ಬೆಂಗಳೂರು : ಸಂಪೂರ್ಣವಾಗಿ ತವರಿನ ಅಂಗಣದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಗದಿರುವ ಬಗ್ಗೆ ಟೀಮ್ ಇಂಡಿಯಾದ ಖ್ಯಾತ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಕೊನೆಗೂ ಮೌನ ಮುರಿದಿದ್ದಾರೆ. ಯುಎಇಯಲ್ಲಿ ನಡೆದಿದ್ದ 2021ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ತಂಡಕ್ಕೆ ಆಯ್ಕೆ ಆಗುವಲ್ಲಿ ವಿಫಲರಾಗಿದ್ದ ಲೆಗ್ ಸ್ಪಿನ್ನರ್, 2022ರ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದರೂ ಒಂದೇ ಒಂದು ಪಂದ್ಯ ಆಡುವ ಅವಕಾಶ ಸಿಕ್ಕಿರಲಿಲ್ಲ. ಈಗ 2023ನೇ ಸಾಲಿನ ಒಡಿಐ ವಿಶ್ವಕಪ್ ಟೂರ್ನಿಯಲ್ಲೂ ಸ್ಥಾನ ಸಿಗದಿರುವ ಬಗ್ಗೆ ಚಹಲ್ ಬೇಸರ ವ್ಯಕ್ತಪಡಿಸಿದ್ದಾರೆ.
ತಂಡದಲ್ಲಿ ಸ್ಥಾನ ಸಿಗದಿರುವುದು ನೋವು ತಂದಿದೆ
“ತಂಡದಲ್ಲಿ ಸ್ಥಾನ ಸಿಗದಿರುವುದು ಸಣ್ಣ ಪ್ರಮಾಣದ ನೋವು ತಂದಿದೆ. ಆದರೆ ನನ್ನ ಜೀವನದ ಮುಖ್ಯ ಗುರಿ ಕ್ರಿಕೆಟ್ ಮೈದಾನದಲ್ಲಿ ಮುಂದೆ ಸಾಗುವುದಾಗಿದೆ. ಅದೇ ಕೆಲಸವನ್ನು ನಾನು ಮಾಡಲು ಹೊರಟಿದ್ದೇನೆ. ನಾನು 3 ವಿಶ್ವಕಪ್ ತಂಡದಲ್ಲಿ ಸ್ಥಾನ ಕಳೆದುಕೊಂಡಿದ್ದೇನೆ,” ಎಂದು ನಗುತ್ತಲೇ ಚಹಲ್ ತಿಳಿಸಿದ್ದಾರೆ.
“ನನಗೆ ಮನೆಯಲ್ಲಿ ಸುಮ್ಮನೆ ಕುಳಿತುಕೊಳ್ಳಲು ಆಗುವುದಿಲ್ಲ. ಆದ್ದರಿಂದಲೇ ನಾನು ಇಲ್ಲಿಗೆ (ಕೆಂಟ್) ಬಂದಿದ್ದೇನೆ. ನಾನು ಯಾವಾಗಲೂ ಎಲ್ಲಾದರೂ , ಹೇಗಾದರೂ ಕ್ರಿಕೆಟ್ ಆಡಲು ಬಯಸುತ್ತೇನೆ,” ಎಂದು ಯುಜಿ ಹೇಳಿದ್ದಾರೆ.
“ನಾನು ಕೌಂಟಿ ಕ್ರಿಕೆಟ್ ಆಡುವುದರ ಕುರಿತು ಕೋಚ್ ಗಳೊಂದಿಗೂ ಚರ್ಚಿಸಿದ್ದೇನೆ. ಯಾವುದೋ ಒಂದು ತಂಡದಲ್ಲಿ ಆಡುತ್ತಿರುವುದಕ್ಕೆ ನನಗೂ ಸಂತೋಷವಾಗುತ್ತಿದೆ. ಏಕೆಂದರೆ ನೀವು ನೆಟ್ಸ್ ನಲ್ಲಿ ಸಾಕಷ್ಟು ಅಭ್ಯಾಸ ಮಾಡಬಹುದು, ಆದರೆ ಪಂದ್ಯದ ಅಭ್ಯಾಸವೇ ಬೇರೆ ಅನುಭವ ನೀಡುತ್ತದೆ. ನಾನು ಪ್ರಥಮ ದರ್ಜೆಯಲ್ಲಿ ಉತ್ತಮ ಮಟ್ಟದಲ್ಲಿ ಆಡಲು ಅವಕಾಶ ಪಡೆದಿದ್ದೇನೆ. ಸಾಕಷ್ಟು ವಿಷಯಗಳನ್ನು ಇಲ್ಲಿ ಕಲಿತುಕೊಂಡಿದ್ದೇನೆ,” ಎಂದು ಚಹಲ್ ಹೇಳಿದ್ದಾರೆ.
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್ನಲ್ಲಿ ಶೆಡ್ವೊಂದರ ಮೇಲೆ ದಾಳಿ ನಡೆಸಿದ್ದ ಎನ್ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…
ಬೆಂಗಳೂರು : ಹಬ್ಬ-ಹರಿದಿನಗಳನ್ನೂ ಲೆಕ್ಕಿಸದೆ ಜನರಿಗಾಗಿ ದುಡಿಯುವ ಪೊಲೀಸರಿಗೆ ಕರ್ನಾಟಕ ಪೊಲೀಸ್ ಇಲಾಖೆ ಸಿಹಿಸುದ್ದಿ ನೀಡಿದ್ದು, ಜನ್ಮದಿನ ಮತ್ತು ವಿವಾಹ…