ಕ್ರೀಡೆ

ಡಬ್ಲ್ಯುಟಿಸಿ ಫೈನಲ್‌: ಶುಭ್‌ಮನ್‌ ಗಿಲ್‌ಗೆ ದಂಡ

ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಡಿಫೆನ್ಸ್‌ ಪ್ರಯತ್ನದಲ್ಲಿದ್ದ ಶುಭ್‌ಮನ್‌ ಗಿಲ್‌ ಅವರನ್ನು ವಂಚಿಸಿದ ಚೆಂಡು ಸ್ಲಿಪ್‌ನಲ್ಲಿ ನಿಂತಿದ್ದ ಕ್ಯಾಮರಾನ್‌ ಗ್ರೀನ್‌ ಅವರ ಕೈ ಸೇರಿತ್ತು. ಗ್ರೀನ್‌ ಅದ್ಭುತವಾಗಿ ಕ್ಯಾಚ್‌ ಹಿಡಿದಿದ್ದರೂ, ಈ ಕ್ಯಾಚ್‌ ಆಟಗಾರರರಿಗೂ ಕ್ರಿಕೆಟ್‌ ಅಭಿಮಾನಿಗಳಿಗೂ ಸಂದೇಹ ತರಿಸಿತ್ತು.

ಈ ವಿವಾದಾತ್ಮಕ ತೀರ್ಪಿನಿಂದ ಅಸಮಾಧಾನಗೊಂಡಿದ್ದ ಶುಭ್‌ಮನ್‌ ಗಿಲ್‌ ಟಿವಿ ಅಂಪೈರ್‌ ನೀಡಿದ್ದ ಈ ತೀರ್ಪನ್ನು ಟೀಕಿಸಿದ್ದರು. ಈ ಕಾರಣಕ್ಕಾಗಿ ಗಿಲ್‌ ಅವರಿಗೆ ಪಂದ್ಯ ಶುಲ್ಕದ ಶೇ. 15 ರಷ್ಟು ದಂಡ ವಿಧಿಸಲಾಗಿದೆ.

ಶನಿವಾರ ನಾಲ್ಕನೇ ದಿನದಾಟದ ಅಂತ್ಯಕ್ಕೆ ಶುಭ್‌ಮನ್‌ ಗಿಲ್‌ ಅವರು ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್‌ ಸ್ಟೋರಿಯಲ್ಲಿ ಗ್ರೀನ್‌ ಕ್ಯಾಚ್‌ ಪಡೆಯುತ್ತಿರುವ ಸ್ಕ್ರೀನ್‌ಶಾಟ್‌ ಜೊತೆಗೆ ʻಚಪ್ಪಾಳೆ ತಟ್ಟುತ್ತಿರುವʼ ಎಮೋಜಿಯನ್ನು ಸ್ಟೋರಿ ಹಾಕಿದ್ದರು. ಅದು ತಮ್ಮ ಕ್ಯಾಚ್‌ ಔಟ್‌ ತೀರ್ಪಿನ ಬಗ್ಗೆ ಅಂಪೈರ್‌ಗಳ ವಿರುದ್ಧ ಅಸಮಾಧಾನ ಹೊರಹಾಕಿದಂತಿತ್ತು.

ಮೂರನೇ ಅಂಪೈರ್‌ ಅವರ  ನಿರ್ಧಾರವನ್ನು ಟೀಕಿಸುವ ಮೂಲಕ ಮೂಲಕ ಗಿಲ್‌ ಅವರು ಐಸಿಸಿ ಮೊದಲನೇ ಹಂತದ ನಿಯಮವನ್ನು ಉಲ್ಲಂಘಿಸಿದ್ದಾರೆ. ಹೀಗಾಗಿ ಅವರಿಗೆ ಪಂದ್ಯ ಶುಲ್ಕದ ಶೇ.15 ರಷ್ಟು ದಂಡ ವಿಧಿಸಗಿದೆ.

ಭಾರತ- ಅಸ್ಟ್ರೇಲಿಯ ತಂಡಗಳಿಗೂ ದಂಡ

ನಿಧಾನಗತಿಯ ಬೌಲಿಂಗ್‌ಗಾಗಿ ಟೀಮ್‌ ಇಂಡಿಯಾಗೆ ಪಂದ್ಯ ಶುಲ್ಕದ ಶೇ. 100 ರಷ್ಟು ದಂಡ ವಿಧಿಸಲಾಗಿದೆ. ಅದಲ್ಲದೇ ಆಸ್ಟ್ರೇಲಿಯಾ ತಂಡಕ್ಕೂ ಪಂದ್ಯ ಶುಲ್ಕದಲ್ಲಿ ಶೇ. 80ರಷ್ಟು ದಂಡವನ್ನು ವಿಧಿಸಲಾಗಿದೆ ಎಂದು ಐಸಿಸಿ ಹೇಳಿಕೊಂಡಿದೆ.

andolanait

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

4 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

4 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

5 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

5 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

5 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

5 hours ago