ ಆಸ್ಟ್ರೇಲಿಯಾ ಬೌಲರ್‌ಗಳಿಗೆ ಸಲ್ಲಬೇಕು. ಅವರು ಸಂಪೂರ್ಣವಾಗಿ ಫುಲ್‌ ಲೆನ್ತ್‌ಗಳನ್ನು ಆಡಿಸಿದ್ದಾರೆ. ಆ ಮೂಲಕ ಬ್ಯಾಟ್ಸ್‌ಮನ್‌ಗಳನ್ನು ಚಿಂತೆಗೀಡು ಮಾಡಿದ್ದರು. ಈ ರೀತಿ ಫುಲ್‌ ಲೆನ್ತ್‌ ಹಾಕಿದಾಗ ಆಫ್‌ ಸ್ಟಂಪ್‌ನಲ್ಲಿ ನೀವು ಎಷ್ಟೇ ಶಕ್ತಿಯುತವಾಗಿದ್ದರೂ ಕೆಲ ಗೊಂದಲ ಉಂಟಾಗುವುದು ಸಹಜ,” ಎಂದು ಸುನೀಲ್‌ ಗವಾಸ್ಕರ್‌ ಹೇಳಿದ್ದಾರೆ.

andolanait

Recent Posts

2030ರ ವೇಳೆಗೆ 2 ಮಿಲಿಯನ್‌ ಉದ್ಯೋಗ ಸೃಷ್ಟಿ, ಅಭಿವೃದ್ಧಿ ಪರ ಆಯವ್ಯಯ : ಸಂಸದ ಯದುವೀರ್‌

ಮೈಸೂರು : ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ…

3 hours ago

ಜನರನ್ನು ದಿಕ್ಕು ತಪ್ಪಿಸುತ್ತಿರುವ ಎನ್‌ಸಿಬಿ : ಎಂ.ಲಕ್ಷ್ಮಣ್‌ ಆರೋಪ

ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್‌ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ.…

4 hours ago

ಬಡತನ ಪ್ರಮಾಣ ಗಣನೀಯ ಇಳಿಕೆ: ನಿರ್ಮಲಾ

ಹೊಸದಿಲ್ಲಿ: ಕಳೆದ 12 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಶಿಸ್ತುಬದ್ಧ ಆರ್ಥಿಕ ನಿರ್ವಹಣೆ ನಡೆಯುತ್ತಿರುವುದರಿಂದ ಭಾರತದ ಜಿಡಿಪಿ ದರ…

4 hours ago

ಕೇಂದ್ರ ಬಜೆಟ್‌ | 17.2 ಲಕ್ಷ ಕೋಟಿ ರೂ. ಸಾಲ

ಹೊಸದಿಲ್ಲಿ : ಕೇಂದ್ರ ಸರ್ಕಾರ 2026-27 ನೇ ಸಾಲಿಗೆ 17.2 ಲಕ್ಷ ಕೋಟಿ ರೂ. ಸಾಲ ಪಡೆಯಲಿದೆ ಎಂದು ಹಣಕಾಸು…

4 hours ago

ಕೇಂದ್ರ ಬಜೆಟ್‌ | ಯಾವುದು ಅಗ್ಗ, ಯಾವುದು ದುಬಾರಿ ?

ಹೊಸದಿಲ್ಲಿ : ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಆಯವ್ಯಯದಲ್ಲಿ…

4 hours ago

ಕರ್ನಾಟಕ ವಿರೋಧಿ ಬಜೆಟ್‌ : ಎಚ್‌ಸಿಎಂ ವ್ಯಂಗ್ಯ

ಬೆಂಗಳೂರು : ಹಣಕಾಸು ತಜ್ಞೆ ಅಲ್ಲದ ಕೇಂದ್ರದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ೯ನೇ ಕಳಪೆ ಬಜೆಟ್ ಇದಾಗಿದೆ.…

4 hours ago