ಕ್ರೀಡೆ

ಡಬ್ಲ್ಯುಟಿಸಿ ಫೈನಲ್‌: ಶುಭ್‌ಮನ್‌ ಗಿಲ್‌ಗೆ ದಂಡ

ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಡಿಫೆನ್ಸ್‌ ಪ್ರಯತ್ನದಲ್ಲಿದ್ದ ಶುಭ್‌ಮನ್‌ ಗಿಲ್‌ ಅವರನ್ನು ವಂಚಿಸಿದ ಚೆಂಡು ಸ್ಲಿಪ್‌ನಲ್ಲಿ ನಿಂತಿದ್ದ ಕ್ಯಾಮರಾನ್‌ ಗ್ರೀನ್‌ ಅವರ ಕೈ ಸೇರಿತ್ತು. ಗ್ರೀನ್‌ ಅದ್ಭುತವಾಗಿ ಕ್ಯಾಚ್‌ ಹಿಡಿದಿದ್ದರೂ, ಈ ಕ್ಯಾಚ್‌ ಆಟಗಾರರರಿಗೂ ಕ್ರಿಕೆಟ್‌ ಅಭಿಮಾನಿಗಳಿಗೂ ಸಂದೇಹ ತರಿಸಿತ್ತು.

ಈ ವಿವಾದಾತ್ಮಕ ತೀರ್ಪಿನಿಂದ ಅಸಮಾಧಾನಗೊಂಡಿದ್ದ ಶುಭ್‌ಮನ್‌ ಗಿಲ್‌ ಟಿವಿ ಅಂಪೈರ್‌ ನೀಡಿದ್ದ ಈ ತೀರ್ಪನ್ನು ಟೀಕಿಸಿದ್ದರು. ಈ ಕಾರಣಕ್ಕಾಗಿ ಗಿಲ್‌ ಅವರಿಗೆ ಪಂದ್ಯ ಶುಲ್ಕದ ಶೇ. 15 ರಷ್ಟು ದಂಡ ವಿಧಿಸಲಾಗಿದೆ.

ಶನಿವಾರ ನಾಲ್ಕನೇ ದಿನದಾಟದ ಅಂತ್ಯಕ್ಕೆ ಶುಭ್‌ಮನ್‌ ಗಿಲ್‌ ಅವರು ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್‌ ಸ್ಟೋರಿಯಲ್ಲಿ ಗ್ರೀನ್‌ ಕ್ಯಾಚ್‌ ಪಡೆಯುತ್ತಿರುವ ಸ್ಕ್ರೀನ್‌ಶಾಟ್‌ ಜೊತೆಗೆ ʻಚಪ್ಪಾಳೆ ತಟ್ಟುತ್ತಿರುವʼ ಎಮೋಜಿಯನ್ನು ಸ್ಟೋರಿ ಹಾಕಿದ್ದರು. ಅದು ತಮ್ಮ ಕ್ಯಾಚ್‌ ಔಟ್‌ ತೀರ್ಪಿನ ಬಗ್ಗೆ ಅಂಪೈರ್‌ಗಳ ವಿರುದ್ಧ ಅಸಮಾಧಾನ ಹೊರಹಾಕಿದಂತಿತ್ತು.

ಮೂರನೇ ಅಂಪೈರ್‌ ಅವರ  ನಿರ್ಧಾರವನ್ನು ಟೀಕಿಸುವ ಮೂಲಕ ಮೂಲಕ ಗಿಲ್‌ ಅವರು ಐಸಿಸಿ ಮೊದಲನೇ ಹಂತದ ನಿಯಮವನ್ನು ಉಲ್ಲಂಘಿಸಿದ್ದಾರೆ. ಹೀಗಾಗಿ ಅವರಿಗೆ ಪಂದ್ಯ ಶುಲ್ಕದ ಶೇ.15 ರಷ್ಟು ದಂಡ ವಿಧಿಸಗಿದೆ.

