ಬೆಂಗಳೂರು : ಸಂಪೂರ್ಣವಾಗಿ ತವರಿನ ಅಂಗಣದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಗದಿರುವ ಬಗ್ಗೆ ಟೀಮ್ ಇಂಡಿಯಾದ ಖ್ಯಾತ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಕೊನೆಗೂ ಮೌನ ಮುರಿದಿದ್ದಾರೆ. ಯುಎಇಯಲ್ಲಿ ನಡೆದಿದ್ದ 2021ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ತಂಡಕ್ಕೆ ಆಯ್ಕೆ ಆಗುವಲ್ಲಿ ವಿಫಲರಾಗಿದ್ದ ಲೆಗ್ ಸ್ಪಿನ್ನರ್, 2022ರ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದರೂ ಒಂದೇ ಒಂದು ಪಂದ್ಯ ಆಡುವ ಅವಕಾಶ ಸಿಕ್ಕಿರಲಿಲ್ಲ. ಈಗ 2023ನೇ ಸಾಲಿನ ಒಡಿಐ ವಿಶ್ವಕಪ್ ಟೂರ್ನಿಯಲ್ಲೂ ಸ್ಥಾನ ಸಿಗದಿರುವ ಬಗ್ಗೆ ಚಹಲ್ ಬೇಸರ ವ್ಯಕ್ತಪಡಿಸಿದ್ದಾರೆ.
ತಂಡದಲ್ಲಿ ಸ್ಥಾನ ಸಿಗದಿರುವುದು ನೋವು ತಂದಿದೆ
“ತಂಡದಲ್ಲಿ ಸ್ಥಾನ ಸಿಗದಿರುವುದು ಸಣ್ಣ ಪ್ರಮಾಣದ ನೋವು ತಂದಿದೆ. ಆದರೆ ನನ್ನ ಜೀವನದ ಮುಖ್ಯ ಗುರಿ ಕ್ರಿಕೆಟ್ ಮೈದಾನದಲ್ಲಿ ಮುಂದೆ ಸಾಗುವುದಾಗಿದೆ. ಅದೇ ಕೆಲಸವನ್ನು ನಾನು ಮಾಡಲು ಹೊರಟಿದ್ದೇನೆ. ನಾನು 3 ವಿಶ್ವಕಪ್ ತಂಡದಲ್ಲಿ ಸ್ಥಾನ ಕಳೆದುಕೊಂಡಿದ್ದೇನೆ,” ಎಂದು ನಗುತ್ತಲೇ ಚಹಲ್ ತಿಳಿಸಿದ್ದಾರೆ.
“ನನಗೆ ಮನೆಯಲ್ಲಿ ಸುಮ್ಮನೆ ಕುಳಿತುಕೊಳ್ಳಲು ಆಗುವುದಿಲ್ಲ. ಆದ್ದರಿಂದಲೇ ನಾನು ಇಲ್ಲಿಗೆ (ಕೆಂಟ್) ಬಂದಿದ್ದೇನೆ. ನಾನು ಯಾವಾಗಲೂ ಎಲ್ಲಾದರೂ , ಹೇಗಾದರೂ ಕ್ರಿಕೆಟ್ ಆಡಲು ಬಯಸುತ್ತೇನೆ,” ಎಂದು ಯುಜಿ ಹೇಳಿದ್ದಾರೆ.
“ನಾನು ಕೌಂಟಿ ಕ್ರಿಕೆಟ್ ಆಡುವುದರ ಕುರಿತು ಕೋಚ್ ಗಳೊಂದಿಗೂ ಚರ್ಚಿಸಿದ್ದೇನೆ. ಯಾವುದೋ ಒಂದು ತಂಡದಲ್ಲಿ ಆಡುತ್ತಿರುವುದಕ್ಕೆ ನನಗೂ ಸಂತೋಷವಾಗುತ್ತಿದೆ. ಏಕೆಂದರೆ ನೀವು ನೆಟ್ಸ್ ನಲ್ಲಿ ಸಾಕಷ್ಟು ಅಭ್ಯಾಸ ಮಾಡಬಹುದು, ಆದರೆ ಪಂದ್ಯದ ಅಭ್ಯಾಸವೇ ಬೇರೆ ಅನುಭವ ನೀಡುತ್ತದೆ. ನಾನು ಪ್ರಥಮ ದರ್ಜೆಯಲ್ಲಿ ಉತ್ತಮ ಮಟ್ಟದಲ್ಲಿ ಆಡಲು ಅವಕಾಶ ಪಡೆದಿದ್ದೇನೆ. ಸಾಕಷ್ಟು ವಿಷಯಗಳನ್ನು ಇಲ್ಲಿ ಕಲಿತುಕೊಂಡಿದ್ದೇನೆ,” ಎಂದು ಚಹಲ್ ಹೇಳಿದ್ದಾರೆ.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…