ಕ್ರೀಡೆ

WTC ಫೈನಲ್‌: ಬ್ರಾಡ್ಮನ್- ಬಾರ್ಡರ್‌ ದಾಖಲೆ ಸರಿಗಟ್ಟಿದ ಶಾರ್ದೂಲ್ ಠಾಕೂರ್

ಲಂಡನ್: ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲಿ ಭಾರತದ ವಿರುದ್ದ ಆಸ್ಟ್ರೇಲಿಯಾ ಹಿಡಿತ ಸಾಧಿಸಿದೆ. ಎರಡು ದಿನಗಳ ಆಟ ಬಾಕಿಯಿದ್ದು, ಪ್ಯಾಟ್ ಕಮಿನ್ಸ್ ಬಳಗವು 296 ರನ್ ಮುನ್ನಡೆ ಸಾಧಿಸಿದೆ.

ಮೊದಲ ಇನ್ನಿಂಗ್ಸ್ ನಲ್ಲಿ ಭಾರತ ತಂಡವು 296 ರನ್ ಗಳನ್ನು ಗಳಿಸಿತ್ತು. ಒಂದು ಹಂತದಲ್ಲಿ 152 ರನ್ ಗೆ ಆರು ವಿಕೆಟ್ ಕಳೆದುಕೊಂಡಿದ್ದ ಭಾರತಕ್ಕೆ ನಂತರ ಅಜಿಂಕ್ಯ ರಹಾನೆ ಮತ್ತು ಶಾರ್ದೂಲ್ ಠಾಕೂರ್ ಶತಕದ ಜೊತೆಯಾಟವಾಡಿ ಆಧರಿಸಿದರು.

ಭಾರತ ಟೆಸ್ಟ್‌ ತಂಡದ ಆಲ್‌ರೌಂಡರ್‌ ಶಾರ್ದೂಲ್‌ ಠಾಕೂರ್‌ ವಿಶಿಷ್ಟ ಸಾಧನೆ ಮಾಡಿದ್ದಾರೆ. ಓವಲ್‌ ಕ್ರೀಡಾಂಗಣದಲ್ಲಿ ಸತತ ಮೂರು ಅರ್ಧಶತಕ ಬಾರಿಸುವ ಮೂಲಕ ಸರ್‌ ಬ್ರಾಡ್‌ಮನ್‌ ಮತ್ತು ಅಲನ್‌ ಬಾರ್ಡರ್‌ ಅವರ ದಾಖಲೆ ಸರಿಗಟ್ಟಿದ್ದಾರೆ. ಠಾಕೂರ್‌ ಅವರು 57(36), 60(72) ಮತ್ತು 51(109) ರನ್‌ ಬಾರಿಸಿ ಈ ಸಾಧನೆ ಮಾಡಿದ್ದಾರೆ. ಈ ಮೂಲಕ ಅಗ್ರ ಬ್ಯಾಟ್ಸ್‌ಮನ್‌ಗಳ ಎಲೈಟ್‌ ಕ್ಲಬ್‌ ಗೆ ಸೇರಿದ್ದಾರೆ.
ಶುಕ್ರವಾರ ಫೈನಲ್ ಪಂದ್ಯದಲ್ಲಿ ಶಾರ್ದೂಲ್ ಠಾಕೂರ್ 109 ಎಸೆತಗಳಲ್ಲಿ 51 ರನ್ ಗಳಿಸಿದ್ದರು. ಇದರಲ್ಲಿ ಆರು ಬೌಂಡರಿ ಒಳಗೊಂಡಿತ್ತು. ಅಲ್ಲದೆ ರಹಾನೆ ಜೊತೆ ಸೇರಿ ಏಳನೇ ವಿಕೆಟ್ ಗೆ 109 ರನ್ ಜೊತೆಯಾಟವಾಡಿದರು.
andolanait

Recent Posts

ಮದ್ದೂರು |‌ ದೇವಾಲಯಗಳಲ್ಲಿ ಸರಣಿ ಕಳ್ಳತನ

ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…

53 mins ago

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…

2 hours ago

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…

2 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

3 hours ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

3 hours ago

ಮಂಡ್ಯದಲ್ಲಿ ಶ್ರೀಪುರುಷ ಹೆಸರಿನಲ್ಲಿ “ಕನ್ನಡ ಭವನ”

ಮಂಡ್ಯ : ಸಕ್ಕರೆ ನಗರ ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ರಾಜ್ಯ, ರಾಷ್ಟ್ರ ಹಾಗೂ…

3 hours ago