ಕ್ರೀಡೆ

ಡಬ್ಲ್ಯುಟಿಸಿ ಫೈನಲ್‌: ಶುಭ್‌ಮನ್‌ ಗಿಲ್‌ಗೆ ದಂಡ

ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಡಿಫೆನ್ಸ್‌ ಪ್ರಯತ್ನದಲ್ಲಿದ್ದ ಶುಭ್‌ಮನ್‌ ಗಿಲ್‌ ಅವರನ್ನು ವಂಚಿಸಿದ ಚೆಂಡು ಸ್ಲಿಪ್‌ನಲ್ಲಿ ನಿಂತಿದ್ದ ಕ್ಯಾಮರಾನ್‌ ಗ್ರೀನ್‌ ಅವರ ಕೈ ಸೇರಿತ್ತು. ಗ್ರೀನ್‌ ಅದ್ಭುತವಾಗಿ ಕ್ಯಾಚ್‌ ಹಿಡಿದಿದ್ದರೂ, ಈ ಕ್ಯಾಚ್‌ ಆಟಗಾರರರಿಗೂ ಕ್ರಿಕೆಟ್‌ ಅಭಿಮಾನಿಗಳಿಗೂ ಸಂದೇಹ ತರಿಸಿತ್ತು.

ಈ ವಿವಾದಾತ್ಮಕ ತೀರ್ಪಿನಿಂದ ಅಸಮಾಧಾನಗೊಂಡಿದ್ದ ಶುಭ್‌ಮನ್‌ ಗಿಲ್‌ ಟಿವಿ ಅಂಪೈರ್‌ ನೀಡಿದ್ದ ಈ ತೀರ್ಪನ್ನು ಟೀಕಿಸಿದ್ದರು. ಈ ಕಾರಣಕ್ಕಾಗಿ ಗಿಲ್‌ ಅವರಿಗೆ ಪಂದ್ಯ ಶುಲ್ಕದ ಶೇ. 15 ರಷ್ಟು ದಂಡ ವಿಧಿಸಲಾಗಿದೆ.

ಶನಿವಾರ ನಾಲ್ಕನೇ ದಿನದಾಟದ ಅಂತ್ಯಕ್ಕೆ ಶುಭ್‌ಮನ್‌ ಗಿಲ್‌ ಅವರು ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್‌ ಸ್ಟೋರಿಯಲ್ಲಿ ಗ್ರೀನ್‌ ಕ್ಯಾಚ್‌ ಪಡೆಯುತ್ತಿರುವ ಸ್ಕ್ರೀನ್‌ಶಾಟ್‌ ಜೊತೆಗೆ ʻಚಪ್ಪಾಳೆ ತಟ್ಟುತ್ತಿರುವʼ ಎಮೋಜಿಯನ್ನು ಸ್ಟೋರಿ ಹಾಕಿದ್ದರು. ಅದು ತಮ್ಮ ಕ್ಯಾಚ್‌ ಔಟ್‌ ತೀರ್ಪಿನ ಬಗ್ಗೆ ಅಂಪೈರ್‌ಗಳ ವಿರುದ್ಧ ಅಸಮಾಧಾನ ಹೊರಹಾಕಿದಂತಿತ್ತು.

ಮೂರನೇ ಅಂಪೈರ್‌ ಅವರ  ನಿರ್ಧಾರವನ್ನು ಟೀಕಿಸುವ ಮೂಲಕ ಮೂಲಕ ಗಿಲ್‌ ಅವರು ಐಸಿಸಿ ಮೊದಲನೇ ಹಂತದ ನಿಯಮವನ್ನು ಉಲ್ಲಂಘಿಸಿದ್ದಾರೆ. ಹೀಗಾಗಿ ಅವರಿಗೆ ಪಂದ್ಯ ಶುಲ್ಕದ ಶೇ.15 ರಷ್ಟು ದಂಡ ವಿಧಿಸಗಿದೆ.

ಭಾರತ- ಅಸ್ಟ್ರೇಲಿಯ ತಂಡಗಳಿಗೂ ದಂಡ

ನಿಧಾನಗತಿಯ ಬೌಲಿಂಗ್‌ಗಾಗಿ ಟೀಮ್‌ ಇಂಡಿಯಾಗೆ ಪಂದ್ಯ ಶುಲ್ಕದ ಶೇ. 100 ರಷ್ಟು ದಂಡ ವಿಧಿಸಲಾಗಿದೆ. ಅದಲ್ಲದೇ ಆಸ್ಟ್ರೇಲಿಯಾ ತಂಡಕ್ಕೂ ಪಂದ್ಯ ಶುಲ್ಕದಲ್ಲಿ ಶೇ. 80ರಷ್ಟು ದಂಡವನ್ನು ವಿಧಿಸಲಾಗಿದೆ ಎಂದು ಐಸಿಸಿ ಹೇಳಿಕೊಂಡಿದೆ.

andolanait

Recent Posts

ಹುಣಸೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ

ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ…

7 hours ago

ಹನೂರು| ಕೆಸರಿನಲ್ಲಿ ಸಿಲುಕಿ ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆ ಫಲಿಸದೇ ಸಾವು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ…

7 hours ago

ಪಶ್ಚಿಮ ಬಂಗಾಳದಲ್ಲಿ ನಾಳೆ ಮೊದಲ ಹಂತದ ಚುನಾವಣೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…

9 hours ago

24 ಗಂಟೆಯ ಒಳಗಡೆ ಉತ್ತರಿಸಿ: ಮಲ್ಲಿಕಾರ್ಜುನ ಖರ್ಗೆಗೆ ಆಯೋಗ ನೋಟಿಸ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ…

9 hours ago

ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…

10 hours ago

ಧಾರವಾಡ ಆಕಾಶವಾಣಿ ಕೇಂದ್ರ ಸ್ಥಳಾಂತರಿಸದಂತೆ ಅಶ್ವಿನಿ ವೈಷ್ಣವ್‌ ಆದೇಶ

ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…

11 hours ago