ಕ್ರೀಡೆ

WWE ಸ್ಟಾರ್, ಮಾಜಿ ವಿಶ್ವ ಚಾಂಪಿಯನ್ ಬ್ರೇ ವ್ಯಾಟ್ ನಿಧನ

ನ್ಯೂಯಾರ್ಕ್: ವರ್ಲ್ಡ್ ರೆಸ್ಲಿಂಗ್ ಎಂಟರ್‌ಟೈನ್‌ಮೆಂಟ್ (WWE) ಸ್ಟಾರ್ ಬ್ರೇ ವ್ಯಾಟ್ ಗುರುವಾರ ನಿಧನರಾದರು ಎಂದು ಕಂಪನಿಯ ಸಿಸಿಒ ಪಾಲ್ “ಟ್ರಿಪಲ್ ಎಚ್” ಲೆವೆಸ್ಕ್ ಸಾಮಾಜಿಕ ಮಾಧ್ಯಮದಲ್ಲಿ ಘೋಷಿಸಿದರು.

36 ವರ್ಷದ ಬ್ರೇ ವ್ಯಾಟ್ ಅವರು ಹೃದಯಾಘಾತದಿಂದ ನಿಧನರಾದರು ಎಂದು ವರದಿಯಾಗಿದೆ.

“ಡಬ್ಲ್ಯೂ ಡಬ್ಲ್ಯೂಇ ಹಾಲ್ ಆಫ್ ಫೇಮರ್ ಮೈಕ್ ರೊಟುಂಡಾ ಅವರಿಂದ ಇದೀಗ ಕರೆ ಬಂದಿದೆ, ಅವರು ನಮ್ಮ ಡಬ್ಲ್ಯೂ ಡಬ್ಲ್ಯೂಇ ಕುಟುಂಬದಲ್ಲಿ ಬ್ರೇ ವ್ಯಾಟ್ ಎಂದು ಕರೆಯಲ್ಪಡುವ ವಿಂಡಮ್ ರೊಟುಂಡಾ ಅವರು ಇಂದು ಮುಂಜಾನೆ ಅನಿರೀಕ್ಷಿತವಾಗಿ ನಿಧನರಾದರು ಎಂಬ ದುರಂತ ಸುದ್ದಿಯನ್ನು ನಮಗೆ ತಿಳಿಸಿದರು. ನಮ್ಮ ಪ್ರಾರ್ಥನೆಗಳು ಅವರ ಕುಟುಂಬದೊಂದಿಗೆ ಇದೆ” ಎಂದು ತ್ರಿಪಲ್ ಎಚ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಇಎಸ್‌ಪಿಎನ್ ಪ್ರಕಾರ, ಬ್ರೇ ವ್ಯಾಟ್ ಅವರ ನಿಜವಾದ ಹೆಸರು ವಿಂಡ್‌ಹ್ಯಾಮ್ ರೋಟುಂಡಾ. ಅವರು ಬಹಿರಂಗಪಡಿಸದ ಆರೋಗ್ಯ ಸಮಸ್ಯೆಯೊಂದಿಗೆ ಬಳಲುತ್ತಿದ್ದ ಅವರು ಕಳೆದ ಹಲವಾರು ತಿಂಗಳುಗಳಿಂದ ಡಬ್ಲ್ಯೂ ಡಬ್ಲ್ಯೂಇ ನಲ್ಲಿ ಭಾಗವಹಿಸುತ್ತಿರಲಿಲ್ಲ. ಅವರು 2009 ರಿಂದ ಡಬ್ಲ್ಯೂ ಡಬ್ಲ್ಯೂಇ ನೊಂದಿಗೆ ಇದ್ದರು. 2021 ಮತ್ತು 2022ರಲ್ಲಿ ಸಕ್ರಿಯರಾಗಿರದ ರೊಟುಂಡಾ ಕಳೆದ ಸೆಪ್ಟೆಂಬರ್‌ ನಲ್ಲಿ ಡಬ್ಲ್ಯೂ ಡಬ್ಲ್ಯೂಇ ಗೆ ವಾಪಸಾದರು.

andolanait

Recent Posts

ಮೇಕೆದಾಟು ಯೋಜನೆ ತ್ವರಿತ ಅನುಷ್ಠಾನಕ್ಕೆ KERS ನಿರ್ದೇಶಕ ನೇತೃತ್ವದಲ್ಲಿ ತಂಡ ರಚನೆ

ಬೆಂಗಳೂರು: ಸುಪ್ರೀಂಕೋರ್ಟ್‌ ತೀರ್ಪು ಬೆನ್ನಲ್ಲೇ ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕರ್ನಾಟಕ ಇಂಜಿನಿಯರಿಂಗ್‌ ಸಂಶೋಧನಾ ಕೇಂದ್ರ ನಿರ್ದೇಶಕರ…

8 mins ago

ಪಾರಂಪರಿಕ ನಗರ ಅಭಿವೃದ್ಧಿಗೆ ಕಾನೂನು ರೂಪಿಸಿ: ಸಂಸತ್‌ನಲ್ಲಿ ಸಂಸದ ಯದುವೀರ್‌ ಒಡೆಯರ್‌ ಆಗ್ರಹ

ನವದೆಹಲಿ: ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ದೇಶದಲ್ಲಿರುವ ಪಾರಂಪರಿಕ ನಗರಗಳ ಅಭಿವೃದ್ಧಿಗೆ ಪೂರಕವಾದ ಕಾನೂನು ಚೌಕಟ್ಟು ರೂಪಿಸಲು ನಗರಾಭಿವೃದ್ಧಿ ಸಚಿವಾಲಯ…

26 mins ago

ನನ್ನನ್ನು ಸಿಎಂ ಮಾಡುವುದಾದರೆ ಬಿಜೆಪಿಗೆ ವಾಪಸ್‌ ಹೋಗುತ್ತೇನೆ: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌

ಬೆಳಗಾವಿ: ನನ್ನನ್ನು ಸಿಎಂ ಮಾಡುವುದಾದರೆ ಮಾತ್ರ ನಾನು ಬಿಜೆಪಿಗೆ ವಾಪಸ್‌ ಹೋಗುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌…

46 mins ago

ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನಿಂದ ಹಿಟ್‌ ಅಂಡ್‌ ರನ್:‌ ಸವಾರ ಸಾವು

ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್‌ ಸವಾರ ಸಾವನ್ನಪ್ಪಿರುವ…

2 hours ago

ಯೂನಿಟಿ ಮಾಲ್‌ ನಿರ್ಮಾಣಕ್ಕೆ ತಡೆ ವಿಚಾರ: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮಾಧ್ಯಮ ಹೇಳಿಕೆ ಬಿಡುಗಡೆ

ಮೈಸೂರು: ಯೂನಿಟಿ ಮಾಲ್‌ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ…

2 hours ago

ಬೆಳಗಾವಿ ಅಧಿವೇಶನದ ಬಳಿಕ ಡಿಕೆಶಿ ಸಿಎಂ ಆಗುತ್ತಾರೆ: ಶಾಸಕ ಇಕ್ಬಾಲ್‌ ಹುಸೇನ್‌

ಬೆಳಗಾವಿ: ಬೆಳಗಾವಿ ಅಧಿವೇಶನದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

2 hours ago