ಬೆಂಗಳೂರು : ಸಂಪೂರ್ಣವಾಗಿ ತವರಿನ ಅಂಗಣದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಗದಿರುವ ಬಗ್ಗೆ ಟೀಮ್ ಇಂಡಿಯಾದ ಖ್ಯಾತ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಕೊನೆಗೂ ಮೌನ ಮುರಿದಿದ್ದಾರೆ. ಯುಎಇಯಲ್ಲಿ ನಡೆದಿದ್ದ 2021ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ತಂಡಕ್ಕೆ ಆಯ್ಕೆ ಆಗುವಲ್ಲಿ ವಿಫಲರಾಗಿದ್ದ ಲೆಗ್ ಸ್ಪಿನ್ನರ್, 2022ರ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದರೂ ಒಂದೇ ಒಂದು ಪಂದ್ಯ ಆಡುವ ಅವಕಾಶ ಸಿಕ್ಕಿರಲಿಲ್ಲ. ಈಗ 2023ನೇ ಸಾಲಿನ ಒಡಿಐ ವಿಶ್ವಕಪ್ ಟೂರ್ನಿಯಲ್ಲೂ ಸ್ಥಾನ ಸಿಗದಿರುವ ಬಗ್ಗೆ ಚಹಲ್ ಬೇಸರ ವ್ಯಕ್ತಪಡಿಸಿದ್ದಾರೆ.
ತಂಡದಲ್ಲಿ ಸ್ಥಾನ ಸಿಗದಿರುವುದು ನೋವು ತಂದಿದೆ
“ತಂಡದಲ್ಲಿ ಸ್ಥಾನ ಸಿಗದಿರುವುದು ಸಣ್ಣ ಪ್ರಮಾಣದ ನೋವು ತಂದಿದೆ. ಆದರೆ ನನ್ನ ಜೀವನದ ಮುಖ್ಯ ಗುರಿ ಕ್ರಿಕೆಟ್ ಮೈದಾನದಲ್ಲಿ ಮುಂದೆ ಸಾಗುವುದಾಗಿದೆ. ಅದೇ ಕೆಲಸವನ್ನು ನಾನು ಮಾಡಲು ಹೊರಟಿದ್ದೇನೆ. ನಾನು 3 ವಿಶ್ವಕಪ್ ತಂಡದಲ್ಲಿ ಸ್ಥಾನ ಕಳೆದುಕೊಂಡಿದ್ದೇನೆ,” ಎಂದು ನಗುತ್ತಲೇ ಚಹಲ್ ತಿಳಿಸಿದ್ದಾರೆ.
“ನನಗೆ ಮನೆಯಲ್ಲಿ ಸುಮ್ಮನೆ ಕುಳಿತುಕೊಳ್ಳಲು ಆಗುವುದಿಲ್ಲ. ಆದ್ದರಿಂದಲೇ ನಾನು ಇಲ್ಲಿಗೆ (ಕೆಂಟ್) ಬಂದಿದ್ದೇನೆ. ನಾನು ಯಾವಾಗಲೂ ಎಲ್ಲಾದರೂ , ಹೇಗಾದರೂ ಕ್ರಿಕೆಟ್ ಆಡಲು ಬಯಸುತ್ತೇನೆ,” ಎಂದು ಯುಜಿ ಹೇಳಿದ್ದಾರೆ.
“ನಾನು ಕೌಂಟಿ ಕ್ರಿಕೆಟ್ ಆಡುವುದರ ಕುರಿತು ಕೋಚ್ ಗಳೊಂದಿಗೂ ಚರ್ಚಿಸಿದ್ದೇನೆ. ಯಾವುದೋ ಒಂದು ತಂಡದಲ್ಲಿ ಆಡುತ್ತಿರುವುದಕ್ಕೆ ನನಗೂ ಸಂತೋಷವಾಗುತ್ತಿದೆ. ಏಕೆಂದರೆ ನೀವು ನೆಟ್ಸ್ ನಲ್ಲಿ ಸಾಕಷ್ಟು ಅಭ್ಯಾಸ ಮಾಡಬಹುದು, ಆದರೆ ಪಂದ್ಯದ ಅಭ್ಯಾಸವೇ ಬೇರೆ ಅನುಭವ ನೀಡುತ್ತದೆ. ನಾನು ಪ್ರಥಮ ದರ್ಜೆಯಲ್ಲಿ ಉತ್ತಮ ಮಟ್ಟದಲ್ಲಿ ಆಡಲು ಅವಕಾಶ ಪಡೆದಿದ್ದೇನೆ. ಸಾಕಷ್ಟು ವಿಷಯಗಳನ್ನು ಇಲ್ಲಿ ಕಲಿತುಕೊಂಡಿದ್ದೇನೆ,” ಎಂದು ಚಹಲ್ ಹೇಳಿದ್ದಾರೆ.
ಮೈಸೂರು : ಡಿಸೆಂಬರ್ 21 ರಂದು ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. 5 ವರ್ಷದೊಳಗಿನ ಪ್ರತಿ ಮಗುವಿಗೆ…
ಬೆಳಗಾವಿ : ರಾಜ್ಯದ ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ…
ನವದೆಹಲಿ: ಮನೆಗೆಲಸದ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ…
ಬೆಳಗಾವಿ: ರಾಜ್ಯದಲ್ಲಿ 1517 ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕು ಅಮಾನವೀಯ ಘಟನೆ ನಡೆದಿದ್ದು, ಸಾಕು ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಕೊಂದು ವಿಕೃತಿ ಮೆರೆದಿರುವ…
ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್ ಕ್ಲಿಯರ್ ಆಗಿ ಹೇಳಿದೆ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…