ಬೆಂಗಳೂರು : ಸಂಪೂರ್ಣವಾಗಿ ತವರಿನ ಅಂಗಣದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಗದಿರುವ ಬಗ್ಗೆ ಟೀಮ್ ಇಂಡಿಯಾದ ಖ್ಯಾತ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಕೊನೆಗೂ ಮೌನ ಮುರಿದಿದ್ದಾರೆ. ಯುಎಇಯಲ್ಲಿ ನಡೆದಿದ್ದ 2021ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ತಂಡಕ್ಕೆ ಆಯ್ಕೆ ಆಗುವಲ್ಲಿ ವಿಫಲರಾಗಿದ್ದ ಲೆಗ್ ಸ್ಪಿನ್ನರ್, 2022ರ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದರೂ ಒಂದೇ ಒಂದು ಪಂದ್ಯ ಆಡುವ ಅವಕಾಶ ಸಿಕ್ಕಿರಲಿಲ್ಲ. ಈಗ 2023ನೇ ಸಾಲಿನ ಒಡಿಐ ವಿಶ್ವಕಪ್ ಟೂರ್ನಿಯಲ್ಲೂ ಸ್ಥಾನ ಸಿಗದಿರುವ ಬಗ್ಗೆ ಚಹಲ್ ಬೇಸರ ವ್ಯಕ್ತಪಡಿಸಿದ್ದಾರೆ.
ತಂಡದಲ್ಲಿ ಸ್ಥಾನ ಸಿಗದಿರುವುದು ನೋವು ತಂದಿದೆ
“ತಂಡದಲ್ಲಿ ಸ್ಥಾನ ಸಿಗದಿರುವುದು ಸಣ್ಣ ಪ್ರಮಾಣದ ನೋವು ತಂದಿದೆ. ಆದರೆ ನನ್ನ ಜೀವನದ ಮುಖ್ಯ ಗುರಿ ಕ್ರಿಕೆಟ್ ಮೈದಾನದಲ್ಲಿ ಮುಂದೆ ಸಾಗುವುದಾಗಿದೆ. ಅದೇ ಕೆಲಸವನ್ನು ನಾನು ಮಾಡಲು ಹೊರಟಿದ್ದೇನೆ. ನಾನು 3 ವಿಶ್ವಕಪ್ ತಂಡದಲ್ಲಿ ಸ್ಥಾನ ಕಳೆದುಕೊಂಡಿದ್ದೇನೆ,” ಎಂದು ನಗುತ್ತಲೇ ಚಹಲ್ ತಿಳಿಸಿದ್ದಾರೆ.
“ನನಗೆ ಮನೆಯಲ್ಲಿ ಸುಮ್ಮನೆ ಕುಳಿತುಕೊಳ್ಳಲು ಆಗುವುದಿಲ್ಲ. ಆದ್ದರಿಂದಲೇ ನಾನು ಇಲ್ಲಿಗೆ (ಕೆಂಟ್) ಬಂದಿದ್ದೇನೆ. ನಾನು ಯಾವಾಗಲೂ ಎಲ್ಲಾದರೂ , ಹೇಗಾದರೂ ಕ್ರಿಕೆಟ್ ಆಡಲು ಬಯಸುತ್ತೇನೆ,” ಎಂದು ಯುಜಿ ಹೇಳಿದ್ದಾರೆ.
“ನಾನು ಕೌಂಟಿ ಕ್ರಿಕೆಟ್ ಆಡುವುದರ ಕುರಿತು ಕೋಚ್ ಗಳೊಂದಿಗೂ ಚರ್ಚಿಸಿದ್ದೇನೆ. ಯಾವುದೋ ಒಂದು ತಂಡದಲ್ಲಿ ಆಡುತ್ತಿರುವುದಕ್ಕೆ ನನಗೂ ಸಂತೋಷವಾಗುತ್ತಿದೆ. ಏಕೆಂದರೆ ನೀವು ನೆಟ್ಸ್ ನಲ್ಲಿ ಸಾಕಷ್ಟು ಅಭ್ಯಾಸ ಮಾಡಬಹುದು, ಆದರೆ ಪಂದ್ಯದ ಅಭ್ಯಾಸವೇ ಬೇರೆ ಅನುಭವ ನೀಡುತ್ತದೆ. ನಾನು ಪ್ರಥಮ ದರ್ಜೆಯಲ್ಲಿ ಉತ್ತಮ ಮಟ್ಟದಲ್ಲಿ ಆಡಲು ಅವಕಾಶ ಪಡೆದಿದ್ದೇನೆ. ಸಾಕಷ್ಟು ವಿಷಯಗಳನ್ನು ಇಲ್ಲಿ ಕಲಿತುಕೊಂಡಿದ್ದೇನೆ,” ಎಂದು ಚಹಲ್ ಹೇಳಿದ್ದಾರೆ.
ತುಮಕೂರು: 2023ರಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ಸರ್ಕಾರ ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ, 4ನೇ ವರ್ಷಕ್ಕೆ ಪಾದಾರ್ಪಣೆ…
ನವದೆಹಲಿ: ಬೀದಿ ನಾಯಿಗಳ ನಿಯಂತ್ರಣಕ್ಕೆ ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಲು ಆದೇಶಿಸಿದ್ದ ಸುಪ್ರೀಂಕೋರ್ಟ್ ತನ್ನ ಆದೇಶವನ್ನು ಹಿಂಪಡೆಯುವುದಿಲ್ಲ ಎಂದು ಹೇಳಿದೆ.…
ಕೊಡಗು: ಜಿಲ್ಲೆಯ ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಸ್ನಾನ ಮಾಡುವ ವೇಳೆ ಕಂಜನ್ ಆನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ…
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ ಸಾರಿಗೆ ಸಂಘಟನೆಗಳು ಮೇ.20ರಂದು ಕರೆ ನೀಡಿದ್ದ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ಅಂಕುಶ ಹಾಕಿದೆ.…
ಬೆಂಗಳೂರು: ಆನ್ಲೈನ್ ಮೂಲಕ ಔಷಧಿಗಳ ಖರೀದಿ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ನಾಳೆ ರಾಜ್ಯದಾದ್ಯಂತ ಮೆಡಿಕಲ್ ಶಾಪ್ಗಳು ಬಂದ್ ಆಗಲಿವೆ. ಅಖಿಲ…
ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…