ಕ್ರೀಡೆ

WTC final: ಆಸೀಸ್ ತಂಡ ಈ ಇಬ್ಬರು ಆಟಗಾರರ ಬಗ್ಗೆ ತಲೆಕೆಡೆಸಿಕೊಂಡಿದೆ ಎಂದ ಪಾಂಟಿಂಗ್

ಲಂಡನ್: ಐಪಿಎಲ್ ಹವಾ ಮುಗಿದು ಅಂತಾರಾಷ್ಟ್ರೀಯ ಕ್ರಿಕೆಟ್ ಮತ್ತೆ ಆರಂಭವಾಗುತ್ತಿದೆ. ಜೂನ್ 7ರಿಂದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯ ನಡೆಯಲಿದೆ. ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳೂ ಫೈನಲ್ ಪಂದ್ಯದಲ್ಲಿ ಆಡಲಿದೆ. ಆಸ್ಟ್ರೇಲಿಯಾ ತಂಡವು ವಿರಾಟ್ ಕೊಹ್ಲಿ ಮತ್ತು ಚೇತೇಶ್ವರ ಪೂಜಾರ ಬಗ್ಗೆ ಹೆಚ್ಚು ಗಮನ ಹರಿಸಲಿದೆ ಎಂದು ಮಾಜಿ ಆಸೀಸ್ ನಾಯಕ ರಿಕಿ ಪಾಂಟಿಂಗ್ ಹೇಳಿದ್ದಾರೆ.

ಪೂಜಾರ ಅವರು ಆಸೀಸ್ ವಿರುದ್ಧ ಯಾವುದೇ ತಂಡಕ್ಕಿಂತ ಹೆಚ್ಚು ರನ್ ಮತ್ತು ಶತಕಗಳನ್ನು ಗಳಿಸಿದ್ದರಿಂದ ಆಸೀಸ್‌ ಗೆ ಕಂಟಕವಾಗಿದ್ದಾರೆ. ಆಸೀಸ್ ವಿರುದ್ಧ ಆಡಿದ 24 ಟೆಸ್ಟ್‌ಗಳಲ್ಲಿ ಪೂಜಾ 2033 ರನ್ ಮತ್ತು ಐದು ಶತಕಗಳನ್ನು ಗಳಿಸಿದ್ದಾರೆ. ಕೊಹ್ಲಿ ಕೂಡಾ ಆಸ್ಟ್ರೇಲಿಯಾ 24 ಟೆಸ್ಟ್ ಪಂದ್ಯಗಳಲ್ಲಿ 1979 ರನ್ ಗಳಿಸಿದ್ದಾರೆ.

ಪಂದ್ಯದಲ್ಲಿ ಭಾರತದ ಅವಕಾಶಗಳಿಗೆ ಇಬ್ಬರೂ ಪ್ರಮುಖರು. ಆಸ್ಟ್ರೇಲಿಯಾ ತಂಡವು ಅವರನ್ನು ಬೇಗನೆ ಔಟ್ ಮಾಡಲು ಯೋಜಿಸುತ್ತಿದೆ ಎಂದು ಪಾಂಟಿಂಗ್ ಐಸಿಸಿ ರಿವ್ಯೂ ವಿಡಿಯೋದಲ್ಲಿ ಹೇಳಿದರು.

“ಆಸ್ಟ್ರೇಲಿಯನ್ ತಂಡವು ವಿರಾಟ್ ಬಗ್ಗೆ ಮಾತನಾಡುತ್ತದೆ, ಅದರ ಬಗ್ಗೆ ಯಾವುದೇ ಸಂದೇಹವಿಲ್ಲ. ಅವರು ಪೂಜಾರ ಬಗ್ಗೆಯೂ ಚರ್ಚೆ ಮಾಡುತ್ತಾರೆ. ಅವರಿಬ್ಬರ ಬಗ್ಗೆ ಮಾತ್ರ” ಎಂದು ಪಾಂಟಿಂಗ್ ಹೇಳಿದ್ದಾರೆ.

“ಪೂಜಾರ ಅವರು ಈ ಹಿಂದೆ ಆಸ್ಟ್ರೇಲಿಯಾದಲ್ಲಿ ಅವರ ಪಾಲಿಗೆ ಕಂಟಕವಾಗಿದ್ದಾರೆ. ಈ ವಿಕೆಟ್ ಆಸ್ಟ್ರೇಲಿಯಾದ ಪಿಚ್‌ನಂತೆಯೇ ಇರುತ್ತದೆ. ಹಾಗಾಗಿ ಅವನನ್ನು ಬೇಗನೆ ಔಟ್ ಮಾಡಲು ಆಸೀಸ್ ತಂಡ ಬಯಸುತ್ತದೆ” ಎಂದಿದ್ದಾರೆ.

andolanait

Recent Posts

ಅಧ್ಯಾಯ ಎರಡು ಇಲ್ಲಿಂದ ಶುರು: ನಟ ರಿಷಬ್‌ ಶೆಟ್ಟಿ ಮಾಹಿತಿ

ಕಾಂತಾರ ಚಾಪ್ಟರ್‌ 1 ಯಶಸ್ಸಿನಲ್ಲಿರುವ ನಟ ಹಾಗೂ ನಿರ್ದೇಶಕ ರಿಷಬ್‌ ಶೆಟ್ಟಿ ಯುಗಾದಿ ದಿನವೇ ಅಧ್ಯಾಯ ಎರಡು ಇಲ್ಲಿಂದ ಶುರು…

3 hours ago

ರಾಜ್ಯದಲ್ಲಿ ಮಳೆ ಆರ್ಭಟ: ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯ ಹಾಗೂ ಗುಡುಗು ಸಹಿತ ಮಳೆಯ ಅಬ್ಬರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ…

3 hours ago

ರಾಜ್ಯದಲ್ಲಿ ಇಂದು ಕೂಡ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕಳೆದ ಮೂರು ದಿನಗಳಿಂದ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಇಂದು ಸಂಜೆಯ ವೇಳೆಗೆ ಕೆಲ ಜಿಲ್ಲೆಗಳಲ್ಲಿ ಭಾರೀ ಭಾರೀ…

4 hours ago

ದೇಶದೊಳಗಿನ ದೇಶದ್ರೋಹಿಗಳ ವಿರುದ್ಧ ಇರಾನ್‌ ಕಠಿಣ ಕ್ರಮ

ಟೆಹರಾನ್:‌ ಇರಾನ್‌ ಮೇಲೆ ಯುದ್ಧ ಆರಂಭವಾಗಿ ಸುಮಾರು 20 ದಿನಗಳು ಕಳೆಯುತ್ತಿರುವ ಬೆನ್ನಲ್ಲೇ ಪೊಲೀಸ್‌ ಅಧಿಕಾರಿಗಳ ಕೊಲೆ ಮತ್ತು ಅಮೇರಿಕಾ…

4 hours ago

ಅಯೋಧ್ಯೆ ರಾಮಮಂದಿರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…

15 hours ago

ಮುಕ್ತಾಯ ಹಂತಕ್ಕೆ ತಲುಪಿದ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ

ಬೆಂಗಳೂರು: ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…

15 hours ago