ಕ್ರೀಡೆ

WTC final: ಆಸೀಸ್ ತಂಡ ಈ ಇಬ್ಬರು ಆಟಗಾರರ ಬಗ್ಗೆ ತಲೆಕೆಡೆಸಿಕೊಂಡಿದೆ ಎಂದ ಪಾಂಟಿಂಗ್

ಲಂಡನ್: ಐಪಿಎಲ್ ಹವಾ ಮುಗಿದು ಅಂತಾರಾಷ್ಟ್ರೀಯ ಕ್ರಿಕೆಟ್ ಮತ್ತೆ ಆರಂಭವಾಗುತ್ತಿದೆ. ಜೂನ್ 7ರಿಂದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯ ನಡೆಯಲಿದೆ. ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳೂ ಫೈನಲ್ ಪಂದ್ಯದಲ್ಲಿ ಆಡಲಿದೆ. ಆಸ್ಟ್ರೇಲಿಯಾ ತಂಡವು ವಿರಾಟ್ ಕೊಹ್ಲಿ ಮತ್ತು ಚೇತೇಶ್ವರ ಪೂಜಾರ ಬಗ್ಗೆ ಹೆಚ್ಚು ಗಮನ ಹರಿಸಲಿದೆ ಎಂದು ಮಾಜಿ ಆಸೀಸ್ ನಾಯಕ ರಿಕಿ ಪಾಂಟಿಂಗ್ ಹೇಳಿದ್ದಾರೆ.

ಪೂಜಾರ ಅವರು ಆಸೀಸ್ ವಿರುದ್ಧ ಯಾವುದೇ ತಂಡಕ್ಕಿಂತ ಹೆಚ್ಚು ರನ್ ಮತ್ತು ಶತಕಗಳನ್ನು ಗಳಿಸಿದ್ದರಿಂದ ಆಸೀಸ್‌ ಗೆ ಕಂಟಕವಾಗಿದ್ದಾರೆ. ಆಸೀಸ್ ವಿರುದ್ಧ ಆಡಿದ 24 ಟೆಸ್ಟ್‌ಗಳಲ್ಲಿ ಪೂಜಾ 2033 ರನ್ ಮತ್ತು ಐದು ಶತಕಗಳನ್ನು ಗಳಿಸಿದ್ದಾರೆ. ಕೊಹ್ಲಿ ಕೂಡಾ ಆಸ್ಟ್ರೇಲಿಯಾ 24 ಟೆಸ್ಟ್ ಪಂದ್ಯಗಳಲ್ಲಿ 1979 ರನ್ ಗಳಿಸಿದ್ದಾರೆ.

ಪಂದ್ಯದಲ್ಲಿ ಭಾರತದ ಅವಕಾಶಗಳಿಗೆ ಇಬ್ಬರೂ ಪ್ರಮುಖರು. ಆಸ್ಟ್ರೇಲಿಯಾ ತಂಡವು ಅವರನ್ನು ಬೇಗನೆ ಔಟ್ ಮಾಡಲು ಯೋಜಿಸುತ್ತಿದೆ ಎಂದು ಪಾಂಟಿಂಗ್ ಐಸಿಸಿ ರಿವ್ಯೂ ವಿಡಿಯೋದಲ್ಲಿ ಹೇಳಿದರು.

“ಆಸ್ಟ್ರೇಲಿಯನ್ ತಂಡವು ವಿರಾಟ್ ಬಗ್ಗೆ ಮಾತನಾಡುತ್ತದೆ, ಅದರ ಬಗ್ಗೆ ಯಾವುದೇ ಸಂದೇಹವಿಲ್ಲ. ಅವರು ಪೂಜಾರ ಬಗ್ಗೆಯೂ ಚರ್ಚೆ ಮಾಡುತ್ತಾರೆ. ಅವರಿಬ್ಬರ ಬಗ್ಗೆ ಮಾತ್ರ” ಎಂದು ಪಾಂಟಿಂಗ್ ಹೇಳಿದ್ದಾರೆ.

“ಪೂಜಾರ ಅವರು ಈ ಹಿಂದೆ ಆಸ್ಟ್ರೇಲಿಯಾದಲ್ಲಿ ಅವರ ಪಾಲಿಗೆ ಕಂಟಕವಾಗಿದ್ದಾರೆ. ಈ ವಿಕೆಟ್ ಆಸ್ಟ್ರೇಲಿಯಾದ ಪಿಚ್‌ನಂತೆಯೇ ಇರುತ್ತದೆ. ಹಾಗಾಗಿ ಅವನನ್ನು ಬೇಗನೆ ಔಟ್ ಮಾಡಲು ಆಸೀಸ್ ತಂಡ ಬಯಸುತ್ತದೆ” ಎಂದಿದ್ದಾರೆ.

andolanait

Recent Posts

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ

ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…

3 hours ago

ಭಾರತ-ಯುರೋಪ್‌ ಒಕ್ಕೂಟ ವ್ಯಾಪಾರ ಒಪ್ಪಂದಕ್ಕೆ ಸಹಿ

ನವದೆಹಲಿ: ಮದರ್‌ ಆಫ್‌ ಆಲ್‌ ಡೀಲ್ಸ್‌ ಎಂದೇ ಕರೆಯಲ್ಪಡುವ ಭಾರತ-ಯುರೋಪ್‌ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…

7 hours ago

ಶಿಡ್ಲಘಟ್ಟ ಕೇಸ್‌ನಲ್ಲಿ ಕಾನೂನಿನಂತೆ ಕ್ರಮ: ಸಚಿವ ಭೈರತಿ ಸುರೇಶ್‌

ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…

7 hours ago

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರ ಸಾವು

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…

7 hours ago

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…

8 hours ago

ಗುಂಡ್ಲುಪೇಟೆ: ಬೊಮ್ಮಲಾಪುರದಲ್ಲಿ ವಾಸದ ಮನೆಗೆ ನುಗ್ಗಿದ ಕಡವೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…

8 hours ago