ಕ್ರೀಡೆ

WTC final: ಆಸೀಸ್ ತಂಡ ಈ ಇಬ್ಬರು ಆಟಗಾರರ ಬಗ್ಗೆ ತಲೆಕೆಡೆಸಿಕೊಂಡಿದೆ ಎಂದ ಪಾಂಟಿಂಗ್

ಲಂಡನ್: ಐಪಿಎಲ್ ಹವಾ ಮುಗಿದು ಅಂತಾರಾಷ್ಟ್ರೀಯ ಕ್ರಿಕೆಟ್ ಮತ್ತೆ ಆರಂಭವಾಗುತ್ತಿದೆ. ಜೂನ್ 7ರಿಂದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯ ನಡೆಯಲಿದೆ. ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳೂ ಫೈನಲ್ ಪಂದ್ಯದಲ್ಲಿ ಆಡಲಿದೆ. ಆಸ್ಟ್ರೇಲಿಯಾ ತಂಡವು ವಿರಾಟ್ ಕೊಹ್ಲಿ ಮತ್ತು ಚೇತೇಶ್ವರ ಪೂಜಾರ ಬಗ್ಗೆ ಹೆಚ್ಚು ಗಮನ ಹರಿಸಲಿದೆ ಎಂದು ಮಾಜಿ ಆಸೀಸ್ ನಾಯಕ ರಿಕಿ ಪಾಂಟಿಂಗ್ ಹೇಳಿದ್ದಾರೆ.

ಪೂಜಾರ ಅವರು ಆಸೀಸ್ ವಿರುದ್ಧ ಯಾವುದೇ ತಂಡಕ್ಕಿಂತ ಹೆಚ್ಚು ರನ್ ಮತ್ತು ಶತಕಗಳನ್ನು ಗಳಿಸಿದ್ದರಿಂದ ಆಸೀಸ್‌ ಗೆ ಕಂಟಕವಾಗಿದ್ದಾರೆ. ಆಸೀಸ್ ವಿರುದ್ಧ ಆಡಿದ 24 ಟೆಸ್ಟ್‌ಗಳಲ್ಲಿ ಪೂಜಾ 2033 ರನ್ ಮತ್ತು ಐದು ಶತಕಗಳನ್ನು ಗಳಿಸಿದ್ದಾರೆ. ಕೊಹ್ಲಿ ಕೂಡಾ ಆಸ್ಟ್ರೇಲಿಯಾ 24 ಟೆಸ್ಟ್ ಪಂದ್ಯಗಳಲ್ಲಿ 1979 ರನ್ ಗಳಿಸಿದ್ದಾರೆ.

ಪಂದ್ಯದಲ್ಲಿ ಭಾರತದ ಅವಕಾಶಗಳಿಗೆ ಇಬ್ಬರೂ ಪ್ರಮುಖರು. ಆಸ್ಟ್ರೇಲಿಯಾ ತಂಡವು ಅವರನ್ನು ಬೇಗನೆ ಔಟ್ ಮಾಡಲು ಯೋಜಿಸುತ್ತಿದೆ ಎಂದು ಪಾಂಟಿಂಗ್ ಐಸಿಸಿ ರಿವ್ಯೂ ವಿಡಿಯೋದಲ್ಲಿ ಹೇಳಿದರು.

“ಆಸ್ಟ್ರೇಲಿಯನ್ ತಂಡವು ವಿರಾಟ್ ಬಗ್ಗೆ ಮಾತನಾಡುತ್ತದೆ, ಅದರ ಬಗ್ಗೆ ಯಾವುದೇ ಸಂದೇಹವಿಲ್ಲ. ಅವರು ಪೂಜಾರ ಬಗ್ಗೆಯೂ ಚರ್ಚೆ ಮಾಡುತ್ತಾರೆ. ಅವರಿಬ್ಬರ ಬಗ್ಗೆ ಮಾತ್ರ” ಎಂದು ಪಾಂಟಿಂಗ್ ಹೇಳಿದ್ದಾರೆ.

“ಪೂಜಾರ ಅವರು ಈ ಹಿಂದೆ ಆಸ್ಟ್ರೇಲಿಯಾದಲ್ಲಿ ಅವರ ಪಾಲಿಗೆ ಕಂಟಕವಾಗಿದ್ದಾರೆ. ಈ ವಿಕೆಟ್ ಆಸ್ಟ್ರೇಲಿಯಾದ ಪಿಚ್‌ನಂತೆಯೇ ಇರುತ್ತದೆ. ಹಾಗಾಗಿ ಅವನನ್ನು ಬೇಗನೆ ಔಟ್ ಮಾಡಲು ಆಸೀಸ್ ತಂಡ ಬಯಸುತ್ತದೆ” ಎಂದಿದ್ದಾರೆ.

andolanait

Recent Posts

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

22 mins ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

1 hour ago

ಅಸ್ಸಾಂನಲ್ಲಿ ಭೀಕರ ಪ್ರವಾಹ: ಜನಜೀವನ ಅಸ್ತವ್ಯಸ್ತ

ದಿಸ್ಪುರ್:‌ ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…

5 hours ago

ಕೈಕೊಟ್ಟ ಮುಂಗಾರು: ಕಬಿನಿ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿತ

ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…

5 hours ago

ರಾಮಮಂದಿರದಲ್ಲಿ ಅಕ್ರಮ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…

10 hours ago

ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮೇಜರ್ ಸರ್ಜರಿಗೆ ಕೇಂದ್ರ ವರಿಷ್ಠರ ಚಿಂತನೆ

ಬೆಂಗಳೂರು ಡೈರಿ  ಆರ್.ಟಿ.ವಿಠ್ಠಲಮೂರ್ತಿ  ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…

10 hours ago