ಕ್ರೀಡೆ

WTC final: ಆಸೀಸ್ ತಂಡ ಈ ಇಬ್ಬರು ಆಟಗಾರರ ಬಗ್ಗೆ ತಲೆಕೆಡೆಸಿಕೊಂಡಿದೆ ಎಂದ ಪಾಂಟಿಂಗ್

ಲಂಡನ್: ಐಪಿಎಲ್ ಹವಾ ಮುಗಿದು ಅಂತಾರಾಷ್ಟ್ರೀಯ ಕ್ರಿಕೆಟ್ ಮತ್ತೆ ಆರಂಭವಾಗುತ್ತಿದೆ. ಜೂನ್ 7ರಿಂದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯ ನಡೆಯಲಿದೆ. ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳೂ ಫೈನಲ್ ಪಂದ್ಯದಲ್ಲಿ ಆಡಲಿದೆ. ಆಸ್ಟ್ರೇಲಿಯಾ ತಂಡವು ವಿರಾಟ್ ಕೊಹ್ಲಿ ಮತ್ತು ಚೇತೇಶ್ವರ ಪೂಜಾರ ಬಗ್ಗೆ ಹೆಚ್ಚು ಗಮನ ಹರಿಸಲಿದೆ ಎಂದು ಮಾಜಿ ಆಸೀಸ್ ನಾಯಕ ರಿಕಿ ಪಾಂಟಿಂಗ್ ಹೇಳಿದ್ದಾರೆ.

ಪೂಜಾರ ಅವರು ಆಸೀಸ್ ವಿರುದ್ಧ ಯಾವುದೇ ತಂಡಕ್ಕಿಂತ ಹೆಚ್ಚು ರನ್ ಮತ್ತು ಶತಕಗಳನ್ನು ಗಳಿಸಿದ್ದರಿಂದ ಆಸೀಸ್‌ ಗೆ ಕಂಟಕವಾಗಿದ್ದಾರೆ. ಆಸೀಸ್ ವಿರುದ್ಧ ಆಡಿದ 24 ಟೆಸ್ಟ್‌ಗಳಲ್ಲಿ ಪೂಜಾ 2033 ರನ್ ಮತ್ತು ಐದು ಶತಕಗಳನ್ನು ಗಳಿಸಿದ್ದಾರೆ. ಕೊಹ್ಲಿ ಕೂಡಾ ಆಸ್ಟ್ರೇಲಿಯಾ 24 ಟೆಸ್ಟ್ ಪಂದ್ಯಗಳಲ್ಲಿ 1979 ರನ್ ಗಳಿಸಿದ್ದಾರೆ.

ಪಂದ್ಯದಲ್ಲಿ ಭಾರತದ ಅವಕಾಶಗಳಿಗೆ ಇಬ್ಬರೂ ಪ್ರಮುಖರು. ಆಸ್ಟ್ರೇಲಿಯಾ ತಂಡವು ಅವರನ್ನು ಬೇಗನೆ ಔಟ್ ಮಾಡಲು ಯೋಜಿಸುತ್ತಿದೆ ಎಂದು ಪಾಂಟಿಂಗ್ ಐಸಿಸಿ ರಿವ್ಯೂ ವಿಡಿಯೋದಲ್ಲಿ ಹೇಳಿದರು.

“ಆಸ್ಟ್ರೇಲಿಯನ್ ತಂಡವು ವಿರಾಟ್ ಬಗ್ಗೆ ಮಾತನಾಡುತ್ತದೆ, ಅದರ ಬಗ್ಗೆ ಯಾವುದೇ ಸಂದೇಹವಿಲ್ಲ. ಅವರು ಪೂಜಾರ ಬಗ್ಗೆಯೂ ಚರ್ಚೆ ಮಾಡುತ್ತಾರೆ. ಅವರಿಬ್ಬರ ಬಗ್ಗೆ ಮಾತ್ರ” ಎಂದು ಪಾಂಟಿಂಗ್ ಹೇಳಿದ್ದಾರೆ.

“ಪೂಜಾರ ಅವರು ಈ ಹಿಂದೆ ಆಸ್ಟ್ರೇಲಿಯಾದಲ್ಲಿ ಅವರ ಪಾಲಿಗೆ ಕಂಟಕವಾಗಿದ್ದಾರೆ. ಈ ವಿಕೆಟ್ ಆಸ್ಟ್ರೇಲಿಯಾದ ಪಿಚ್‌ನಂತೆಯೇ ಇರುತ್ತದೆ. ಹಾಗಾಗಿ ಅವನನ್ನು ಬೇಗನೆ ಔಟ್ ಮಾಡಲು ಆಸೀಸ್ ತಂಡ ಬಯಸುತ್ತದೆ” ಎಂದಿದ್ದಾರೆ.

andolanait

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

6 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

7 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

8 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

10 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

16 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

22 hours ago