ಕೋಲಾರ : ಕನ್ನಡ ಪತ್ರಿಕೋದ್ಯಮದ ಅರ್ಧ ಶತಮಾನದ ಚರಿತ್ರೆಗೆ ಕೋಲಾರ ಪತ್ರಿಕೆ ಕನ್ನಡಿಯಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.
50 ವರ್ಷಪೂರೈಸಿದ ಕೋಲಾರ ಪತ್ರಿಕೆಯ ಸುವರ್ಣ ಸಂಭ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ತಮ್ಮ ಹಾಗೂ ಪತ್ರಿಕೆ ನಡುವಿನ ಭಾವನಾತ್ಮಕ ಸಂಬಂಧವನ್ನು ಹಂಚಿಕೊಂಡರು.
ಒಂದು ಪತ್ರಿಕೆ ಅರ್ಧ ಶತಮಾನ ಪೂರೈಸುವುದು ಎಂದರೆ ಅತ್ಯಂತ ದೊಡ್ಡ ತಪಸ್ಸು. 50 ವರ್ಷಗಳ ಸಮಾಜದ ಪರಿವರ್ತನೆಗೆ ಸಾಕ್ಷಿಯಾಗಿದೆ ಕೋಲಾರ ಪತ್ರಿಕೆ ಎಂದರು.
ಅಚ್ಚುಮೊಳೆಯಿಂದ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ವರೆಗೂ ಪತ್ರಿಕೋದ್ಯಮ ಸಾಗಿ ಬಂದ ಚಿರಿತ್ರೆಗೆ ಕೋಲಾರ ಪತ್ರಿಕೆ ಸಾಕ್ಷಿಯಾಗಿದೆ. ಈ ಅರ್ಧ ಶತಮಾನದಲ್ಲಿ ಕೋಲಾರ ಪತ್ರಿಕೆ ಮೂಲಕ ವೃತ್ತಿ ಬದುಕನ್ನು ಕಟ್ಟಿಕೊಂಡವರು ಹಲವು ಮಂದಿ ಇದ್ದಾರೆ. ಅವರಲ್ಲಿ ನಾನೂ ಒಬ್ಬ.
ಕೋಲಾರ ಪತ್ರಿಕೆಯಿಂದ ಅಕ್ಷರ ಸಂಸ್ಕೃತಿಗೆ ಎಂಟ್ರಿ ಆದವರು, ಈಗ ವಿಧಾನಸೌಧ ತಲುಪಿದ್ದಾರೆ. ರಾಜ್ಯ ಮಟ್ಟದ ಪತ್ರಿಕೆಗಳಿಗೆ ಹೋಗಿದ್ದಾರೆ. ನಾನು ಇವತ್ತು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರನಾಗಿದ್ದೇನೆ ಎಂದರೆ ಈ ಬೆಳವಣಿಗೆಯ ಮೊದಲ ಹೆಜ್ಹೆ ಶುರುವಾಗಿದ್ದು ಕೋಲಾರ ಪತ್ರಿಕೆಯಿಂದ. ನಾನು ಬೆಳೆದು ಬಂದ ಹಾದಿಯನ್ನು ಯಾವತ್ತೂ ಮರೆಯಬಾರದು ಎಂದು ಕೃತಜ್ಞತೆ ಸಲ್ಲಿಸಿದರು.
ಜಿಲ್ಲಾ ಪತ್ರಿಕೆಗಳ ಏಳು ಬೀಳು, ಸಾಧನೆ, ಸಂಘರ್ಷದ ಬಗ್ಗೆ ಮುಂದಿನ ದಿನಗಳಲ್ಲಿ ಪತ್ರಿಕೋದ್ಯಮದ ವಿದ್ಯಾರ್ಥಿಗಳು ಅಧ್ಯಯನ ನಡೆಸಿದರೆ, ಕೋಲಾರ ಪತ್ರಿಕೆ ಅಧ್ಯಯನಕ್ಕೆ , ಪಿ ಹೆಚ್ ಡಿ ಮಾಡುವವರಿಗೆ ಅತ್ಯಂತ ಯೋಗ್ಯವಾದ ವಿಷಯ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ಪತ್ರಿಕೆ ಶತಮಾನ ಪೂರೈಸಲಿ, ಪತ್ರಿಕೆಯ ಸಾಧನೆಯನ್ನು ಈ ಸಮಾಜ ಇನ್ನಷ್ಟು ಆತ್ಮೀಯತೆಯಿಂದ ಗುರುತಿಸಲಿ, ತನ್ನದಾಗಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದರು
ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…
ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…
ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್…
ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…
ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…
ಚೆನ್ನೈ : ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…