ಕ್ರೀಡೆ

ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಗದ ಬಗ್ಗೆ ಮೌನ ಮುರಿದ ಯುಜ್ವೇಂದ್ರ ಚಹಲ್!

ಬೆಂಗಳೂರು : ಸಂಪೂರ್ಣವಾಗಿ ತವರಿನ ಅಂಗಣದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಗದಿರುವ ಬಗ್ಗೆ ಟೀಮ್ ಇಂಡಿಯಾದ ಖ್ಯಾತ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಕೊನೆಗೂ ಮೌನ ಮುರಿದಿದ್ದಾರೆ. ಯುಎಇಯಲ್ಲಿ ನಡೆದಿದ್ದ 2021ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ತಂಡಕ್ಕೆ ಆಯ್ಕೆ ಆಗುವಲ್ಲಿ ವಿಫಲರಾಗಿದ್ದ ಲೆಗ್ ಸ್ಪಿನ್ನರ್, 2022ರ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದರೂ ಒಂದೇ ಒಂದು ಪಂದ್ಯ ಆಡುವ ಅವಕಾಶ ಸಿಕ್ಕಿರಲಿಲ್ಲ.‌ ಈಗ 2023ನೇ ಸಾಲಿನ ಒಡಿಐ ವಿಶ್ವಕಪ್ ಟೂರ್ನಿಯಲ್ಲೂ ಸ್ಥಾನ ಸಿಗದಿರುವ ಬಗ್ಗೆ ಚಹಲ್ ಬೇಸರ ವ್ಯಕ್ತಪಡಿಸಿದ್ದಾರೆ.

ಇಂಗ್ಲೆಂಡ್ ನಲ್ಲಿ ಕೆಂಟ್ ಪರ ಕೌಂಟಿ ಕ್ರಿಕೆಟ್ ಆಡುತ್ತಿರುವ ಚಹಲ್, ವಿಸ್ಡನ್ ಜೊತೆ ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಗದಿರುವುದರ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ವಿಶ್ವಕಪ್ ತಂಡದಲ್ಲಿ 15 ಸದಸ್ಯರಿಗೆ ಮಾತ್ರ ಅವಕಾಶ: ಚಹಲ್
“ತಂಡದಲ್ಲಿ 15 ಸದಸ್ಯರಿಗೆ ಮಾತ್ರ ಸ್ಥಾನ ಕಲ್ಪಿಸಲು ಸಾಧ್ಯ ಎಂಬುದು ನನಗೆ ತುಂಬಾ ಚೆನ್ನಾಗಿ ತಿಳಿದಿದೆ. ಏಕೆಂದರೆ ಇದು ವಿಶ್ವಕಪ್ ಟೂರ್ನಿ. ಇಲ್ಲಿ 17 ರಿಂದ 18 ಮಂದಿಗೆ ಸ್ಥಾನ ನೀಡಲು ಆಗುವುದಿಲ್ಲ,” ಎಂದು ಚಹಲ್ ಹೇಳಿದ್ದಾರೆ.

ತಂಡದಲ್ಲಿ ಸ್ಥಾನ ಸಿಗದಿರುವುದು ನೋವು ತಂದಿದೆ
“ತಂಡದಲ್ಲಿ ಸ್ಥಾನ ಸಿಗದಿರುವುದು ಸಣ್ಣ ಪ್ರಮಾಣದ ನೋವು ತಂದಿದೆ. ಆದರೆ ನನ್ನ ಜೀವನದ ಮುಖ್ಯ ಗುರಿ ಕ್ರಿಕೆಟ್ ಮೈದಾನದಲ್ಲಿ ಮುಂದೆ ಸಾಗುವುದಾಗಿದೆ. ಅದೇ ಕೆಲಸವನ್ನು ನಾನು ಮಾಡಲು ಹೊರಟಿದ್ದೇನೆ. ನಾನು 3 ವಿಶ್ವಕಪ್ ತಂಡದಲ್ಲಿ ಸ್ಥಾನ ಕಳೆದುಕೊಂಡಿದ್ದೇನೆ,” ಎಂದು ನಗುತ್ತಲೇ ಚಹಲ್ ತಿಳಿಸಿದ್ದಾರೆ.

ಮನೆಯಲ್ಲಿ ಕುಳಿತುಕೊಳ್ಳಲು ಇಷ್ಟವಿಲ್ಲ
ರಾಜಸ್ಥಾನ್ ರಾಯಲ್ಸ್ ನ ಖ್ಯಾತ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಅವರು ಇಂಗ್ಲೆಂಡ್ ಪರ ಕೌಂಟಿ ಕ್ರಿಕೆಟ್ ಆಡುವ ಹಿಂದಿರುವ ಕಾರಣವನ್ನು ತಿಳಿಸಿದ್ದಾರೆ.

