ರಾಜ್ಯ

ಕನ್ನಡ ಪತ್ರಿಕೋದ್ಯಮದ ಅರ್ಧ ಶತಮಾನದ ಚರಿತ್ರೆಗೆ ಕೋಲಾರ ಪತ್ರಿಕೆ ಕನ್ನಡಿಯಾಗಿದೆ : ಕೆ.ವಿ.ಪ್ರಭಾಕರ್

  • ನಾವು ಬೆಳೆದು ಬಂದ ಹಾದಿಯನ್ನು ಯಾವತ್ತೂ ಮರೆಯಬಾರದು

ಕೋಲಾರ : ಕನ್ನಡ ಪತ್ರಿಕೋದ್ಯಮದ ಅರ್ಧ ಶತಮಾನದ ಚರಿತ್ರೆಗೆ ಕೋಲಾರ ಪತ್ರಿಕೆ ಕನ್ನಡಿಯಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.

50 ವರ್ಷಪೂರೈಸಿದ ಕೋಲಾರ ಪತ್ರಿಕೆಯ ಸುವರ್ಣ ಸಂಭ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ತಮ್ಮ ಹಾಗೂ ಪತ್ರಿಕೆ ನಡುವಿನ ಭಾವನಾತ್ಮಕ ಸಂಬಂಧವನ್ನು ಹಂಚಿಕೊಂಡರು.

ಒಂದು ಪತ್ರಿಕೆ ಅರ್ಧ ಶತಮಾನ ಪೂರೈಸುವುದು ಎಂದರೆ ಅತ್ಯಂತ ದೊಡ್ಡ ತಪಸ್ಸು. 50 ವರ್ಷಗಳ ಸಮಾಜದ ಪರಿವರ್ತನೆಗೆ ಸಾಕ್ಷಿಯಾಗಿದೆ ಕೋಲಾರ ಪತ್ರಿಕೆ ಎಂದರು.

ಅಚ್ಚುಮೊಳೆಯಿಂದ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ವರೆಗೂ ಪತ್ರಿಕೋದ್ಯಮ ಸಾಗಿ ಬಂದ ಚಿರಿತ್ರೆಗೆ ಕೋಲಾರ ಪತ್ರಿಕೆ ಸಾಕ್ಷಿಯಾಗಿದೆ. ಈ ಅರ್ಧ ಶತಮಾನದಲ್ಲಿ ಕೋಲಾರ ಪತ್ರಿಕೆ ಮೂಲಕ ವೃತ್ತಿ ಬದುಕನ್ನು ಕಟ್ಟಿಕೊಂಡವರು ಹಲವು ಮಂದಿ ಇದ್ದಾರೆ. ಅವರಲ್ಲಿ ನಾನೂ ಒಬ್ಬ.

ಕೋಲಾರ ಪತ್ರಿಕೆಯಿಂದ ಅಕ್ಷರ ಸಂಸ್ಕೃತಿಗೆ ಎಂಟ್ರಿ ಆದವರು, ಈಗ ವಿಧಾನಸೌಧ ತಲುಪಿದ್ದಾರೆ. ರಾಜ್ಯ ಮಟ್ಟದ ಪತ್ರಿಕೆಗಳಿಗೆ ಹೋಗಿದ್ದಾರೆ. ನಾನು ಇವತ್ತು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರನಾಗಿದ್ದೇನೆ ಎಂದರೆ ಈ ಬೆಳವಣಿಗೆಯ ಮೊದಲ ಹೆಜ್ಹೆ ಶುರುವಾಗಿದ್ದು ಕೋಲಾರ ಪತ್ರಿಕೆಯಿಂದ. ನಾನು ಬೆಳೆದು ಬಂದ ಹಾದಿಯನ್ನು ಯಾವತ್ತೂ ಮರೆಯಬಾರದು ಎಂದು ಕೃತಜ್ಞತೆ ಸಲ್ಲಿಸಿದರು.

ಜಿಲ್ಲಾ ಪತ್ರಿಕೆಗಳ ಏಳು ಬೀಳು, ಸಾಧನೆ, ಸಂಘರ್ಷದ ಬಗ್ಗೆ ಮುಂದಿನ ದಿನಗಳಲ್ಲಿ ಪತ್ರಿಕೋದ್ಯಮದ ವಿದ್ಯಾರ್ಥಿಗಳು ಅಧ್ಯಯನ ನಡೆಸಿದರೆ, ಕೋಲಾರ ಪತ್ರಿಕೆ ಅಧ್ಯಯನಕ್ಕೆ , ಪಿ ಹೆಚ್ ಡಿ ಮಾಡುವವರಿಗೆ ಅತ್ಯಂತ ಯೋಗ್ಯವಾದ ವಿಷಯ ಎಂದು ಪ್ರಶಂಸೆ ವ್ಯಕ್ತಪಡಿಸಿದರು.‌

