ಕ್ರೀಡೆ

WTC final: ಆಸೀಸ್ ತಂಡ ಈ ಇಬ್ಬರು ಆಟಗಾರರ ಬಗ್ಗೆ ತಲೆಕೆಡೆಸಿಕೊಂಡಿದೆ ಎಂದ ಪಾಂಟಿಂಗ್

ಲಂಡನ್: ಐಪಿಎಲ್ ಹವಾ ಮುಗಿದು ಅಂತಾರಾಷ್ಟ್ರೀಯ ಕ್ರಿಕೆಟ್ ಮತ್ತೆ ಆರಂಭವಾಗುತ್ತಿದೆ. ಜೂನ್ 7ರಿಂದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯ ನಡೆಯಲಿದೆ. ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳೂ ಫೈನಲ್ ಪಂದ್ಯದಲ್ಲಿ ಆಡಲಿದೆ. ಆಸ್ಟ್ರೇಲಿಯಾ ತಂಡವು ವಿರಾಟ್ ಕೊಹ್ಲಿ ಮತ್ತು ಚೇತೇಶ್ವರ ಪೂಜಾರ ಬಗ್ಗೆ ಹೆಚ್ಚು ಗಮನ ಹರಿಸಲಿದೆ ಎಂದು ಮಾಜಿ ಆಸೀಸ್ ನಾಯಕ ರಿಕಿ ಪಾಂಟಿಂಗ್ ಹೇಳಿದ್ದಾರೆ.

ಪೂಜಾರ ಅವರು ಆಸೀಸ್ ವಿರುದ್ಧ ಯಾವುದೇ ತಂಡಕ್ಕಿಂತ ಹೆಚ್ಚು ರನ್ ಮತ್ತು ಶತಕಗಳನ್ನು ಗಳಿಸಿದ್ದರಿಂದ ಆಸೀಸ್‌ ಗೆ ಕಂಟಕವಾಗಿದ್ದಾರೆ. ಆಸೀಸ್ ವಿರುದ್ಧ ಆಡಿದ 24 ಟೆಸ್ಟ್‌ಗಳಲ್ಲಿ ಪೂಜಾ 2033 ರನ್ ಮತ್ತು ಐದು ಶತಕಗಳನ್ನು ಗಳಿಸಿದ್ದಾರೆ. ಕೊಹ್ಲಿ ಕೂಡಾ ಆಸ್ಟ್ರೇಲಿಯಾ 24 ಟೆಸ್ಟ್ ಪಂದ್ಯಗಳಲ್ಲಿ 1979 ರನ್ ಗಳಿಸಿದ್ದಾರೆ.

ಪಂದ್ಯದಲ್ಲಿ ಭಾರತದ ಅವಕಾಶಗಳಿಗೆ ಇಬ್ಬರೂ ಪ್ರಮುಖರು. ಆಸ್ಟ್ರೇಲಿಯಾ ತಂಡವು ಅವರನ್ನು ಬೇಗನೆ ಔಟ್ ಮಾಡಲು ಯೋಜಿಸುತ್ತಿದೆ ಎಂದು ಪಾಂಟಿಂಗ್ ಐಸಿಸಿ ರಿವ್ಯೂ ವಿಡಿಯೋದಲ್ಲಿ ಹೇಳಿದರು.

“ಆಸ್ಟ್ರೇಲಿಯನ್ ತಂಡವು ವಿರಾಟ್ ಬಗ್ಗೆ ಮಾತನಾಡುತ್ತದೆ, ಅದರ ಬಗ್ಗೆ ಯಾವುದೇ ಸಂದೇಹವಿಲ್ಲ. ಅವರು ಪೂಜಾರ ಬಗ್ಗೆಯೂ ಚರ್ಚೆ ಮಾಡುತ್ತಾರೆ. ಅವರಿಬ್ಬರ ಬಗ್ಗೆ ಮಾತ್ರ” ಎಂದು ಪಾಂಟಿಂಗ್ ಹೇಳಿದ್ದಾರೆ.

“ಪೂಜಾರ ಅವರು ಈ ಹಿಂದೆ ಆಸ್ಟ್ರೇಲಿಯಾದಲ್ಲಿ ಅವರ ಪಾಲಿಗೆ ಕಂಟಕವಾಗಿದ್ದಾರೆ. ಈ ವಿಕೆಟ್ ಆಸ್ಟ್ರೇಲಿಯಾದ ಪಿಚ್‌ನಂತೆಯೇ ಇರುತ್ತದೆ. ಹಾಗಾಗಿ ಅವನನ್ನು ಬೇಗನೆ ಔಟ್ ಮಾಡಲು ಆಸೀಸ್ ತಂಡ ಬಯಸುತ್ತದೆ” ಎಂದಿದ್ದಾರೆ.

andolanait

Recent Posts

ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಮೈಸೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 2025-26ನೇ ಸಾಲಿನ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ…

18 mins ago

ತೊಗರಿ – ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ ; ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

ಹೊಸದಿಲ್ಲಿ : ಕರ್ನಾಟಕ ರಾಜ್ಯದಲ್ಲಿ‌ ಭಾರತದ ರಾಷ್ಟ್ರೀಯ ಕೃಷಿ‌ ಸಹಕಾರಿ ಮಾರುಕಟ್ಟೆ ಒಕ್ಕೂಟ ಹಾಗೂ ಭಾರತದ ರಾಷ್ಟ್ರೀಯ ಸಹಕಾರಿ ಗ್ರಾಹಕರ…

44 mins ago

ಹಾಡಿ ಕುಟುಂಬಗಳಿಗೆ ಗ್ಯಾರಂಟಿ ಯೋಜನೆ ತಲುಪಿಸಿ: ಅರುಣ್ ಕುಮಾರ್

ಮೈಸೂರು : ಜಿಲ್ಲೆಯಲ್ಲಿರುವ ಹಾಡಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ತಲುಪಿಸಿ, ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ…

1 hour ago

ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ: ಕೆ.ಎನ್.ರಾಜಣ್ಣ

ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ…

3 hours ago

ಡೆವಿಲ್‌ ಸಿನಿಮಾ ಬ್ಲಾಕ್‌ ಬಸ್ಟರ್‌ ಆಗಲಿ: ನಟ ದರ್ಶನ್‌ಗೆ ರಿಷಬ್‌ ಶೆಟ್ಟಿ ವಿಶ್‌

ಬೆಂಗಳೂರು: ನಾಳೆ ದರ್ಶನ್‌ ಅಭಿನಯದ ಡೆವಿಲ್‌ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿ ಬಾಸ್‌ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.…

3 hours ago

ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್‌ ಸರ್ಕಾರ ಪರಿಹಾರ ನೀಡಿಲ್ಲ, ಮನೆ…

3 hours ago