“ನನಗೆ ಮನೆಯಲ್ಲಿ ಸುಮ್ಮನೆ ಕುಳಿತುಕೊಳ್ಳಲು ಆಗುವುದಿಲ್ಲ. ಆದ್ದರಿಂದಲೇ ನಾನು ಇಲ್ಲಿಗೆ (ಕೆಂಟ್) ಬಂದಿದ್ದೇನೆ. ನಾನು ಯಾವಾಗಲೂ ಎಲ್ಲಾದರೂ , ಹೇಗಾದರೂ ಕ್ರಿಕೆಟ್ ಆಡಲು ಬಯಸುತ್ತೇನೆ,” ಎಂದು ಯುಜಿ ಹೇಳಿದ್ದಾರೆ.

ಟೆಸ್ಟ್ ಪಂದ್ಯ ಆಡಲು ಬಯಸುತ್ತೇನೆ
“ರೆಡ್ ಬಾಲ್ (ಟೆಸ್ಟ್) ನಲ್ಲಿ ಆಡಲು ನನಗೆ ಇಲ್ಲಿ ಅವಕಾಶ ಸಿಕ್ಕಿದೆ. ಇದೊಂದು ಉತ್ತಮ ಅನುಭವವಾಗಿದ್ದು, ಭಾರತ ತಂಡದ ಪರವಾಗಿಯೂ ಗಂಭೀರವಾಗಿ ರೆಡ್ ಬಾಲ್ ಕ್ರಿಕೆಟ್ ಆಡಲು ಬಯಸುತ್ತೇನೆ,” ಎಂದು ಚಹಲ್ ಹೇಳಿದ್ದಾರೆ.
ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾದಲ್ಲಿ ಸ್ಪಿನ್ನರ್ ಗಳ ರೂಪದಲ್ಲಿ ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್ ಹಾಗೂ ಕುಲ್ದೀಪ್ ಯಾದವ್ ಅವರಿಗೆ ಸ್ಥಾನ ಕಲ್ಪಿಸಲಾಗಿದೆ. ಆರ್.ಅಶ್ವಿನ್ ಗಾಯಗೊಂಡ ಅಕ್ಷರ್ ಪಟೇಲ್ ಬದಲಿಗೆ ತಂಡದಲ್ಲಿ ಸ್ಥಾನ ಪಡೆದಿದ್ದರೆ, ಕುಲ್ದೀಪ್ ಯಾದವ್ ತಂಡದ ಪ್ರಮುಖ ಅಸ್ತ್ರವಾಗಿದ್ದಾರೆ. ಆದರೆ ತಂಡದಲ್ಲಿ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಗೆ ಸ್ಥಾನ ಕಲ್ಪಿಸಬೇಕಿತ್ತು ಎಂದು ಹಲವು ಕ್ರಿಕೆಟ್ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

“ನಾನು ಕೌಂಟಿ ಕ್ರಿಕೆಟ್ ಆಡುವುದರ ಕುರಿತು ಕೋಚ್ ಗಳೊಂದಿಗೂ ಚರ್ಚಿಸಿದ್ದೇನೆ. ಯಾವುದೋ ಒಂದು ತಂಡದಲ್ಲಿ ಆಡುತ್ತಿರುವುದಕ್ಕೆ ನನಗೂ ಸಂತೋಷವಾಗುತ್ತಿದೆ. ಏಕೆಂದರೆ ನೀವು ನೆಟ್ಸ್ ನಲ್ಲಿ ಸಾಕಷ್ಟು ಅಭ್ಯಾಸ ಮಾಡಬಹುದು, ಆದರೆ ಪಂದ್ಯದ ಅಭ್ಯಾಸವೇ ಬೇರೆ ಅನುಭವ ನೀಡುತ್ತದೆ. ನಾನು ಪ್ರಥಮ ದರ್ಜೆಯಲ್ಲಿ ಉತ್ತಮ ಮಟ್ಟದಲ್ಲಿ ಆಡಲು ಅವಕಾಶ ಪಡೆದಿದ್ದೇನೆ. ಸಾಕಷ್ಟು ವಿಷಯಗಳನ್ನು ಇಲ್ಲಿ ಕಲಿತುಕೊಂಡಿದ್ದೇನೆ,” ಎಂದು ಚಹಲ್ ಹೇಳಿದ್ದಾರೆ.

andolanait

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

3 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

5 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

6 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

8 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

11 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

11 hours ago