ಪತ್ರಿಕೆ ಶತಮಾನ ಪೂರೈಸಲಿ, ಪತ್ರಿಕೆಯ ಸಾಧನೆಯನ್ನು ಈ ಸಮಾಜ ಇನ್ನಷ್ಟು ಆತ್ಮೀಯತೆಯಿಂದ ಗುರುತಿಸಲಿ, ತನ್ನದಾಗಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದರು

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಕೊಡಗಿನ ಹೋಂಸ್ಟೇನಲ್ಲಿ ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಇಬ್ಬರನ್ನು ಬಂಧಿಸಲಾಗಿದೆ: ಶಾಸಕ ಪೊನ್ನಣ್ಣ ಮಾಹಿತಿ

ಬೆಂಗಳೂರು: ಕೊಡಗಿನ ಹೋಂ ಸ್ಟೇನಲ್ಲಿ ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಇಬ್ಬರ ಬಂಧನ ಆಗಿದೆ ಎಂದು…

12 mins ago

ಹರ ಹರ ಮಹಾದೇವ ಘೋಷಣೆಯೊಂದಿಗೆ ಚಾರ್‌ ಧಾಮ್‌ ಯಾತ್ರೆ ಆರಂಭ

ಉತ್ತರಾಖಂಡ್:‌ ಇಲ್ಲಿನ ಪವಿತ್ರ ಚಾರ್‌ ಧಾಮ್‌ ಯಾತ್ರೆ ಇಂದಿನಿಂದ ಅಧಿಕೃತವಾಗಿ ಪ್ರಾರಂಭವಾಗಿದೆ. ಭಕ್ತರ ದರ್ಶನಕ್ಕಾಗಿ ಕೇದಾರನಾಥ ದೇವಾಲಯದ ದ್ವಾರಗಳನ್ನು ಇಂದು…

42 mins ago

ಗುಡುಮಾದನಹಳ್ಳಿ ರೈತರ ಪರ ನಿಂತ ಶಾಸಕ ದರ್ಶನ್ ಪುಟ್ಟಣ್ಣಯ್ಯ

ಮೈಸೂರು: ಕೃಷಿ ಭೂಮಿಯಲ್ಲಿ ನಿಮ್ಹಾನ್ಸ್‌ ಆಸ್ಪತ್ರೆ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರು ರೈತರ ಪರ ನಿಂತಿದ್ದು,…

1 hour ago

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗದ ಮೆಟ್ಟಿಲೇರಿದ ಬಿಜೆಪಿ ನಿಯೋಗ

ನವದೆಹಲಿ: ಪ್ರಧಾನಿ ಮೋದಿ ಒಬ್ಬ ಭಯೋತ್ಪಾದಕ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಯನ್ನು ಖಂಡಿಸಿ ಬಿಜೆಪಿ ನಿಯೋಗ ಚುನಾವಣಾ…

1 hour ago

ದೆಹಲಿಗೆ 8 ಸಾವಿರ ಡಚ್ ಮ್ಯಾಟ್‌ ರವಾನೆ: ಸಿಎಂ ಸಿದ್ದರಾಮಯ್ಯ ಹಸಿರು ನಿಶಾನೆ

ಬೆಂಗಳೂರು: ಕರ್ನಾಟಕ ರಾಜ್ಯ ತೆಂಗಿನ ನಾರಿನ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಗ್ರಾಮೀಣ ಮಹಿಳೆಯರಿಂದ ತಯಾರಿಸಲ್ಪಟ್ಟ ಸುಮಾರು 8,000 ಡಚ್…

1 hour ago

ಹಾಸನ| 4 ವರ್ಷಗಳ ಬಳಿಕ ಚನ್ನಕೇಶವಸ್ವಾಮಿ ಮೂಲ ವಿಗ್ರಹ ಸ್ಪರ್ಶಿಸಿದ ಸೂರ್ಯ ರಶ್ಮಿ: ಭಕ್ತರ ಹರ್ಷೋದ್ಘಾರ

ಹಾಸನ: ವಿಶ್ವವಿಖ್ಯಾತ ಶ್ರೀ ಚನ್ನಕೇಶವಸ್ವಾಮಿ ಮೂಲ ವಿಗ್ರಹವನ್ನು ಸೂರ್ಯ ರಶ್ಮಿ 2021ರಲ್ಲಿ ಸ್ಪರ್ಶಿಸಿತ್ತು. ಅದಾದ ಬಳಿಕ ಇಂದು ಅಂದರೆ 4…

2 hours ago