ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದ ಎರಡನೇ ಇನ್ನಿಂಗ್ಸ್ನಲ್ಲಿ ಡಿಫೆನ್ಸ್ ಪ್ರಯತ್ನದಲ್ಲಿದ್ದ ಶುಭ್ಮನ್ ಗಿಲ್ ಅವರನ್ನು ವಂಚಿಸಿದ ಚೆಂಡು ಸ್ಲಿಪ್ನಲ್ಲಿ ನಿಂತಿದ್ದ ಕ್ಯಾಮರಾನ್ ಗ್ರೀನ್ ಅವರ ಕೈ ಸೇರಿತ್ತು. ಗ್ರೀನ್ ಅದ್ಭುತವಾಗಿ ಕ್ಯಾಚ್ ಹಿಡಿದಿದ್ದರೂ, ಈ ಕ್ಯಾಚ್ ಆಟಗಾರರರಿಗೂ ಕ್ರಿಕೆಟ್ ಅಭಿಮಾನಿಗಳಿಗೂ ಸಂದೇಹ ತರಿಸಿತ್ತು.
ಈ ವಿವಾದಾತ್ಮಕ ತೀರ್ಪಿನಿಂದ ಅಸಮಾಧಾನಗೊಂಡಿದ್ದ ಶುಭ್ಮನ್ ಗಿಲ್ ಟಿವಿ ಅಂಪೈರ್ ನೀಡಿದ್ದ ಈ ತೀರ್ಪನ್ನು ಟೀಕಿಸಿದ್ದರು. ಈ ಕಾರಣಕ್ಕಾಗಿ ಗಿಲ್ ಅವರಿಗೆ ಪಂದ್ಯ ಶುಲ್ಕದ ಶೇ. 15 ರಷ್ಟು ದಂಡ ವಿಧಿಸಲಾಗಿದೆ.
ಶನಿವಾರ ನಾಲ್ಕನೇ ದಿನದಾಟದ ಅಂತ್ಯಕ್ಕೆ ಶುಭ್ಮನ್ ಗಿಲ್ ಅವರು ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಗ್ರೀನ್ ಕ್ಯಾಚ್ ಪಡೆಯುತ್ತಿರುವ ಸ್ಕ್ರೀನ್ಶಾಟ್ ಜೊತೆಗೆ ʻಚಪ್ಪಾಳೆ ತಟ್ಟುತ್ತಿರುವʼ ಎಮೋಜಿಯನ್ನು ಸ್ಟೋರಿ ಹಾಕಿದ್ದರು. ಅದು ತಮ್ಮ ಕ್ಯಾಚ್ ಔಟ್ ತೀರ್ಪಿನ ಬಗ್ಗೆ ಅಂಪೈರ್ಗಳ ವಿರುದ್ಧ ಅಸಮಾಧಾನ ಹೊರಹಾಕಿದಂತಿತ್ತು.
ಮೂರನೇ ಅಂಪೈರ್ ಅವರ ನಿರ್ಧಾರವನ್ನು ಟೀಕಿಸುವ ಮೂಲಕ ಮೂಲಕ ಗಿಲ್ ಅವರು ಐಸಿಸಿ ಮೊದಲನೇ ಹಂತದ ನಿಯಮವನ್ನು ಉಲ್ಲಂಘಿಸಿದ್ದಾರೆ. ಹೀಗಾಗಿ ಅವರಿಗೆ ಪಂದ್ಯ ಶುಲ್ಕದ ಶೇ.15 ರಷ್ಟು ದಂಡ ವಿಧಿಸಗಿದೆ.
ಭಾರತ- ಅಸ್ಟ್ರೇಲಿಯ ತಂಡಗಳಿಗೂ ದಂಡ
ನಿಧಾನಗತಿಯ ಬೌಲಿಂಗ್ಗಾಗಿ ಟೀಮ್ ಇಂಡಿಯಾಗೆ ಪಂದ್ಯ ಶುಲ್ಕದ ಶೇ. 100 ರಷ್ಟು ದಂಡ ವಿಧಿಸಲಾಗಿದೆ. ಅದಲ್ಲದೇ ಆಸ್ಟ್ರೇಲಿಯಾ ತಂಡಕ್ಕೂ ಪಂದ್ಯ ಶುಲ್ಕದಲ್ಲಿ ಶೇ. 80ರಷ್ಟು ದಂಡವನ್ನು ವಿಧಿಸಲಾಗಿದೆ ಎಂದು ಐಸಿಸಿ ಹೇಳಿಕೊಂಡಿದೆ.
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…