ಕ್ರೀಡೆ

ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಗದ ಬಗ್ಗೆ ಮೌನ ಮುರಿದ ಯುಜ್ವೇಂದ್ರ ಚಹಲ್!

ಬೆಂಗಳೂರು : ಸಂಪೂರ್ಣವಾಗಿ ತವರಿನ ಅಂಗಣದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಗದಿರುವ ಬಗ್ಗೆ ಟೀಮ್ ಇಂಡಿಯಾದ ಖ್ಯಾತ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಕೊನೆಗೂ ಮೌನ ಮುರಿದಿದ್ದಾರೆ. ಯುಎಇಯಲ್ಲಿ ನಡೆದಿದ್ದ 2021ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ತಂಡಕ್ಕೆ ಆಯ್ಕೆ ಆಗುವಲ್ಲಿ ವಿಫಲರಾಗಿದ್ದ ಲೆಗ್ ಸ್ಪಿನ್ನರ್, 2022ರ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದರೂ ಒಂದೇ ಒಂದು ಪಂದ್ಯ ಆಡುವ ಅವಕಾಶ ಸಿಕ್ಕಿರಲಿಲ್ಲ.‌ ಈಗ 2023ನೇ ಸಾಲಿನ ಒಡಿಐ ವಿಶ್ವಕಪ್ ಟೂರ್ನಿಯಲ್ಲೂ ಸ್ಥಾನ ಸಿಗದಿರುವ ಬಗ್ಗೆ ಚಹಲ್ ಬೇಸರ ವ್ಯಕ್ತಪಡಿಸಿದ್ದಾರೆ.

ಇಂಗ್ಲೆಂಡ್ ನಲ್ಲಿ ಕೆಂಟ್ ಪರ ಕೌಂಟಿ ಕ್ರಿಕೆಟ್ ಆಡುತ್ತಿರುವ ಚಹಲ್, ವಿಸ್ಡನ್ ಜೊತೆ ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಗದಿರುವುದರ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ವಿಶ್ವಕಪ್ ತಂಡದಲ್ಲಿ 15 ಸದಸ್ಯರಿಗೆ ಮಾತ್ರ ಅವಕಾಶ: ಚಹಲ್
“ತಂಡದಲ್ಲಿ 15 ಸದಸ್ಯರಿಗೆ ಮಾತ್ರ ಸ್ಥಾನ ಕಲ್ಪಿಸಲು ಸಾಧ್ಯ ಎಂಬುದು ನನಗೆ ತುಂಬಾ ಚೆನ್ನಾಗಿ ತಿಳಿದಿದೆ. ಏಕೆಂದರೆ ಇದು ವಿಶ್ವಕಪ್ ಟೂರ್ನಿ. ಇಲ್ಲಿ 17 ರಿಂದ 18 ಮಂದಿಗೆ ಸ್ಥಾನ ನೀಡಲು ಆಗುವುದಿಲ್ಲ,” ಎಂದು ಚಹಲ್ ಹೇಳಿದ್ದಾರೆ.

ತಂಡದಲ್ಲಿ ಸ್ಥಾನ ಸಿಗದಿರುವುದು ನೋವು ತಂದಿದೆ
“ತಂಡದಲ್ಲಿ ಸ್ಥಾನ ಸಿಗದಿರುವುದು ಸಣ್ಣ ಪ್ರಮಾಣದ ನೋವು ತಂದಿದೆ. ಆದರೆ ನನ್ನ ಜೀವನದ ಮುಖ್ಯ ಗುರಿ ಕ್ರಿಕೆಟ್ ಮೈದಾನದಲ್ಲಿ ಮುಂದೆ ಸಾಗುವುದಾಗಿದೆ. ಅದೇ ಕೆಲಸವನ್ನು ನಾನು ಮಾಡಲು ಹೊರಟಿದ್ದೇನೆ. ನಾನು 3 ವಿಶ್ವಕಪ್ ತಂಡದಲ್ಲಿ ಸ್ಥಾನ ಕಳೆದುಕೊಂಡಿದ್ದೇನೆ,” ಎಂದು ನಗುತ್ತಲೇ ಚಹಲ್ ತಿಳಿಸಿದ್ದಾರೆ.

ಮನೆಯಲ್ಲಿ ಕುಳಿತುಕೊಳ್ಳಲು ಇಷ್ಟವಿಲ್ಲ
ರಾಜಸ್ಥಾನ್ ರಾಯಲ್ಸ್ ನ ಖ್ಯಾತ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಅವರು ಇಂಗ್ಲೆಂಡ್ ಪರ ಕೌಂಟಿ ಕ್ರಿಕೆಟ್ ಆಡುವ ಹಿಂದಿರುವ ಕಾರಣವನ್ನು ತಿಳಿಸಿದ್ದಾರೆ.

“ನನಗೆ ಮನೆಯಲ್ಲಿ ಸುಮ್ಮನೆ ಕುಳಿತುಕೊಳ್ಳಲು ಆಗುವುದಿಲ್ಲ. ಆದ್ದರಿಂದಲೇ ನಾನು ಇಲ್ಲಿಗೆ (ಕೆಂಟ್) ಬಂದಿದ್ದೇನೆ. ನಾನು ಯಾವಾಗಲೂ ಎಲ್ಲಾದರೂ , ಹೇಗಾದರೂ ಕ್ರಿಕೆಟ್ ಆಡಲು ಬಯಸುತ್ತೇನೆ,” ಎಂದು ಯುಜಿ ಹೇಳಿದ್ದಾರೆ.

