ಕ್ರೀಡೆ

WTC ಫೈನಲ್‌: ಬ್ರಾಡ್ಮನ್- ಬಾರ್ಡರ್‌ ದಾಖಲೆ ಸರಿಗಟ್ಟಿದ ಶಾರ್ದೂಲ್ ಠಾಕೂರ್

ಲಂಡನ್: ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲಿ ಭಾರತದ ವಿರುದ್ದ ಆಸ್ಟ್ರೇಲಿಯಾ ಹಿಡಿತ ಸಾಧಿಸಿದೆ. ಎರಡು ದಿನಗಳ ಆಟ ಬಾಕಿಯಿದ್ದು, ಪ್ಯಾಟ್ ಕಮಿನ್ಸ್ ಬಳಗವು 296 ರನ್ ಮುನ್ನಡೆ ಸಾಧಿಸಿದೆ.

ಮೊದಲ ಇನ್ನಿಂಗ್ಸ್ ನಲ್ಲಿ ಭಾರತ ತಂಡವು 296 ರನ್ ಗಳನ್ನು ಗಳಿಸಿತ್ತು. ಒಂದು ಹಂತದಲ್ಲಿ 152 ರನ್ ಗೆ ಆರು ವಿಕೆಟ್ ಕಳೆದುಕೊಂಡಿದ್ದ ಭಾರತಕ್ಕೆ ನಂತರ ಅಜಿಂಕ್ಯ ರಹಾನೆ ಮತ್ತು ಶಾರ್ದೂಲ್ ಠಾಕೂರ್ ಶತಕದ ಜೊತೆಯಾಟವಾಡಿ ಆಧರಿಸಿದರು.

ಭಾರತ ಟೆಸ್ಟ್‌ ತಂಡದ ಆಲ್‌ರೌಂಡರ್‌ ಶಾರ್ದೂಲ್‌ ಠಾಕೂರ್‌ ವಿಶಿಷ್ಟ ಸಾಧನೆ ಮಾಡಿದ್ದಾರೆ. ಓವಲ್‌ ಕ್ರೀಡಾಂಗಣದಲ್ಲಿ ಸತತ ಮೂರು ಅರ್ಧಶತಕ ಬಾರಿಸುವ ಮೂಲಕ ಸರ್‌ ಬ್ರಾಡ್‌ಮನ್‌ ಮತ್ತು ಅಲನ್‌ ಬಾರ್ಡರ್‌ ಅವರ ದಾಖಲೆ ಸರಿಗಟ್ಟಿದ್ದಾರೆ. ಠಾಕೂರ್‌ ಅವರು 57(36), 60(72) ಮತ್ತು 51(109) ರನ್‌ ಬಾರಿಸಿ ಈ ಸಾಧನೆ ಮಾಡಿದ್ದಾರೆ. ಈ ಮೂಲಕ ಅಗ್ರ ಬ್ಯಾಟ್ಸ್‌ಮನ್‌ಗಳ ಎಲೈಟ್‌ ಕ್ಲಬ್‌ ಗೆ ಸೇರಿದ್ದಾರೆ.
ಶುಕ್ರವಾರ ಫೈನಲ್ ಪಂದ್ಯದಲ್ಲಿ ಶಾರ್ದೂಲ್ ಠಾಕೂರ್ 109 ಎಸೆತಗಳಲ್ಲಿ 51 ರನ್ ಗಳಿಸಿದ್ದರು. ಇದರಲ್ಲಿ ಆರು ಬೌಂಡರಿ ಒಳಗೊಂಡಿತ್ತು. ಅಲ್ಲದೆ ರಹಾನೆ ಜೊತೆ ಸೇರಿ ಏಳನೇ ವಿಕೆಟ್ ಗೆ 109 ರನ್ ಜೊತೆಯಾಟವಾಡಿದರು.
andolanait

Recent Posts

ಕೆಆರ್‌ಎಸ್‌ ಜಲಾಶಯಕ್ಕೆ ಮತ್ತಷ್ಟು ಹೆಚ್ಚಾದ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…

2 hours ago

ಓದುಗರ ಪತ್ರ: ಮ್ಯಾನ್‌ಹೋಲ್ ಸರಿಪಡಿಸಿ

ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್‌ನಿಂದ ಹೊಲಸು ನೀರು…

7 hours ago

ಓದುಗರ ಪತ್ರ: ಎಚ್೧ಎನ್೧ ಮುನ್ನೆಚ್ಚರಿಕೆ ಇರಲಿ

ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…

7 hours ago

ಓದುಗರ ಪತ್ರ: ಭಲೆ ದರ್ಶನ್…ಭಲೆ ಭಲೆ…

ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…

7 hours ago

ಪೊಲೀಸ್ ಆಪ್‌ಗೆ ಖಾಸಗಿ ಸಿಸಿಟಿವಿ ಸೇರ್ಪಡೆ

ಎಚ್.ಎಸ್.ದಿನೇಶ್‌ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…

7 hours ago

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

10 hours ago