ಕ್ರೀಡೆ

WTC: ಬೋನಸ್‌ ಪಾಯಿಂಟ್‌ ಜಾರಿಗೆ ಐಸಿಸಿ ಚಿಂತನೆ

ನವದೆಹಲಿ: ಮುಂದಿನ ವಿಶ್ವ ಟೆಸ್ಟ್‌ ಚಾಂಪಿಯನ್‌ಷಿಪ್‌ ವೇಳೆ ಬೋನಸ್‌ ಪಾಯಿಂಟ್‌ ವ್ಯವಸ್ಥೆ ಅಳವಡಿಸಲು ಅಂತರಾಷ್ಟ್ರೀಯ ಕ್ರಿಕೆಟ್‌ ಸಮಿತಿ (ಐಸಿಸಿ) ಚಿಂತನೆ ನಡೆಸುತ್ತಿದೆ.

ಈಗ ಚಾಲ್ತಿಯಲ್ಲಿರುವ ನಿಯಮಗಳ ಪ್ರಕಾರ ಅತ್ಯಲ್ಪ ಅಂತರದಿಂದ ಅಥವಾ ಇನ್ನಿಂಗ್ಸ್‌ ಅಂತರದಿಂದ ಗೆಲ್ಲುವ ತಂಡಕ್ಕೆ 12 ಪಾಯಿಂಟ್‌. ಟೈ ಆದರಲ್ಲಿ 6 ಪಾಯಿಂಟ್‌ ಹಾಗೂ ಡ್ರಾ ಆದಲ್ಲಿ ತಂಡಗಳು ತಲಾ 4 ಪಾಯಿಂಟ್‌ ಪಡೆಯುತ್ತವೆ.

ಐಸಿಸಿಯಿ ಈ ನಿಯಮಗಳಲ್ಲಿ ಬದಲಾವಣೆ ತರುವ ಸಾಧ್ಯತೆ ಇದೆ. ಇದರನ್ವಯ ಇನ್ನಿಂಗ್ಸ್‌ ಗೆಲುವು ಅಥವಾ ದೊಡ್ಡ ಅಂತರದಿಂದ ಗೆಲ್ಲುವ ತಂಡಕ್ಕೆ ಬೋನಸ್‌ ಪಾಯಿಂಟ್‌ ನೀಡುವ ವಿಷಯ ಪರಿಗಣನೆಯಲ್ಲಿದೆ ಎಂದು ಟೆಲಿಗ್ರಾಫ್‌ ವರದಿ ಮಾಡಿದೆ.

ಪ್ರಬಲ ತಂಡಗಳಾದ ಭಾರತ, ಆಸ್ಟ್ರೇಲಿಯಾ, ಇಂಗ್ಲೆಂಡ್‌ ಇನ್ನಿತರ ತಂಡಗಳ ವಿರುದ್ಧ ಗೆಲುವು ಸಾಧಿಸಿದಾಗ ಹೆಚ್ಚಿನ ಅಂಕ ನೀಡಬೇಕು ಎಂದು ಹಲವರು ಅಭಿಪ್ರಾಯ ನೀಡಿದ್ದಾರೆ.

ಇದು ಒಳ್ಳೆಯ ನಿಲುವು ಆಗಲಿದೆ. ಈ ವ್ಯವಸ್ಥೆ ಜಾರಿಯಿಂದ ಕುತೂಹಲಕರ ಪಂದ್ಯಗಳನ್ನು ನಿರೀಕ್ಷಿಸಬಹುದು ಎಂದು ಭಾರತ ತಂಡದ ಮಾಜಿ ಆಟಗಾರರೊಬ್ಬರು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಗಾಣಾಳು ಜಲಪಾತದಲ್ಲಿ ಈಜಲು ಹೋದ ಯುವಕ ಸಾವು

ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…

8 mins ago

ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

34 mins ago

ಶೀಘ್ರದಲ್ಲೇ ಬಸ್‌ ಪ್ರಯಾಣ ದರ ಹೆಚ್ಚಳ?

ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…

55 mins ago

ಎರಡೇ ವರ್ಷಕ್ಕೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ರಾಜೀನಾಮೆ

ಲಂಡನ್:‌ ನಿರೀಕ್ಷೆಯಂತೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್‌ ಪಕ್ಷದೊಳಗೆ…

2 hours ago

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಟಿ.ನರಸೀಪುರ: ಡೆತ್‌ನೋಟ್‌ ಬರೆದಿಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಹಳೇಕೆಂಪಯ್ಯನಹುಂಡಿ ಗ್ರಾಮದಲ್ಲಿ…

2 hours ago

ಬಿಇಒಗಳು ಪ್ರಯಾಣಿಸುತ್ತಿದ್ದ ಕಾರು ಅಪಘಾತ : ಓರ್ವ ಸಾವು, ಹಲವರು ಗಂಭೀರ

ಮದ್ದೂರು : ಮೈಸೂರು ಜಿಲ್ಲೆಯ ಬ್ಲಾಕ್ ಶಿಕ್ಷಣಾಧಿಕಾರಿಗಳು (ಬಿಇಒ) ಪ್ರಯಾಣಿಸುತ್ತಿದ್ದ ವಾಹನ ಅಪಘಾತದಲ್ಲಿ ಕಾರು ಚಾಲಕ ಮೃತಪಟ್ಟಿದ್ದಾರೆ. ಮದ್ದೂರು ಸಮೀಪದ…

3 hours ago