ಟೆಸ್ಟ್ ಪಂದ್ಯ ಆಡಲು ಬಯಸುತ್ತೇನೆ
“ರೆಡ್ ಬಾಲ್ (ಟೆಸ್ಟ್) ನಲ್ಲಿ ಆಡಲು ನನಗೆ ಇಲ್ಲಿ ಅವಕಾಶ ಸಿಕ್ಕಿದೆ. ಇದೊಂದು ಉತ್ತಮ ಅನುಭವವಾಗಿದ್ದು, ಭಾರತ ತಂಡದ ಪರವಾಗಿಯೂ ಗಂಭೀರವಾಗಿ ರೆಡ್ ಬಾಲ್ ಕ್ರಿಕೆಟ್ ಆಡಲು ಬಯಸುತ್ತೇನೆ,” ಎಂದು ಚಹಲ್ ಹೇಳಿದ್ದಾರೆ.
ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾದಲ್ಲಿ ಸ್ಪಿನ್ನರ್ ಗಳ ರೂಪದಲ್ಲಿ ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್ ಹಾಗೂ ಕುಲ್ದೀಪ್ ಯಾದವ್ ಅವರಿಗೆ ಸ್ಥಾನ ಕಲ್ಪಿಸಲಾಗಿದೆ. ಆರ್.ಅಶ್ವಿನ್ ಗಾಯಗೊಂಡ ಅಕ್ಷರ್ ಪಟೇಲ್ ಬದಲಿಗೆ ತಂಡದಲ್ಲಿ ಸ್ಥಾನ ಪಡೆದಿದ್ದರೆ, ಕುಲ್ದೀಪ್ ಯಾದವ್ ತಂಡದ ಪ್ರಮುಖ ಅಸ್ತ್ರವಾಗಿದ್ದಾರೆ. ಆದರೆ ತಂಡದಲ್ಲಿ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಗೆ ಸ್ಥಾನ ಕಲ್ಪಿಸಬೇಕಿತ್ತು ಎಂದು ಹಲವು ಕ್ರಿಕೆಟ್ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

“ನಾನು ಕೌಂಟಿ ಕ್ರಿಕೆಟ್ ಆಡುವುದರ ಕುರಿತು ಕೋಚ್ ಗಳೊಂದಿಗೂ ಚರ್ಚಿಸಿದ್ದೇನೆ. ಯಾವುದೋ ಒಂದು ತಂಡದಲ್ಲಿ ಆಡುತ್ತಿರುವುದಕ್ಕೆ ನನಗೂ ಸಂತೋಷವಾಗುತ್ತಿದೆ. ಏಕೆಂದರೆ ನೀವು ನೆಟ್ಸ್ ನಲ್ಲಿ ಸಾಕಷ್ಟು ಅಭ್ಯಾಸ ಮಾಡಬಹುದು, ಆದರೆ ಪಂದ್ಯದ ಅಭ್ಯಾಸವೇ ಬೇರೆ ಅನುಭವ ನೀಡುತ್ತದೆ. ನಾನು ಪ್ರಥಮ ದರ್ಜೆಯಲ್ಲಿ ಉತ್ತಮ ಮಟ್ಟದಲ್ಲಿ ಆಡಲು ಅವಕಾಶ ಪಡೆದಿದ್ದೇನೆ. ಸಾಕಷ್ಟು ವಿಷಯಗಳನ್ನು ಇಲ್ಲಿ ಕಲಿತುಕೊಂಡಿದ್ದೇನೆ,” ಎಂದು ಚಹಲ್ ಹೇಳಿದ್ದಾರೆ.

andolanait

Recent Posts

ಸ್ವಚ್ಛ ನಗರಿಯ ಕೊಳಚೆ ಮುಖ

ಮೋರಿ ವಾಸನೆಯಿಂದ ಕುರುಬಾರಹಳ್ಳಿ ವಾಸಿಗಳ ಪರಿತಾಪ ಕೆ.ಎಸ್.ಚಂದ್ರಶೇಖರ್ ಮೂರ್ತಿ ಮೈಸೂರು : ರಸ್ತೆಯಲ್ಲಿ ಕಿರಿದಾದ ಮೋರಿಗಳು, ಒಳಚರಂಡಿ ನೀರು ಮೋರಿಗಳಲ್ಲಿ…

2 mins ago

ಆದಿತ್ಯ ಬಿರ್ಲಾ ಒಕ್ಕೂಟದ ತೆಕ್ಕೆಗೆ ಆರ್‌ಸಿಬಿ : 16,706 ಕೋಟಿಗೆ ಖರೀದಿ

ಬೆಂಗಳೂರು : ಐಪಿಎಲ್ 2025ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿಯು ಬರೋಬ್ಬರಿ 16,706 ಕೋಟಿ ಮೊತ್ತಕ್ಕೆ ಮಾರಾಟವಾಗುವ…

8 mins ago

ಕಾಂಗ್ರೆಸ್‌ ವರಿಷ್ಠೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ಹೊಸದಿಲ್ಲಿ : ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತೆ ಅಸ್ವಸ್ಥರಾಗಿದ್ದು, ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ…

23 mins ago

ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…

11 hours ago

ಗುಂಡ್ಲುಪೇಟೆ: ಮದ್ದೂರು ವಲಯದಲ್ಲಿ ಮೃತ ಹುಲಿ ಕಳೇಬರ ಪತ್ತೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ‌ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…

11 hours ago

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…

14 hours ago