ಭಾರತ- ಅಸ್ಟ್ರೇಲಿಯ ತಂಡಗಳಿಗೂ ದಂಡ

ನಿಧಾನಗತಿಯ ಬೌಲಿಂಗ್‌ಗಾಗಿ ಟೀಮ್‌ ಇಂಡಿಯಾಗೆ ಪಂದ್ಯ ಶುಲ್ಕದ ಶೇ. 100 ರಷ್ಟು ದಂಡ ವಿಧಿಸಲಾಗಿದೆ. ಅದಲ್ಲದೇ ಆಸ್ಟ್ರೇಲಿಯಾ ತಂಡಕ್ಕೂ ಪಂದ್ಯ ಶುಲ್ಕದಲ್ಲಿ ಶೇ. 80ರಷ್ಟು ದಂಡವನ್ನು ವಿಧಿಸಲಾಗಿದೆ ಎಂದು ಐಸಿಸಿ ಹೇಳಿಕೊಂಡಿದೆ.

andolanait

Recent Posts

ಮಾರ್ಚ್.‌3ರಂದು ರಕ್ತಚಂದ್ರಗ್ರಹಣ: ನಾನಾ ದೇವಾಲಯಗಳಲ್ಲಿ ದರ್ಶನ ಸಮಯ ಬದಲಾವಣೆ

ಮೈಸೂರು: ಮಾರ್ಚ್.‌3ರಂದು ರಕ್ತಚಂದ್ರಗ್ರಹಣದ ಹಿನ್ನೆಲೆಯಲ್ಲಿ ಮೈಸೂರು ಚಾಮುಂಡೇಶ್ವರಿ ದೇವಾಲಯ ಸೇರಿದಂತೆ ರಾಜ್ಯದ ಹಲವು ದೇವಾಲಯಗಳಲ್ಲಿ ಭಕ್ತರ ದರ್ಶನದ ಸಮಯವನ್ನು ಬದಲಾವಣೆ…

17 mins ago

ಹಿಂದೂ ಯುವಕನ ಮೇಲೆ ಹಲ್ಲೆ ಪ್ರಕರಣ: ಕೈ ಶಾಸಕ ಮಂಥರ್‌ ಗೌಡ ಖಂಡನೆ

ಕೊಡಗು: ಅನ್ಯಕೋಮಿನ ಯುವಕರು ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಪ್ರಕರಣವನ್ನು ಕಾಂಗ್ರೆಸ್‌ ಶಾಸಕ ಮಂಥರ್‌ ಗೌಡ ಖಂಡಿಸಿದ್ದಾರೆ. ಈ…

1 hour ago

ಚಂದ್ರಗ್ರಹಣದ ವೇಳೆ ಧರ್ಮಸ್ಥಳ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ದರ್ಶನ ಸಮಯ ಬದಲಾವಣೆ

ಮಂಗಳೂರು: ಮಾರ್ಚ್.‌3ರಂದು ಈ ವರ್ಷದ ಮೊದಲ ಚಂದ್ರಗ್ರಹಣ ಸಂಭವಿಸಲಿದೆ. ರಕ್ತ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ದರ್ಶನ ಸಮಯ…

3 hours ago

ಎರಡು ಕ್ಷೇತ್ರದ ಉಪಚುನಾವಣೆ: ಸಿಎಂ, ಡಿಸಿಎಂ ಮಹತ್ವದ ಸಭೆ

ಬೆಂಗಳೂರು: ಕಾಂಗ್ರೆಸ್‌ ಶಾಸಕರ ನಿಧನದ ಕಾರಣ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರದ ಉಪಚುನಾವಣೆಗೆ ಶೀಘ್ರದಲ್ಲೇ ದಿನಾಂಕ ಘೋಷಣೆ ಆಗಲಿದೆ.…

3 hours ago

ಶಾಸಕರ ಡಿನ್ನರ್‌ ಮೀಟಿಂಗ್‌: ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಿಷ್ಟು.!

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಬಣದ ಕೆಲ ಶಾಸಕರು ಖಾಸಗಿ ಹೋಟೆಲ್‌ನಲ್ಲಿ ಡಿನ್ನರ್‌ ಮೀಟಿಂಗ್‌ ನಡೆಸಿದ್ದಾರೆ ಎಂಬ ಸುದ್ದಿ ಹಿನ್ನೆಲೆಯಲ್ಲಿ ಈ…

3 hours ago

ಮಾರ್ಚ್.‌3ರಂದು ರಕ್ತಚಂದ್ರಗ್ರಹಣ: ರಾಜ್ಯದಲ್ಲಿ 25 ನಿಮಿಷ ಗ್ರಹಣ ಗೋಚರ

ಬೆಂಗಳೂರು: ಮಾರ್ಚ್.‌3ರಂದು ಕೇತುಗ್ರಸ್ತ ಚಂದ್ರಗ್ರಹಣ ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ ಮಾಸದ ಹುಣ್ಣಿಮೆಯ…

4 hours ago